ಅಯೋಧ್ಯೆಗೆ ದೇಶದ ವಿವಿಧ ಕಡೆಯಿಂದ 1,000 ರೈಲು! ಮಂದಿರ ಉದ್ಘಾಟನೆ ಬಳಿಕ 100 ದಿನ ಸಂಚಾರ

Published : Dec 17, 2023, 09:01 AM ISTUpdated : Dec 17, 2023, 09:05 AM IST
ಅಯೋಧ್ಯೆಗೆ ದೇಶದ ವಿವಿಧ ಕಡೆಯಿಂದ 1,000 ರೈಲು! ಮಂದಿರ ಉದ್ಘಾಟನೆ ಬಳಿಕ 100 ದಿನ ಸಂಚಾರ

ಸಾರಾಂಶ

ಈ ರೈಲುಗಳು ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಪುಣೆ, ಕೋಲ್ಕತಾ, ನಾಗ್ಪುರ, ಲಖನೌ ಮತ್ತು ಜಮ್ಮು ಸೇರಿದಂತೆ ವಿವಿಧ ನಗರಗಳಿಂದ ಅಯೋಧ್ಯೆಗೆ ರೈಲುಗಳು ಸಂಚರಿಸಲಿವೆ. ರಾಮನ ದರ್ಶನ ಮಾಡಿದ ಭಕ್ತರು ಇದೇ ರೈಲುಗಳಲ್ಲಿ ತಮ್ಮ ಸ್ವಂತ ಊರುಗಳಿಗೆ ಮರಳಬಹುದಾಗಿದೆ.

ನವದೆಹಲಿ (ಡಿಸೆಂಬರ್ 17, 2023): ಶ್ರೀ ರಾಮಮಂದಿರ ಉದ್ಘಾಟನೆಯಾದ ಮೊದಲ 100 ದಿನ ಕಾಲ ಅಯೋಧ್ಯೆಗೆ ದೇಶದ ವಿವಿಧ ಭಾಗಗಳಿಂದ 1000 ರೈಲುಗಳನ್ನು ಓಡಿಸಲು ಭಾರತೀಯ ರೈಲ್ವೆ ಯೋಜನೆ ರೂಪಿಸಿದೆ.

ಜನವರಿ 22ರಂದು ಮಂದಿರದ ಉದ್ಘಾಟನೆ ನಡೆಯಲಿದ್ದು, ಜನವರಿ 23ರಿಂದ ಭಕ್ತರಿಗೆ ದೇವಾಲಯ ತೆರೆಯಲಿದೆ. ಅದಕ್ಕೂ 4 ದಿನ ಮುಂಚೆಯೇ ಅಂದರೆ ಜನವರಿ 19ರಿಂದ ಈ ರೈಲುಗಳ ಕಾರ್ಯಾಚರಣೆ ಆರಂಭವಾಗಲಿದೆ. 

ಇದನ್ನು ಓದಿ: ರಾಮಮಂದಿರ ಉದ್ಘಾಟನೆಗೆ 250 ಕನ್ನಡಿಗರಿಗೆ ಆಹ್ವಾನ..!

ರೈಲು ಎಲ್ಲಿಂದ?:
ಈ ರೈಲುಗಳು ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಪುಣೆ, ಕೋಲ್ಕತಾ, ನಾಗ್ಪುರ, ಲಖನೌ ಮತ್ತು ಜಮ್ಮು ಸೇರಿದಂತೆ ವಿವಿಧ ನಗರಗಳಿಂದ ಅಯೋಧ್ಯೆಗೆ ರೈಲುಗಳು ಸಂಚರಿಸಲಿವೆ. ರಾಮನ ದರ್ಶನ ಮಾಡಿದ ಭಕ್ತರು ಇದೇ ರೈಲುಗಳಲ್ಲಿ ತಮ್ಮ ಸ್ವಂತ ಊರುಗಳಿಗೆ ಮರಳಬಹುದಾಗಿದೆ. ಬೇಡಿಕೆಗೆ ಅನುಗುಣವಾಗಿ ರೈಲು ಸಂಚರಿಸಲಿವೆ ಎಂದು ಮೂಲಗಳು ತಿಳಿಸಿವೆ.

ಅಯೋಧ್ಯೆ ರೈಲು ನಿಲ್ದಾಣವನ್ನು ನವೀಕರಿಸಲಾಗುತ್ತಿದ್ದು, ದಿನಕ್ಕೆ 50 ಸಾವಿರ ಜನರು ಸಂಚರಿಸುವ ಸಾಮರ್ಥ್ಯ ಹೊಂದಲಿದೆ. ಜನವರಿ 15ರಂದು ನವೀಕೃತ ರೈಲು ನಿಲ್ದಾಣ ಸೇವೆಗೆ ಲಭ್ಯವಾಗಲಿದೆ ಎಂದೂ ತಿಳಿದುಬಂದಿದೆ.

ಪಶ್ಚಿಮ ಬಂಗಾಳದಲ್ಲಿ ಧಾರ್ಮಿಕ ಸಾಮರಸ್ಯ,ಮುಸ್ಲಿಂ ಶಿಲ್ಪಿಗಳಿಂದ ಅಯೋಧ್ಯೆ ದೇವಸ್ಥಾನಕ್ಕೆ ರಾಮನ ಪ್ರತಿಮೆ

ಇದೇ ವೇಳೆ, ಯಾತ್ರಾರ್ಥಿಗಳು ಅಯೋಧ್ಯೆಗೆ ತಮ್ಮದೇ ಆದ ಬಾಡಿಗೆ ರೈಲನ್ನೂ ಬುಕ್‌ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ. ಇನ್ನು ಉದ್ಘಾಟನೆಯ ಆಸುಪಾಸಿನಲ್ಲಿ ಅಯೋಧ್ಯೆಯಲ್ಲಿ ಭಾರಿ ಸಂಖ್ಯೆಯ ಭಕ್ತರು ಆಗಮಿಸಲಿರುವ ಕಾರಣ, ಭಕ್ತಾದಿಗಳಿಗೆ ಐಆರ್‌ಸಿಟಿಸಿ, ತಿಂಡಿ-ಊಟದ ಸೌಲಭ್ಯವನ್ನೂ ಕಲ್ಪಿಸಲಿದೆ.

ಇನ್ನು ರಾಮನ ಜನ್ಮಸ್ಥಳಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳು ಪವಿತ್ರ ಸರಯೂ ನದಿಯಲ್ಲಿ ವಿದ್ಯುತ್ ಕ್ಯಾಟಮರನ್‌ನಲ್ಲಿ (ವಿಲಾಸಿ ಹಡಗು) ಸಂಚರಿಸಬಹುದಾಗಿದೆ. ಕ್ಯಾಟಮರನ್ 100 ಜನರಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ.

ಅಯೋಧ್ಯೆಯ ಶ್ರೀರಾಮನ ಆರಾಧನೆಗೆ 3000 ಅರ್ಚಕರ ಹಿಂದಿಕ್ಕಿ ಆಯ್ಕೆಯಾದ ವಿದ್ಯಾರ್ಥಿ ಮೋಹಿತ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!