
ಕೊಯಮತ್ತೂರು(ಏ.05): ಒಂದು ವೇಳೆ ತಾವು ಸಿನಿಮಾದಲ್ಲಿ ನಟಿಸುವುದರಿಂದ ರಾಜಕೀಯ ವೃತ್ತಿ ಬದುಕಿಗೆ ತೊಂದರೆ ಆಗುವುದಾದರೆ ನಟನೆಯನ್ನು ತ್ಯಜಿಸಲು ಸಿದ್ಧವಿದ್ದೇನೆ ಎಂದು ನಟ ಕಮಲ್ ಹಾಸನ್ ಹೇಳಿದ್ದಾರೆ.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ದಿ. ಎಂ.ಜಿ. ರಾಮಚಂದ್ರನ್ ಅವರು ಜನಸೇವೆ ಮಾಡುವ ತಮ್ಮ ಗುರಿಯನ್ನು ಸಾಧಿಸಲು ಶಾಸಕರಾಗಿ ಇದ್ದುಕೊಂಡೇ ಸಿನಿಮಾದಲ್ಲಿ ನಟಿಸಿದ್ದರು. ರಾಜಕೀಯದಿಂದ ತಟಸ್ಥರಾಗಿ ಉಳಿದ ನಟರ ಪೈಕಿ ನಟರ ಪೈಕಿ ನಾನೂ ಒಬ್ಬನಾಗಿದ್ದೆ.
ಆದರೆ, ಅನಿವಾರ್ಯವಾಗಿ ರಾಜಕೀಯಕ್ಕೆ ಪ್ರವೇಶಿಸಬೇಕಾಗಿ ಬಂತು. ರಾಜಕೀಯ ಎನ್ನುವುದು ಜನಸೇವೆಗಾಗಿ ಇರುವಂಥದ್ದು. ಒಂದು ವೇಳೆ ಸಿನಿಮಾದಲ್ಲಿನ ನಟನೆಯಿಂದ ರಾಜಕೀಯ ವೃತ್ತಿ ಬದುಕಿಗೆ ತೊಂದರೆ ಆದರೆ ಅದನ್ನು ತ್ಯಜಿಸಲು ಸಿದ್ಧನಿದ್ದೇನೆ. ಈಗ ಒಪ್ಪಿಕೊಂಡಿರುವ ಸಿನಿಮಾಗಳನ್ನು ಪೂರ್ತಿಗೊಳಿಸಿದ ಬಳಿಕ ಮತ್ತೆ ಬಣ್ಣ ಹಚ್ಚುವುದಿಲ್ಲ ಎಂದು ಕಮಲ್ ಹಾಸನ್ ಹೇಳಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ