
ಅಯೋಧ್ಯೆ(ನ.01): ಪ್ರಧಾನಿ ನರೇಂದ್ರ ಮೋದಿ ಅವರಿಂದ ರಾಮಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ ಸ್ಥಳದಲ್ಲೇ ಈ ಬಾರಿ ಅದ್ಧೂರಿ ದೀಪಾವಳಿ ಆಚರಣೆಗೆ ನಿರ್ಧರಿಸಲಾಗಿದೆ. ಆ ಸ್ಥಳದಲ್ಲಿ ದೀಪಾವಳಿ ನಡೆಯುತ್ತಿರುವುದು 28 ವರ್ಷಗಳ ಬಳಿಕ. ಭೂಮಿಪೂಜೆ ನಡೆದ ಸ್ಥಳ ಸೇರಿ ಇಡೀ ಅಯೋಧ್ಯೆಯಲ್ಲಿ ಸಂಭ್ರಮದಲ್ಲಿ ಹಬ್ಬ ಆಚರಣೆಗೆ ನಿರ್ಧರಿಸಲಾಗಿದೆ
. ಸರಯೂ ನದಿ ಸೇರಿದಂತೆ ರಾಮಮಂದಿರ ನಿರ್ಮಾಣವಾಗಲಿರುವ ಸ್ಥಳವೂ ಲಕ್ಷಾಂತರ ದೀಪದೊಂದಿಗೆ ಅಲಂಕಾರಗೊಳ್ಳಲಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದೀಪಾವಳಿಯಂದು ಅಯೋಧ್ಯೆಗೆ ಭೇಟಿ ನೀಡಿ ಸ್ವತಃ ಪೂಜೆ ನೆರವೇರಿಸಲಿದ್ದಾರೆ ಎನ್ನಲಾಗಿದೆ.
\ಕಳೆದ ವರ್ಷದ ದೀಪಾವಳಿ ದೀಪೋತ್ಸವದಂದು ಅಯೋಧ್ಯೆ ನಗರದಲ್ಲಿ 5.5 ಲಕ್ಷ ದೀಪಗಳು ಬೆಳಗಿದ್ದವು. ತನ್ಮೂಲಕ ಈ ಘಟನೆಯು ಗಿನ್ನೆಸ್ ವಿಶ್ವದಾಖಲೆಯಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ