
ಮುಂಬೈ (ಅ.9): ಭಾರತದ ಅತಿದೊಡ್ಡ ಕೈಗಾರಿಕಾ ಸಮೂಹ ಟಾಟಾ ಸನ್ಸ್ನ ಚೇರ್ಮನ್ ರತನ್ ಟಾಟಾ ಅವರ ಪರಿಸ್ಥಿತಿ ಗಂಭೀರವಾಗಿದೆ. ಎರಡು ದಿನಗಳ ಹಿಂದೆ ತಮ್ಮ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ್ದ ರತನ್ ಟಾಟಾ ಎಂದಿನ ಚೆಕಪ್ಗಾಗಿ ಆಸ್ಪತ್ರೆಗೆ ಬಂದಿದ್ದೇನೆ ಎಂದು ತಿಳಿಸಿದ್ದರು. ಆದರೆ, ಈಗ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಈ ವಿಚಾರವಾಗಿ ತಿಳಿದಿರುವ ಮೂಲಗಳು ಹೇಳಿವೆ. ಈ ಬಗ್ಗೆ ರಾಯಿಟರ್ಸ್ ಬುಧವಾರ ವರದಿ ಮಾಡಿದೆ. 86ರ ಹರೆಯದ ರತನ್ ಟಾಟಾ ಅವರು ತಮ್ಮ ವಯಸ್ಸು ಮತ್ತು ಸಂಬಂಧಿತ ವೈದ್ಯಕೀಯ ಪರಿಸ್ಥಿತಿಗಳಿಂದಾಗಿ ಎಂದಿನ ವೈದ್ಯಕೀಯ ತನಿಖೆಗೆ ಒಳಗಾಗುತ್ತಿದ್ದಾರೆ ಎಂದು ಸೋಮವಾರ ಹೇಳಿದ್ದರು. ಸೋಮವಾರ ಸ್ವತಃ ರತನ್ ಟಾಟಾ ಅವರ ಸೋಶಿಯಲ್ ಮೀಡಿಯಾ ಅಕೌಂಟ್ನಲ್ಲಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಲಾಗಿತ್ತು. ಆಸ್ಪತ್ರೆಯಿಂದ ಉತ್ತಮ ಸ್ಫೂರ್ತಿಯಲ್ಲಿ ಹೊರಬಂದಿದ್ದೇನೆ. ಯಾರೂ ಕೂಡ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದರು.
ಇದರ ಬೆನ್ನಲ್ಲಿಯೇ ಅವರು ಬುಧವಾರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಆದರೆ, ಅವರ ಪರಿಸ್ಥಿತಿ ಹೇಗಿದೆ. ಯಾವ ರೀತಿಯ ಸಮಸ್ಯೆ ಅವರಿಗೆ ಕಾಡುತ್ತಿದೆ ಅನ್ನೋದು ಈವರೆಗೂ ಬಹಿರಂಗವಾಗಿಲ್ಲ.
1991ರಲ್ಲಿ ಟಾಟಾ ಸನ್ಸ್ನ ಚೇರ್ಮನ್ ಆಗಿದ್ದ ರತನ್ ಟಾಟಾ, 2012ರವರೆಗೂ ಈ ಹುದ್ದೆಯಲ್ಲಿದ್ದರು. ತಮ್ಮ ಮರಿ ಮುತ್ತಜ್ಜ ಸ್ಥಾಪನೆ ಮಾಡಿದ್ದ ಗ್ರೂಪ್ ಅನ್ನು ದೊಡ್ಡ ಮಟ್ಟದಲ್ಲಿ ಯಶಸ್ಸಿನ ಪಥದಲ್ಲಿ ಸಾಗಿಸಿದ್ದರು. 1996ರಲ್ಲಿ ಟಾಟಾ ಟೆಲಿಸರ್ವೀಸಸ್ ಕಂಪನಿ ಸ್ಥಾಪನೆ ಮಾಡಿದ್ದರೆ, 2004ರಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ ಕಂಪನಿಯನ್ನು ಸಾರ್ವಜನಿಕ ಪಾಲುದಾರ ಕಂಪನಿಯನ್ನಾಗಿ ಮಾಡಿದ್ದರು. ಟಾಟಾ ಸನ್ಸ್ನಿಂದ ಕೆಳಗಿಳಿದ ಬಳಿಕ ಅವರನ್ನು ಟಾಟಾ ಸನ್ಸ್, ಟಾಟಾ ಇಂಡಸ್ಟ್ರೀಸ್, ಟಾಟಾ ಮೋಟಾರ್ಸ್, ಟಾಟಾ ಸ್ಟೀಲ್ ಮತ್ತು ಟಾಟಾ ಕೆಮಿಕಲ್ಸ್ನ ಅಧ್ಯಕ್ಷ ಗೌರವ ಪ್ರಶಸ್ತಿಯನ್ನು ನೀಡಲಾಯಿತು ಎಂದು ಕಂಪನಿಯ ವೆಬ್ಸೈಟ್ ಹೇಳುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ