
ನವದೆಹಲಿ: 'ದೇಶದ ಕೆಲವು ಭಾಗಗಳಲ್ಲಿ ಮುಸ್ಲಿಮರ ಜನಸಂಖ್ಯೆ ಗಮನಾರ್ಹವಾಗಿ ಬೆಳವಣಿಗೆ ಕಾಣುತ್ತಿದೆ. ಇದು ಜನಸಂಖ್ಯಾ ಅಸಮತೋಲನಕ್ಕೆ ಕಾರಣವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿರುವ ಆರ್ಎಸ್ಎಸ್ ಸಂಬಂಧಿತ ನಿಯತಕಾಲಿಕ 'ಆರ್ಗನೈಸರ್', 'ವರದಿ ಮಾಡಿದೆ. ದೇಶದಲ್ಲಿ ಸಮಗ್ರ ರಾಷ್ಟ್ರೀಯ ಜನಸಂಖ್ಯಾ ನಿಯಂತ್ರಣ ನೀತಿ'ಯನ್ನು ಪರಿಚಯಿಸುವ ಅಗತ್ಯ ಇದೆ ಎಂದು ಅದು ಒತ್ತಿ ಹೇಳಿದೆ.
ತನ್ನ ಇತ್ತೀಚಿನ ಆವೃತ್ತಿಯಲ್ಲಿ ಸಂಪಾದಕೀಯ ಪ್ರಕಟಿಸಿರುವ 'ಆರ್ಗನೈಸರ್', 'ದೇಶದ ಪಶ್ಚಿಮ ಮತ್ತು ದಕ್ಷಿಣ ಭಾಗದ ರಾಜ್ಯಗಳು ಜನಸಂಖ್ಯೆ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸುವಲ್ಲಿ ತಕ್ಕಮಟ್ಟಿಗೆ ಉತ್ತಮ ಸಾಧನೆ ಮಾಡಿವೆ. 'ರಾಷ್ಟ್ರೀಯ ಮಟ್ಟದಲ್ಲಿ ಜನಸಂಖ್ಯೆ ಸ್ಥಿರಗೊಳಿಸಿದ್ದರೂ, ಎಲ್ಲಾ ಧರ್ಮಗಳು ಮತ್ತು ಪ್ರದೇಶಗಳಲ್ಲಿ ಇದು ಒಂದೇ ರೀತಿ ಸ್ಥಿರ ಆಗುತ್ತಿಲ್ಲ. ಕೆಲವು ಪ್ರದೇಶಗಳಲ್ಲಿ, ವಿಶೇಷವಾಗಿ ಗಡಿ ಜಿಲ್ಲೆಗಳಲ್ಲಿ ಗಮನಾರ್ಹ ಮುಸ್ಲಿಂ ಜನಸಂಖ್ಯೆಯ ಬೆಳವಣಿಗೆ ಆಗುತ್ತಿದೆ.
ಜಗತ್ತಿನ ಅತಿ ಶ್ರೀಮಂತ ಮುಸ್ಲಿಂ ದೇಶವಿದು.. ಇಲ್ಲ, ಸೌದಿ ಅಥವಾ ಯುಎಇ ಅಲ್ಲ..
ದೇಶದ ಗಡಿಗೆ ಹೊಂದಿಕೊಂಡ ಬಂಗಾಳ, ಬಿಹಾರ, ಉತ್ತರಾಖಂಡ, ಅಸ್ಸಾಂನಂಥ ರಾಜ್ಯ ಗಳಲ್ಲಿ ಅಕ್ರಮ ವಲಸೆಯಿಂದ ಅಸ್ವಾಭಾವಿಕ ಜನಸಂಖ್ಯಾ ಬೆಳವಣಿಗೆ ಆಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದೆ. 'ಪ್ರಜಾಪ್ರಭುತ್ವದಲ್ಲಿ ಶಾಸನಸಭಾ ಸಂಖ್ಯೆಗಳು ನಿರ್ಣಾಯಕವಾಗುತ್ತವೆ. ಇಂಥ ಶಾಸನಸಭಾ ಸಂಖ್ಯೆಗಳು ನಿರ್ಣಯ ಆಗುವುದು ಜನಸಂಖ್ಯೆ ಆಧರಿಸಿ. ಹೀಗಾಗಿ ಜನಸಂಖ್ಯಾ ಅಸಮತೋಲನದ ಪ್ರವೃತ್ತಿಯು ಸಂಸತ್ತಿನ ಸ್ಥಾನಗಳ ಮೇಲೆ ಪರಿಣಾಮ ಬೀರಬಹುದು. ಈ ಬಗ್ಗೆ ಇನ್ನಷ್ಟು ಜಾಗರೂಕರಾಗಿರಬೇಕು ಎಂದು ಅದು ಕರೆ ಕೊಟ್ಟಿದೆ.
ಆದರೆ ಇಂದು ರಾಹುಲ್ ಗಾಂಧಿ ಹಿಂದೂಗಳಿಗೆ ಬೈಯುತ್ತಾರೆ. ಮಮತಾ ಬ್ಯಾನರ್ಜಿ ಮುಸ್ಲಿಂ ಮಂತ್ರ ಜಪಿಸುತ್ತಾರೆ. ಡಿಎಂಕೆ ನಾಯಕರು ಸನಾತನ ಧರ್ಮವನ್ನು ಬೈಯುತ್ತಾರೆ. ಮುಸ್ಲಿಂ ಮತ ಬ್ಯಾಂಕ್ ಹೆಚ್ಚಳದ ಕಾರಣ ಆ ಪಕ್ಷಗಳಲ್ಲಿ ಮೂಡಿರುವ ವಿಶ್ವಾಸವೇ ಇದಕ್ಕೆ ಕಾರಣ. ಇಂಥ ಪ್ರವೃತ್ತಿ ನಿಲ್ಲಬೇಕು ಎಂದರೆ ಸಮಗ್ರ ರಾಷ್ಟ್ರೀಯ ಜನಸಂಖ್ಯಾ ನೀತಿ ಜಾರಿಗೊಳಿಸಬೇಕು ಎಂದು ಆರ್ಗನೈಸ್ ಕರೆ ನೀಡಿದೆ.
ಸ್ನೇಹಿತನ ಮದುವೆಗೆ ರಾಮಮಂದಿರ ಹಾಡು ಹಾಕಿದ್ದಕ್ಕೆ ಅನ್ಯಕೋಮಿನ ಗುಂಪಿನಿಂದ ಯುವಕನ ಮೇಲೆ ಹಲ್ಲೆ?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ