ರಾಮಕೃಷ್ಣ ಮಿಷನ್‌ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ನಿಧನ: ಪ್ರಧಾನಿ ಮೋದಿ ಸಂತಾಪ

Published : Mar 27, 2024, 07:17 AM IST
ರಾಮಕೃಷ್ಣ ಮಿಷನ್‌ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ನಿಧನ: ಪ್ರಧಾನಿ ಮೋದಿ ಸಂತಾಪ

ಸಾರಾಂಶ

ಸ್ವಾಮಿ ಸ್ಮರಣಾನಂದ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ 

ಕೋಲ್ಕತಾ(ಮಾ.27): ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದ (95) ಮಂಗಳವಾರ ರಾತ್ರಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ಅವರು ಮಂಗಳವಾರ ರಾತ್ರಿ 8.14 ಕ್ಕೆ ಮಹಾಸಮಾಧಿಯನ್ನು ತಲುಪಿದರು ಎಂದು ಮಿಷನ್‌ ಹೇಳಿಕೆ ತಿಳಿಸಿದೆ. ಅವರು 2017ರಲ್ಲಿ ಮಿಷನ್‌ 16ನೇ ಅಧ್ಯಕ್ಷರಾಗಿದ್ದರು. 

ಸ್ವಾಮಿ ಸ್ಮರಣಾನಂದ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಪ್ರಸಿದ್ಧ ಜೈನಮುನಿ ವಿದ್ಯಾಸಾಗರ ಮಹರಾಜ್ ಛತ್ತೀಸ್‌ಘಡದಲ್ಲಿ ನಿಧನ

ಸ್ಮರಣಾನಂದರನ್ನು ಮೂತ್ರನಾಳದ ಸೋಂಕಿನಿಂದಾಗಿ ಜನವರಿ 29 ರಂದು ರಾಮಕೃಷ್ಣ ಮಿಷನ್ ಸೇವಾ ಪ್ರತಿಷ್ಠಾನಕ್ಕೆ ದಾಖಲಿಸಲಾಗಿತ್ತು. ನಂತರ ಅವರು ಉಸಿರಾಟದ ವೈಫಲ್ಯ ಅನುಭವಿಸಿದ್ದರು, ಇದಕ್ಕಾಗಿ ಅವರನ್ನು ಮಾರ್ಚ್ 3ರಿಂದ ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಟೊಯೋಟಾ ಹೈಡ್ರೋಜನ್ ಕಾರು ಮೂಲಕ ಸಂಸತ್‌ಗೆ ಬಂದ ಪ್ರಹ್ಲಾದ್ ಜೋಶಿ, ಇದರ ಲಾಭವೇನು?