ರಂಜಾನ್ ಸಂಭ್ರಮ: ಮನೆಮುಂದೆ ಆಡುತ್ತಿದ್ದ 2 ವರ್ಷದ ಮಗು ಮೇಲೆ ಕಾರು ಹರಿಸಿದ 15 ವರ್ಷದ ಬಾಲಕ!

Published : Apr 01, 2025, 05:09 PM ISTUpdated : Apr 01, 2025, 05:25 PM IST
ರಂಜಾನ್ ಸಂಭ್ರಮ: ಮನೆಮುಂದೆ ಆಡುತ್ತಿದ್ದ 2 ವರ್ಷದ ಮಗು ಮೇಲೆ ಕಾರು ಹರಿಸಿದ 15 ವರ್ಷದ ಬಾಲಕ!

ಸಾರಾಂಶ

ದೆಹಲಿಯ ಪಹರ್‌ಗಂಜ್‌ನಲ್ಲಿ ರಂಜಾನ್ ಆಚರಣೆಯ ಸಂದರ್ಭದಲ್ಲಿ, ಮನೆಯ ಹೊರಗೆ ಆಡುತ್ತಿದ್ದ ಎರಡು ವರ್ಷದ ಮಗುವಿಗೆ 15 ವರ್ಷದ ಬಾಲಕನೊಬ್ಬ ಕಾರು ಚಲಾಯಿಸಿದ ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಬಾಲಕನ ತಂದೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಘಟನೆ ದುಃಖವನ್ನುಂಟುಮಾಡಿದೆ.

ದೆಹಲಿ (ಏ.01): ರಂಜಾನ್ ಆಚರಣೆಯ ನಡುವೆ 2 ವರ್ಷದ ಮಗುವಿನ ಸಾವು ಕುಟುಂಬದ ಸಂತೋಷವನ್ನು ಕಸಿದುಕೊಂಡಿದೆ. 15 ವರ್ಷದ ಬಾಲಕ ಚಲಾಯಿಸುತ್ತಿದ್ದ ಕಾರು ಹರಿದು ಹೋದ ಪರಿಣಾಮ ಮಗು ದಾರುಣವಾಗಿ ಸಾವನ್ನಪ್ಪಿದೆ.

ಮನೆಯ ಹೊರಗೆ ಆಡುತ್ತಿದ್ದ ಅನಾಬಿಯಾ (2) ಎಂಬ ಮಗುವಿನ ಮೇಲೆ 15 ವರ್ಷದ ಅಪ್ರಾಪ್ತ ಬಾಲಕ ಹ್ಯುಂಡೈ ವೆನ್ಯೂ ಕಾರು ಚಲಾಯಿಸಿದ್ದಾನೆ. ಕಾರು ಹರಿದ ಪರಿಣಾಮ ಸ್ಥಳದಲ್ಲಿಯೇ ಮಗು ಸಾವನ್ನಪ್ಪಿದೆ. ದೆಹಲಿಯ ಪಹರ್‌ಗಂಜ್‌ನಲ್ಲಿ ಭಾನುವಾರ ಈ ಭೀಕರ ದುರ್ಘಟನೆ ಸಂಭವಿಸಿದೆ.

ಪಹರ್‌ಗಂಜ್‌ನಲ್ಲಿರುವ ತನ್ನ ಮನೆಯ ಹೊರಗಿನ ರಸ್ತೆಯಲ್ಲಿ ಆಡುತ್ತಿದ್ದ ಮಗುವಿನ ಮೇಲೆ ಅಪ್ರಾಪ್ತ ಬಾಲಕನೊಬ್ಬ ಹ್ಯುಂಡೈ ಕಾರನ್ನು ಚಲಾಯಿಸಿದ್ದಾನೆ. ಅಪಘಾತದ ಸಿಸಿಟಿವಿ ದೃಶ್ಯಗಳು ಬಿಡುಗಡೆಯಾಗಿವೆ. ಅನಾಬಿಯಾ ಇತರ ಮಕ್ಕಳೊಂದಿಗೆ ಕಾರು ಬರುವುದನ್ನು ಮತ್ತು ಪಕ್ಕದಲ್ಲಿ ನಿಲ್ಲಿಸುವುದನ್ನು ವೀಡಿಯೊದಲ್ಲಿ ಕಾಣಬಹುದು. ಇದ್ದಕ್ಕಿದ್ದಂತೆ ಕಾರ್ ಮುಂದೆ ಬಂದು ಮಗುವಿನ ದೇಹದ ಮೇಲೆ ಹರಿದಿದೆ.

ಇದನ್ನೂ ಓದಿ: ಬೆಂಗಳೂರಿನ ಅತ್ಯಂತ ದುಬಾರಿ ಮುತ್ತು; ಒಂದು ಕಿಸ್ಸಿಗೆ 50 ಸಾವಿರ ರೂ. ಚಾರ್ಜ್ ಮಾಡುವ ಕಿಸ್ಸಿಂಗ್ ಟೀಚರ್!

ಘಟನೆ ನೋಡಿದವರು ಓಡಿ ಬಂದು ಕಾರನ್ನು ತಳ್ಳಿ ಮಗುವನ್ನು ಹೊರತೆಗೆದು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಮಗು ಮೃತಪಟ್ಟಿದೆ. ಅನಾಬಿಯಾಳ ನೆರೆಮನೆಯವರ ಕಾರು ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತ ಸಂಭವಿಸಿದಾಗ 15 ವರ್ಷದ ಮಗ ವಾಹನ ಚಲಾಯಿಸುತ್ತಿದ್ದ ಎಂದು ಸಿಸಿಟಿವಿ ದೃಶ್ಯಗಳಿಂದ ಪೊಲೀಸರು ಪತ್ತೆ ಮಾಡಿದ್ದಾರೆ. ಈ ಸಂಬಂಧ ಕಾರು ಮಾಲೀಕ ಮತ್ತು ಆತನ ಮಗನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಲಕನ ತಂದೆ ಪಂಕಜ್ ಅಗರ್ವಾಲ್ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದು ಕೋಕಾ ಕೋಲಾ ಕಂಪನಿ ಚಾರ್ಟೆಡ್ ಅಕೌಂಟೆಂಟ್ ಹಠಾತ್ ಸಾವು
ದೇವಸ್ಥಾನದ ಕಾರ್ತಿಕ ದೀಪದ ಪರವಾಗಿ ತೀರ್ಪು ನೀಡಿದ ಜಡ್ಜ್‌, ಸೇಡು ತೀರಿಸಿಕೊಳ್ಳಲು ಮುಂದಾದ ತಮಿಳುನಾಡು ಸರ್ಕಾರ!