
ನಾಗ್ಪುರ(ಸೆ.07): ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ಭವ್ಯ ರಾಮಮಂದಿರದ ಅಡಿಪಾಯವನ್ನು ಇದೇ ವರ್ಷದ ಸೆಪ್ಟೆಂಬರ್ ಕೊನೇ ಅಥವಾ ಅಕ್ಟೋಬರ್ ತಿಂಗಳ ಮೊದಲ ವಾರದಲ್ಲಿ ಪೂರ್ಣಗೊಳ್ಳಲಿದೆ ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ.
ಅಲ್ಲದೆ 2023ರ ಡಿಸೆಂಬರ್ ವೇಳೆಗೆ ದೇಗುಲದ ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಭಕ್ತರಿಗೆ ಮಹಾಪುರುಷ ಶ್ರೀರಾಮನ ದರ್ಶನಕ್ಕಾಗಿ ದೇಗುಲ ಮುಕ್ತವಾಗಲಿದೆ ಎಂದು ಭಕ್ತರಿಗೆ ದೇಗುಲ ಮುಕ್ತವಾಗಲಿದೆ ಎಂದು ವಿಎಚ್ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಹೇಳಿದ್ದಾರೆ.
ಸೋಮವಾರ ಪತ್ರಕರ್ತರ ಜತೆ ಮಾತನಾಡಿದ ಮಿಲಿಂದ್ ಪರಾಂಡೆ ಅವರು, ದೇಗುಲದ ಪೂರ್ಣ ಕಾಮಗಾರಿಗೆ ಸ್ವಲ್ಪ ಹೆಚ್ಚು ಕಾಲಾವಕಾಶ ಬೇಕಾಗಲಿದೆ. ಆದರೆ, 2023ರ ಡಿಸೆಂಬರ್ ವೇಳೆಗೆ ಗರ್ಭಗುಡಿಯ ಕಾಮಗಾರಿ ಪೂರ್ಣಗೊಳಿಸಿ ಪೂಜಾಕೈಂಕರ್ಯಗಳು ಮತ್ತು ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದರು.
ರಾಮ ದೇಗುಲ ನಿರ್ಮಾಣದ ಹೊಣೆಯನ್ನು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ಗೆ ವಹಿಸಲಾಗಿದ್ದು, 2020ರ ಆಗಸ್ಟ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಗುಲ ನಿರ್ಮಾಣದ ಭೂಮಿ ಪೂಜೆ ಮಾಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ