ಕುಂಭಮೇಳ ಗದ್ದಲದ ನಡುವೆ ನಾಳೆ ಅಯೋಧ್ಯೆಯಲ್ಲಿ ರಾಮಮಂದಿರ ವಾರ್ಷಿಕೋತ್ಸವ, ಜನಸಾಮಾನ್ಯರಿಗೂ ಆಹ್ವಾನ

Published : Jan 10, 2025, 07:24 AM IST
ಕುಂಭಮೇಳ ಗದ್ದಲದ ನಡುವೆ ನಾಳೆ ಅಯೋಧ್ಯೆಯಲ್ಲಿ ರಾಮಮಂದಿರ ವಾರ್ಷಿಕೋತ್ಸವ, ಜನಸಾಮಾನ್ಯರಿಗೂ ಆಹ್ವಾನ

ಸಾರಾಂಶ

ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಗೊಂಡು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಜ.11ರಿಂದ ಜ.13ರವರೆಗೆ ಪ್ರಾಣಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ. ಈ ಸಲ ಗಣ್ಯ ವ್ಯಕ್ತಿಗಳ ಜತೆಗೆ ಜನಸಾಮಾನ್ಯರನ್ನೂ ಗುರುತಿಸಿ ಆಹ್ವಾನ ನೀಡಲಾಗಿದೆ. ಕಳೆದ ವರ್ಷ ಪ್ರಾಣಪ್ರತಿಷ್ಠೆಯಲ್ಲಿ ಭಾಗವಹಿಸಲು ಸಾಧ್ಯವಾಗದವರಿಗೂ ಈ ಬಾರಿ ಅವಕಾಶ ಕಲ್ಪಿಸಲಾಗಿದೆ.

ಪಿಟಿಐ ಅಯೋಧ್ಯೆ: ಅಯೋಧ್ಯೆಯ ರಾಮಲಲ್ಲಾನ ಮೂರ್ತಿ ಪ್ರತಿಷ್ಠಾಪನೆಗೊಂಡು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಜ.11ರಿಂದ ಜ.13ರವರೆಗೆ ಪ್ರಾಣಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ. ವಿಶೇಷವೆಂದರೆ ಈ ಸಲ ಗಣ್ಯ ವ್ಯಕ್ತಿಗಳ ಜತೆಗೆ ಜನಸಾಮಾನ್ಯರನ್ನೂ ಗುರುತಿಸಿ ಆಹ್ವಾನ ನೀಡಲಾಗಿದೆ.

ಕಳೆದ ವರ್ಷ ಜ.22ರಂದು ನಡೆದ ಐತಿಹಾಸಿಕ ಪ್ರಾಣಪ್ರತಿಷ್ಠಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕೆ ಸಾಧ್ಯವಾಗದ ಆಹ್ವಾನಿತ 110 ಗಣ್ಯರಿಗೆ ಟ್ರಸ್ಟ್‌ ಆಹ್ವಾನವನ್ನು ನೀಡಿದೆ. ಅಂಗಲ್ ಟೀಲಾ ಜಾಗದಲ್ಲಿ ಜರ್ಮನ್ ಹ್ಯಾಂಗರ್‌ ಟೆಂಟ್‌ ಸ್ಥಾಪಿಸಲಾಗಿದೆ. ಇದರಲ್ಲಿ 5 ಸಾವಿರ ಜನರು ಕುಳಿತುಕೊಳ್ಳಲು ಆಸನ ಹಾಕಲಾಗಿದೆ. ವಿಐಪಿಗಳನ್ನು ಬಿಟ್ಟು ಉಳಿದವರೆಲ್ಲಿ ಬಹುತೇಕರು ಜನಸಾಮಾನ್ಯರಾಗಿರಲಿದ್ದಾರೆ.

ಇದನ್ನೂ ಓದಿ: ವರ್ಷದ ಮೊದಲ ದಿನ ಅಯೋಧ್ಯೆಗೆ 3 ಲಕ್ಷ ಭಕ್ತರು: ಕರ್ನಾಟಕದಲ್ಲೂ ಪ್ರವಾಸಿಗರ ದಂಡು!

‘ಕಳೆದ ವರ್ಷ ಪ್ರಾಣಪ್ರತಿಷ್ಠೆಯಲ್ಲಿ ಭಾಗವಹಿಸಲು ಸಾಧ್ಯವಾಗದ ಸಾಮಾನ್ಯ ಜನರನ್ನು ಆಹ್ವಾನಿಸಲು ಟ್ರಸ್ಟ್‌ ನಿರ್ಧರಿಸಿದೆ. ಅಂಗದ ಟೀಲಾದಲ್ಲಿ ಎಲ್ಲ 3 ದಿನಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವರಿಗೆ ಅವಕಾಶ ನೀಡಲಾಗುತ್ತದೆ. ಕಳೆದ ಭಾಗಿಯಾಗುವುದಕ್ಕೆ ಸಾಧ್ಯವಾಗದ 110 ವಿಐಪಿಗಳು ಸೇರಿದಂತೆ ಅತಿಥಿಗಳಿಗೆ ಆಮಂತ್ರಣ ನೀಡಲಾಗಿದೆ’ ಎಂದು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್‌ ಹೇಳಿದ್ದಾರೆ.

ದೇವಾಲಯದ ಟ್ರಸ್ಟ್‌ನ ಪ್ರಕಾರ ಯಜ್ಞ ಸ್ಥಳದಲ್ಲಿ ಅಲಂಕಾರಗಳು ಮತ್ತು ಉತ್ಸವದ ಸಿದ್ಧತೆಗಳು ಮುಕ್ತಾಯದ ಹಂತದಲ್ಲಿದೆ. ಜ.11ರಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರು ದೇವಸ್ಥಾನದಲ್ಲಿ ರಾಮಲಲ್ಲಾ ಅಭಿಷೇಕ ಮಾಡಲಿದ್ದಾರೆ.ಕಾರ್ಯಕ್ರಮದ ದಿನದಂದು ಮಂಟಪ ಮತ್ತು ಯಜ್ಞಶಾಲೆಯಲ್ಲಿ ನಡೆಯುವ ಶಾಸ್ತ್ರೀಯ ಸಾಂಸ್ಕೃತಿಕ ಪ್ರದರ್ಶನಗಳು, ವಿವಿಧ ಆಚರಣೆಗಳು ಮತ್ತು ದೈನಂದಿನ ರಾಮಕಥಾ ಪ್ರವಚನಗಳನ್ನು ಒಳಗೊಂಡಿರುವ ಅದ್ಧೂರಿ ಕಾರ್ಯಕ್ರಮವನ್ನು ವೀಕ್ಷಿಸಲು ಸಾರ್ವಜನಿಕರಿಗೂ ಅವಕಾಶವನ್ನು ಕಲ್ಪಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್