ರಾಮಮಂದಿರ ಪ್ರಾಣಪ್ರತಿಷ್ಠೆ ನೆರವೇರಿಸಿದ ಅರ್ಚಕ ಲಕ್ಷ್ಮಿಕಾಂತ್ ದೀಕ್ಷಿತ್ ನಿಧನ, ಮೋದಿ ಸಂತಾಪ!

By Chethan KumarFirst Published Jun 22, 2024, 3:07 PM IST
Highlights

ಭವ್ಯ ರಾಮ ಮಂದಿರ ಪ್ರಾಣ ಪ್ರತಿಷ್ಠೆ ನರೆವೇರಿಸಿದ ಪ್ರಧಾನ ಅರ್ಚಕ ಲಕ್ಷ್ಮಿಕಾಂತ್ ದೀಕ್ಷಿತ್ ನಿಧನರಾಗಿದ್ದಾರೆ. ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಸಕಲ ಗೌರವಗಳೊಂದಿಗೆ ಮಣಿಕಾಂತ್ ಘಾಟ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
 

ಆಯೋಧ್ಯೆ(ಜೂ.22) ಬರೋಬ್ಬರಿ 500 ವರ್ಷಗಳ ಬಳಿಕ ನಿರ್ಮಾಣಗೊಂಡ ಆಯೋಧ್ಯೆ ಭವ್ಯ ರಾಮ ಮಂದಿರ ಪ್ರಾಣಪ್ರತಿಷ್ಠೆ ನೆರೆವೇರಿಸಿದ ಪ್ರಧಾನ ಅರ್ಚಕ ಲಕ್ಷ್ಮಿಕಾಂತ್ ದೀಕ್ಷಿತ್ ನಿಧನರಾಗಿದ್ದಾರೆ. 86 ವರ್ಷದ ಲಕ್ಷ್ಮಿಕಾಂತ್ ದೀಕ್ಷಿತ್ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲಿದ್ದರು. ಇಂದು(ಜೂ.22) ಬೆಳಗ್ಗೆ ಲಕ್ಷ್ಮಿಕಾಂತ್ ದೀಕ್ಷಿತ್ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಮಣಿಕಾಂತ್ ಘಾಟ್‌ನಲ್ಲಿ ಸಕಲ ಗೌರವಗೊಳಿಂದಿಗೆ ಲಕ್ಷ್ಮಿಕಾಂತ್ ದೀಕ್ಷಿತ್ ಅಂತ್ಯಕ್ರಿಯೆ ನಡೆಯಲಿದೆ.

ಜನವರಿ 22ರಂದು ರಾಮ ಮಂದಿರ ಪ್ರಾಣಪ್ರತಿಷ್ಠೆ ನಡೆದಿತ್ತು. ಪ್ರಧಾನಿ ನರೇಂದ್ರ ಮೋದಿ ಅಮೃತ ಹಸ್ತದ ಮೂಲಕದ ಬಾಲ ರಾಮ ಪ್ರಾಣಪ್ರತಿಷ್ಠೆ ನಡೆದಿತ್ತು. ಈ ಪ್ರಾಣಪ್ರತಿಷ್ಠೆಯಲ್ಲಿ ಪ್ರಧಾನ ಅರ್ಚಕರಾಗಿ ಲಕ್ಷ್ಮಿಕಾಂತ್ ದೀಕ್ಷಿತ್ ಕಾರ್ಯನಿರ್ವಹಿಸಿದ್ದರು. ಪ್ರಾಣಪ್ರತಿಷ್ಠೆಗೆ ಅರ್ಚಕರ ತಂಡ ಶ್ರದ್ಧಾ ಭಕ್ತಿಯಿಂದ ಪೂಜಾ ಕೈಂಕರ್ಯಗಳನ್ನು ನರೆವೆರಿಸಿತ್ತು. ಈ ಪೈಕಿ ದೀಕ್ಷಿತ್ ಪ್ರಧಾನ ಅರ್ಚಕರಾಗಿದ್ದರು.

Latest Videos

ಜಮ್ಮು-ಕಾಶ್ಮೀರದ 109 ವರ್ಷ ಹಳೆಯ ಶಿವ ದೇವಾಲಯಕ್ಕೆ ಬೆಂಕಿ

ಮೂಲತಃ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯವರಾಗಿರುವ ಲಕ್ಷ್ಮಿಕಾಂತ್ ದೀಕ್ಷಿತ್ ವಾರಣಸಿಯಲ್ಲಿ ನೆಲೆಸಿದ್ದಾರೆ. ಲಕ್ಷ್ಮಿಕಾಂತ್ ಪೋಷಕರು ಸೇರಿದಂತೆ ಕೆಲ ತಲೆಮಾರು ವಾರಣಾಸಿಯಲ್ಲಿ ನೆಲೆಗೊಂಡಿದೆ. ಲಕ್ಷ್ಮಿಕಾಂತ್ ದೀಕ್ಷಿತ್ ನಿಧನಕ್ಕೆ ಪ್ರಧಾನಿ ಮೋದಿ , ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಸೇರಿದಂತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಬೇಸರ ಹಾಗೂ ನಿರಾಶಾದಾಯಕ ಸುದ್ದಿ ಕೇಳಿ ನೋವಾಗಿದೆ. ಸಂಗ್ವೇದ ವಿದ್ಯಾಲಯದ ಋಗ್ವೇದ ಪಂಡಿತರು, ಅಚರ್ಕರಾಗಿರುವ ಲಕ್ಷ್ಮಿಕಾಂತ್ ದೀಕ್ಷಿತ್ ನಿಧನ ಸುದ್ದಿಯಿಂದ ನೋವಾಗಿದೆ. ದೀಕ್ಷಿತ್ ಜಿ ಕಾಶಿಯ ಪುನರಜ್ಜೀವನಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಕಾಶಿ ವಿಶ್ವನಾಥನ ಧಾಮ ಹಾಗೂ ಆಯೋಧ್ಯೋ ರಾಮ ಮಂದಿರ ಉದ್ಘಾಟನೆ ಹಾಗೂ ಪ್ರಾಣಪ್ರತಿಷ್ಠೆ ವೇಳೆ ದೀಕ್ಷಿತ್ ಜಿ ಮಾಗರ್ದರ್ಶನವನ್ನು ನಾನು ನೆನಪಿಸಿಕೊಳ್ಳುತ್ತೇನೆ. ಲಕ್ಷ್ಮಿಕಾಂತ್ ದೀಕ್ಷಿತ್ ನಿಧನ ಈ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

 

देश के मूर्धन्य विद्वान और साङ्गवेद विद्यालय के यजुर्वेदाध्यापक लक्ष्मीकान्त दीक्षित जी के निधन का दुःखद समाचार मिला। दीक्षित जी काशी की विद्वत् परंपरा के यशपुरुष थे। काशी विश्वनाथ धाम और राम मंदिर के लोकार्पण पर्व पर मुझे उनका सान्निध्य मिला। उनका निधन समाज के लिए अपूरणीय क्षति…

— Narendra Modi (@narendramodi)

 

ಕಾಶಿ ಧಾಮದ ಪಂಡಿತರು, ಆಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕರಾಗಿರುವ ಅಚಾರ್ಯ ಲಕ್ಷ್ಮಿಕಾಂತ್ ದೀಕ್ಷಿತ್ ನಿಧನ ಆಧ್ಯಾತ್ಮಿಕ ಹಾಗೂ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ. ಸಂಸ್ಕೃತ ಭಾಷೆ ಹಾಗೂ ಭಾರತೀಯ ಸಂಸ್ಕೃತಿ ಅಧ್ಯಯನ, ಯುವ ಸಮೂಹಕ್ಕೆ ಈ ಪರಂಪರೆ, ಸಂಸ್ಕೃತಿಯನ್ನು ತಲುಪಿಸುವ ಕಾರ್ಯ ಮಾಡಿದ ಆಚಾರ್ಯರು ಯಾವತ್ತಿಗೂ ನೆನಪಿನಲ್ಲಿರುತ್ತಾರೆ. ಭಗವಾನ್ ಶ್ರೀರಾಮ ಅವರ ಆತ್ಮಕ್ಕೆ ಶಾಂತಿ ಸಿಗಲು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ.

ಗರ್ಭಗುಡಿಯ ಬೆಂಕಿಯಿಂದ ಗಾಯಗೊಂಡಿದ್ದ ಅರ್ಚಕ ಸಾವು: ಉಜ್ಜಿಯಿನಿ ಮಹಾಕಾಲ ದೇಗುಲದಲ್ಲಿ ನಡೆದ 3ನೇ ದುರಂತವಿದು
 

click me!