ರಾಮ ಜನ್ಮಭೂಮಿ ಮಂದಿರದ ಅರ್ಚಕ, 16 ಭದ್ರತಾ ಸಿಬ್ಬಂದಿಗೆ ಕೊರೋನಾ!

Published : Jul 30, 2020, 02:44 PM ISTUpdated : Jul 30, 2020, 02:50 PM IST
ರಾಮ ಜನ್ಮಭೂಮಿ ಮಂದಿರದ ಅರ್ಚಕ, 16 ಭದ್ರತಾ ಸಿಬ್ಬಂದಿಗೆ ಕೊರೋನಾ!

ಸಾರಾಂಶ

ಕೊರೋನಾತಂಕದ ನಡುವೆಯೂ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆಗೆ ದಿನಾಂಕ ಫಿಕ್ಸ್| ಖುದ್ದು ಪಿಎಂ ಮೋದಿಯಿಂದಲೇ ಭೂಮಿ ಪೂಜೆ| ಭೂಮಿ ಪೂಜೆ ಕಾರ್ಯಕ್ರಮಕ್ಕೂ ಒಂದು ವಾರ ಮೊದಲು ಮಂದಿರದ ಅರ್ಚಕರಿಗೆ ಕೊರೋನಾ

ಅಯೋಧ್ಯೆ(ಜು.30): ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಮುಂದಿನ ವಾರ ಆಗಸ್ಟ್ 5 ರಂದು ರಾಮ ಜನ್ಮಭೂಮಿ ಮಂದಿರದ ಭೂಮಿ ಪೂಜೆ ನಡೆಯಲಿದೆ. ಆದರೀಗ ಇದಕ್ಕೂ ಮುನ್ನ ಸಮಸ್ಯೆಯೊಂದು ಎದುರಾಗಿದೆ. ರಾಮ ಜನ್ಮಭೂಮಿ ಮಂದಿರದ ಅರ್ಚಕ ಪ್ರದೀಪ್ ದಾಸ್ ಹಾಗೂ ಮಂದಿರ ಸುರಕ್ಷತೆಗೆ ನಿಯೋಜಿಸಿದ್ದ 16 ಮಂದಿ ಪೊಲೀಸ್ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಪ್ರದೀಪ್ ದಾಸ್ ರಾಮ ಜನ್ಮಭೂಮಿ ಮಂದಿರದ ಮುಖ್ಯ ಅರ್ಚಕ ಸತ್ಯೇಂದ್ರ ದಾಸ್‌ರವರ ಶಿಷ್ಯರಾಗಿದ್ದು, ರಾಮಲಲ್ಲಾ ಮಂದಿರದ ಭೂಮಿ ಪೂಜೆಯಲ್ಲೂ ಭಾಗಿಯಾಗುವವರಿದ್ದರು.

ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭದ ದಿನ ಮತ್ತೆ ಬರುತ್ತೇನೆ ಎಂದಿದ್ದ ಮೋದಿ!

ಸದ್ಯ ಮಂದಿರದಲ್ಲಿ ನಾಲ್ವರು ಅರ್ಚಕರಿದ್ದಾರೆ. ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಬಳಿಕ ಪ್ರದೀಪ್‌ ದಾಸ್‌ರವರೇ ಪ್ರಮುಖರು. ಆದರೀಗ ಮಂದಿರದಲ್ಲಿದ್ದವರಿಗೆ ಕೊರೋನಾ ಸೋಂಕಿರುವುದು ಬೆಳಕಿಗೆ ಬಂದಿರುವುದರಿಂದ ಆಡಳಿತಾಧಿಕಾರಿಗಳಿಗೆ ಆತಂಕವುಂಟಾಗಿದೆ. ಯಾಕೆಂದರೆ ಆಗಸ್ಟ್ 5ರಂದು ಪ್ರಧಾನಿ ನರೇಂದ್ರ ಮೋದಿ ಭೂಮಿ ಪೂಜೆಗೆ ಇಲ್ಲಿ ಆಗಮಿಸುವವರಿದ್ದಾರೆ.

ಇನ್ನು ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಭೂಮಿ ಪೂಜೆ ಬಳಿಕ ಮಂದಿರ ನಿರ್ಮಾಣಕ್ಕೆ ಅಡಿಪಾಯ ಹಾಕಲಾಗುತ್ತದೆ. ಇದಾದ ಬಳಿಕ ಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂದು ರಾತ್ರಿ 8ರ ಒಳಗೆ ಟಿಕೆಟ್ ಮೊತ್ತ ಮರುಪಾವತಿಸಿ : ಇಂಡಿಗೋಗೆ ಕೇಂದ್ರ ಗಡುವು
India Latest News Live: ಆಯೋಧ್ಯೆಯ ಬಾಬ್ರಿ ಮಸೀದಿಯನ್ನೇ ಹೋಲುವಂತಹ ಮಸೀದಿಗೆ ಶಂಕು ಸ್ಥಾಪನೆ