ನರೇಂದ್ರ ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ನಡೆ, ಸೇನೆಗೆ ಹಣಕಾಸು ಹೊಣೆ!

Published : Sep 07, 2021, 05:21 PM ISTUpdated : Sep 07, 2021, 05:26 PM IST
ನರೇಂದ್ರ ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ನಡೆ, ಸೇನೆಗೆ ಹಣಕಾಸು ಹೊಣೆ!

ಸಾರಾಂಶ

* ಸಶಸ್ತ್ರ ಪಡೆಗಳಿಗೆ ಹಣಕಾಸು ಅಧಿಕಾರವನ್ನು ನೀಡುವ ಆದೇಶ * ನರೇಂದ್ರ ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ನಡೆ * ಸೇನಾಪಡೆಗಳಿಗೆ ಖರೀದಿ ಹಾಗೂ ಹಣಕಾಸು ವಿಚಾರಗಳಿಗೆ ಸಂಬಂಧಿಸಿದಂತೆ ಮತ್ತಷ್ಟು ಸ್ವಾತಂತ್ರ್ಯ

ನವದೆಹಲಿ(ಸೆ.07): ನರೇಂದ್ರ ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕವೆನ್ನಬಹುದಾದ ನಡೆಯೊಂದರಲ್ಲಿ, ಸಶಸ್ತ್ರ ಪಡೆಗಳಿಗೆ ಮತ್ತಷ್ಟು ಅಧಿಕಾರವನ್ನು ನೀಡುವ ಆದೇಶವನ್ನು ಹೊರಡಿಸಲಾಗಿದೆ.

ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್, ಸಶಸ್ತ್ರ ಪಡೆಗಳಿಗೆ ಹಣಕಾಸು ಅಧಿಕಾರವನ್ನು ನೀಡುವ ಆದೇಶವನ್ನು ಹೊರಡಿಸಿದ್ದು, ಸೇನೆಗೆ ಮತ್ತಷ್ಟು ಬಲ ತುಂಬಿದ್ದಾರೆ.

ರಕ್ಷಣಾ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಹಾಗೂ   ಬಲಪಡಿಸುವ ನಿಟ್ಟಿನಲ್ಲಿ ಈ ಕ್ರಮ ಬಹಳ ಮಹತ್ವವಾದುದು ಎಂದು ವಿಶ್ಲೇಷಿಸಲಾಗಿದೆ.

ಚಿನ್ನದ ಹುಡುಗನಿಗೆ ರಕ್ಷಣಾ ಸಚಿವರಿಂದ ಸನ್ಮಾನ; ಕ್ರೀಡಾಂಗಣಕ್ಕೆ ನೀರಜ್ ಚೋಪ್ರಾ ಹೆಸರು!

ರಾಜನಾಥ್ ಸಿಂಗ್ ಹೊರಡಿಸಿರುವ 'Delegation of Financial Powers to Defence Services (DFPDS) 2021' ಆದೇಶದಲ್ಲಿ ಸೇನಾಪಡೆಗಳಿಗೆ ಖರೀದಿ ಹಾಗೂ ಹಣಕಾಸು ವಿಚಾರಗಳಿಗೆ ಸಂಬಂಧಿಸಿದಂತೆ ಮತ್ತಷ್ಟು ಸ್ವಾತಂತ್ರ್ಯ ನೀಡಲಾಗಿದೆ.  ಆ ಮೂಲಕ ಯೋಜನೆ, ಕಾರ್ಯನಿರ್ವಹಣೆ, ಸನ್ನದ್ಧತೆ, ಶಸ್ತ್ರಾಸ್ತ್ರ ಖರೀದಿ ಹಾಗೂ ಐಕ್ಯತೆ ಸಾಧಿಸಲು ಸಹಕಾರಿಯಾಗಲಿದೆ.

ತುರ್ತು ಸಂದರ್ಭದಲ್ಲಿ ತ್ವರಿತವಾಗಿ ಶಸ್ತ್ರಾಸ್ತ್ರ ಖರೀದಿಸಲು ಫೀಲ್ಡ್ ಕಮಾಂಡರ್‌ಗಳಿಗೆ ಅನುಕೂಲವಾಗುವಂತೆ ನಿಯಮಗಳನ್ನು ರೂಪಿಸಲಾಗಿದ್ದು, ಇದು ಸಂಪನ್ಮೂಲಗಳ ಉತ್ತಮ ರೀತಿಯಲ್ಲಿ ಬಳಕೆಗೆ ಪೂರಕವಾಗಿದೆ. 

'ತಾಲಿ​ಬಾನ್‌, ಪಾಕ್‌ಗೆ ಭಾರತ ಸೇನೆ ಎಚ್ಚರಿಕೆ, ನಮ್ಮ ತಂಟೆಗೆ ಬಂದರೆ ತಕ್ಕ ಶಾಸ್ತಿ!'

ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್,   ದೇಶದ ರಕ್ಷಣಾ  ವ್ಯವಸ್ಥೆಯನ್ನು ಬಲಪಡಿಸಲು ಹಾಗೂ ಸೌಕರ್ಯಗಳನ್ನು ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರ ಕಟಿಬದ್ಧವಾಗಿದೆ ಎಂದರು.

ಕಾರ್ಯವಿಧಾನದಲ್ಲಿ ವಿಳಂಬವನ್ನು ತಡೆಯಲು ಹಾಗೂ ಕಾರ್ಯಕ್ಷಮತೆ ಹೆಚ್ಚಿಸುವ ನಿಟ್ಟಿನಲ್ಲಿ  ಪ್ರಸ್ತುತ ನೀತಿ-ನಿಯಮಗಳನ್ನು ಪರಿಷ್ಕರಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!