ತಾನೇ ಉಗ್ರರ ಗುಂಡೇಟಿಗೆ ಬಲಿಯಾಗಿ ಭಕ್ತರ ಕಾಪಾಡಿದ ಬಸ್ ಚಾಲಕನಿಗೆ ತಿರಂಗ ಗೌರವ ನಮನ!

Published : Jun 12, 2024, 05:17 PM IST
ತಾನೇ ಉಗ್ರರ ಗುಂಡೇಟಿಗೆ ಬಲಿಯಾಗಿ ಭಕ್ತರ ಕಾಪಾಡಿದ ಬಸ್ ಚಾಲಕನಿಗೆ ತಿರಂಗ ಗೌರವ ನಮನ!

ಸಾರಾಂಶ

ಎಲ್ಲಾ ಯಾತ್ರಾರ್ಥಿಗಳನ್ನು ಬಸ್‌ನಿಂದ ಇಳಿಯುವಂತೆ ಉಗ್ರರು ಚಾಲಕನಿಗೆ ತಾಕೀತು ಮಾಡಿದ್ದಾರೆ. ಗನ್ ಹಿಡಿದ ಉಗ್ರರು ಎದಿರಿಗೆ ಇದ್ದರೂ ಯಾರೂ ಇಳಿಯದಂತೆ ಸೂಚನೆ ನೀಡಿದ ಬಸ್ ಚಾಲಕ, ಉಗ್ರರ ಗುಂಡೇಟಿಗೆ ಬಲಿಯಾಗಿದ್ದಾರೆ. ಆದರೆ ಬಸ್‌ನಲ್ಲಿದ್ದ ಹಲವು ಭಕ್ತರ ಜೀವ ಉಳಿಸಿದ ಬಸ್ ಚಾಲಕನಿಗೆ ತಿರಂಗ ಗೌರವ ನಮನ ಸಲ್ಲಿಸಲಾಗಿದೆ.  

ಶ್ರೀನಗರ(ಜೂ.12) ಜಮ್ಮು ಮತ್ತು ಕಾಶ್ಮೀರದಲ್ಲಿ ಯಾತ್ರಾರ್ಥಿಗಳ ಬಸ್ ಮೇಲೆ ಉಗ್ರರ ಗುಂಡಿನ ದಾಳಿ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿದೆ. ಘಟನೆಯಲ್ಲಿ 10 ಮಂದಿ ಮೃತಪಟ್ಟಿದ್ದರೆ, 33ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವಖೋರಿಗೆ ತೆರಳುತ್ತಿದ್ದ ಯಾತ್ರಾರ್ಥಿಗಳ ಬಸ್ ಟಾರ್ಗೆಟ್ ಮಾಡಿದ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಬಸ್‌ನಲ್ಲಿದ್ದ ಯಾತ್ರಾರ್ಥಿಗಳನ್ನು ಉಳಿಸಲು ಬಸ್ ಚಾಲಕ ತಾನೇ ಉಗ್ರರ ಗುಂಡಿಗೆ ಬಲಿಯಾಗಿದ್ದ. ಉಗ್ರರು ಬಸ್ ಪ್ರವೇಶಿದಂತೆ ಮಾಡಿದರೂ ಬಸ್ ಪ್ರಪಾತಕ್ಕೆ ಬಿದ್ದಿತ್ತು. ಆದರೆ ಇದರಿಂದ ಹಲವರು ಪ್ರಾಣ ಉಳಿಸಿಕೊಂಡಿದ್ದಾರೆ. ಉಗ್ರರಿಂದ ಹಲವರ ಜೀವ ಉಳಿಸಿದ ಬಸ್ ಚಾಲಕ ವಿಜಯ್ ಕುಮಾರ್ ಮೃತದೇಹಕ್ಕೆ ತಿರಂಗ ಮೂಲಕ ಗೌರವ ನಮನ ಸಲ್ಲಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಕೆಲ ದಿನಗಳಿಂದ ಸತತ ಉಗ್ರ ದಾಳಿ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಅತ್ತ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ ನಡೆದಿತ್ತು. ಯಾತ್ರಾರ್ಥಿಗಳು ಶಿವಖೋಡಿಯ ಗುಹಾ ದೇವಾಲಯದಿಂದ ವೈಷ್ಣೋದೇವಿಯ ಕ್ಷೇತ್ರವಾದ ಕಟ್ರಾಗೆ ತೆರಳುತ್ತಿದ್ದ ವೇಳೆ ಈ ದಾಳಿ ನಡೆದಿತ್ತು.

ಕಾಶ್ಮೀರದ ದೇವಸ್ಥಾನಕ್ಕೆ ತೆರಳಿದ ಭಕ್ತರ ಬಸ್ ಮೇಲೆ ಉಗ್ರರ ದಾಳಿ, 10 ಯಾತ್ರಾರ್ಥಿಗಳು ಸಾವು!

ರಸ್ತೆಯ ಇಕ್ಕೆಲಗಳಲ್ಲಿದ್ದ ಅರಣ್ಯದಲ್ಲಿ ಅವಿತಿದ್ದ ಉಗ್ರರು ಬಸ್ ಮೇಲೆ ದಾಳಿ ನಡೆಸಿದ್ದಾರೆ. ಹಿಂದೂ ಭಕ್ತರನ್ನು ಟಾರ್ಗೆಟ್ ಮಾಡಿದ್ದ ಉಗ್ರರು ಬಸ್ ಮೇಲೆ ದಾಳಿ ನಡೆಸಿದ್ದರೆ. ಬಸ್ ಎದುರೇ ನಿಂತಿದ್ದ ಉಗ್ರರು ಚಾಲಕ ವಿಜಯ್ ಕುಮಾರ್‌ಗೆ ವಾರ್ನಿಂಗ್ ನೀಡಿದ್ದಾರೆ. ಜೊತೆಗೆ ಬಸ್ ಪ್ರವೇಶಿಸಲು ಮುಂದಾಗಿದ್ದಾರೆ. ಇತ್ತ ಬಸ್‌ನಲ್ಲಿದ್ದ ಯಾತ್ರಾರ್ಥಿಗಳಿಗೆ ಬಸ್ ಚಾಲಕ ಸೂಚನೆ ನೀಡಿದ್ದಾನೆ. ಯಾರೂ ಇಳಿಯದಂತೆ ಸೂಚನೆ ನೀಡಿ ಉಗ್ರರ ಗನ್ ಟಾರ್ಗೆಟ್ ನಡುವೆಯೇ ಬಸ್ ವೇಗವಾಗಿ ಚಲಾಯಿಸಿಕೊಂಡು ಹೋಗಲು ಮುಂದಾಗಿದ್ದಾನೆ.

ಉಗ್ರರು ಬಸ್ ಚಾಲಕನ ತಲೆಗೆ ಗುಂಡಿಟ್ಟಿದ್ದಾರೆ. ಆದರೂ ಉಗ್ರರನ್ನು ಬಸ್ ಒಳಗೆ ಪ್ರವೇಶಿಸಲು ಅನುಮತಿಸದ ಚಾಲಕ, ಪ್ರಪಾತದತ್ತ ಬಸ್ ಇಳಿಸಿದ್ದಾನೆ. ಇತ್ತ ಬಸ್ ಪಲ್ಟಿಯಾಗಿ ಪ್ರಪಾತಕ್ಕೆ ಉರುಳಿದೆ. ಮೇಲಿನಿಂದ ಬಸ್ ಮೇಲೆ ಉಗ್ರರು ಸತತ ದಾಳಿ ನಡೆಸಿದ್ದಾರೆ. ಬಸ್ ಪ್ರಪಾತಕ್ಕೆ ಬಿದ್ದ ಪರಿಣಾಮ ಹಲವರು ಬದುಕುಳಿದಿದ್ದಾರೆ. ಬಸ್ ಚಾಲಕ ತೋರಿದ ಧೈರ್ಯ, ಹಲವರ ಜೀವ ಕಾಪಾಡಿದ ರೀತಿಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಬಸ್ ಚಾಲಕನ ಪಾರ್ಥಿವ ಶರೀರಕ್ಕೆ ಭಾರತದ ತ್ರಿವರ್ಣ ಧ್ವಜ ಹೊದಿಸಿ ಗೌರವ ನಮನ ಸಲ್ಲಿಸಲಾಗಿದೆ. 

ಜಮ್ಮುದಲ್ಲಿ ಬಸ್ ಮೇಲೆ ದಾಳಿಗೆ ಬಳಸಿದ್ದು ಅಮೆರಿಕನ್ ಗನ್: ಮಣಿಪುರದಲ್ಲೂ ಸಿಎಂ ಬೆಂಗಾವಲು ವಾಹನದ ಮೇಲೆ ಉಗ್ರರ ದಾಳಿ

370ನೇ ವಿಧಿ ರದ್ದಾದ ಬಳಿಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ.ಸುಂದರ ತಾಣಕ್ಕೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಇದೇ ವೇಳೆ ಜಮ್ಮು ಕಾಶ್ಮೀರದಲ್ಲಿರುವ ಶತ ಶತಮಾನಗಳ ಹಳೆಯ ಹಿಂದೂ ದೇವಸ್ಥಾನಗಳಿಗೆ ತೆರಳುವ ಭಕ್ತರ ಸಂಖ್ಯೆ ಕೂಡ ಹೆಚ್ಚಾಗಿದೆ. ಇದರ ನಡುವೆ ಭಯೋತ್ಪಾದಕ ದಾಳಿಗಳು ಹೆಚ್ಚಾಗುತ್ತಿರುವುದು ಆತಂಕ ಹೆಚ್ಚಿಸಿದೆ.  
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಧಾರ್ಮಿಕ ಪ್ರಾರ್ಥನೆಗೆ ಧ್ವನಿವರ್ಧಕ ಕಡ್ಡಾಯವಲ್ಲ : ಹೈಕೋರ್ಟ್‌
ಭಾರತ ಎಂದಿಗೂ ಶಾಂತಿ ಪರ : ಪುಟಿನ್‌ಗೆ ಮೋದಿ