
ನವದೆಹಲಿ(ಫೆ 02) ಬಜೆಟ್ ಮುಗಿದಿದೆ..ಚರ್ಚೆಗಳು ನಡೆಯುತ್ತಿವೆ.. ಎಲ್ಲ ಕಡೆ ತೈಲ ದರದ್ದೇ ಮಾತು. ಈ ನಡುವೆ ಬಿಜೆಪಿ ನಾಯಕರೇ ಆಗಿರುವ ಸುಬ್ರಹ್ಮಣಿಯನ್ ಸ್ವಾಮಿ ಕೇಂದ್ರ ಸರ್ಕಾರವನ್ನು ಕುಹಕವಾಡಿದ್ದಾರೆ.
ಸ್ವಾಮಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪೋಟೋ ವೈರಲ್ ಆಗುತ್ತಿದೆ. ಭಾರತ ಹಾಗೂ ನೆರೆ ರಾಷ್ಟ್ರಗಳಲ್ಲಿನ ಪೆಟ್ರೋಲ್ ದರ ಹೋಲಿಕೆ ಮಾಡಿದ್ದು ರಾಮಾಯಣವನ್ನು ಎಳೆದು ತಂದಿದ್ದಾರೆ.
'ರಾಮನ ಭಾರತದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 93 ರೂಪಾಯಿಗಳಾಗಿದೆ. ಸೀತೆಯ ನೇಪಾಳದಲ್ಲಿ ಪ್ರತಿ ಲೀಟರ್ ಗೆ 53 ರೂಪಾಯಿಗಳಾಗಿದ್ದರೆ ರಾವಣನ ಲಂಕೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 51 ರೂ.' ಎನ್ನುತ್ತ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಬಜೆಟ್ ಮಂಡನೆ ಮಾಡಿದ್ದ ಕೇಂದ್ರ ಸರ್ಕಾರ ಪೆಟ್ರೋಲ್ ಮೇಲೆ ಕೃಷಿ ಸೆಸ್ ವಿಧಿಸಿತ್ತು. ಬರುವ ಆದಾಯವನ್ನು ಕೃಷಿಗೆ ಸಂಬಂಧಿಸಿದ ಕೆಲಸಗಳಿಗೆ ಬಳಕೆ ಮಾಡಿಕೊಳ್ಳುವುದು ಆಲೋಚನೆ. ಆದರೆ ಈಗಾಗಲೇ 90 ರ ಗಡಿ ದಾಟಿರುವ ಪೆಟ್ರೋಲ್ ಮತ್ತಷ್ಟು ದುಬಾರಿಯಾಗಲಿದೆ ಎಂಬ ಅಂಶಕ್ಕೆ ಸೋಶಿಯಲ್ ಮೀಡಿಯಾದಲ್ಲಿಯೂ ವ್ಯಾಪಕ ಟೀಕೆಗಳು ಕೇಳಿಬರುತ್ತಲೆ ಇವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ