
ನವದೆಹಲಿ (ಮೇ. 15): ಕೊರೋನಾ ಯುದ್ಧ ಸಮಯದಲ್ಲಿ ಬಿಹಾರದ ಚುನಾವಣೆ ಇದ್ದರೆ, ಯುದ್ಧ ಬಹುತೇಕ ಮುಗಿದ ನಂತರ ನಡೆಯುವ ಮೊದಲ ಚುನಾವಣೆ 2021ರಲ್ಲಿ ಪಶ್ಚಿಮ ಬಂಗಾಳದ ಮಮತಾ ದೀದಿಯದ್ದು. ಹೀಗಾಗಿ ಕೊರೋನಾ ಬಗ್ಗೆ ಮೋದಿ ಜೊತೆ ಕಾದಾಟದಲ್ಲಿ ಮಾತ್ರ ಕಾಣಿಸಿಕೊಳ್ಳುವ ದೀದಿ ಉಳಿದಂತೆ ಕೊರೋನಾ ಜೊತೆಗಿನ ಸೆಣಸಾಟವನ್ನು ಮಂತ್ರಿ ಪಾರ್ಥ ಚಟರ್ಜಿಗೆ ವಹಿಸಿದ್ದಾರೆ.
ಕೇಜ್ರಿವಾಲ್ರಂಥವರೇ ಕೊರೋನಾ ಕಾಲದಲ್ಲಿ ಮೋದಿ ವಿರುದ್ಧದ ಯುದ್ಧ ಸದ್ಯಕ್ಕೆ ಬೇಡ ಎನ್ನುತ್ತಿರುವಾಗ, ಮಮತಾ ಮಾತ್ರ ಅವಕಾಶ ಸಿಕ್ಕರೆ ಸಾಕು ಜಗಳಕ್ಕೆ ಇಳಿಯುತ್ತಾರೆ. ದೀದಿಗೆ ಗೊತ್ತಿದೆ ಮೋದಿಯನ್ನು ವಿರೋಧಿಸಿದರೆ ಮಾತ್ರ 30 ಪ್ರತಿಶತ ಮುಸ್ಲಿಮರು ಗಟ್ಟಿಯಾಗಿ ತಮ್ಮ ಪರ ನಿಲ್ಲುತ್ತಾರೆ ಎಂದು.
'ಆತ್ಮ ನಿರ್ಭರತೆ'ಗೆ ಮೋದಿ ಕರೆ: ಲಾಭದಾಯಕವಾಗುತ್ತಾ ಕೃಷಿ ಕ್ಷೇತ್ರ?
ಮಮತಾ ತಮ್ಮ ಚುನಾವಣಾ ರಣತಂತ್ರಕ್ಕೆ ಪ್ರಶಾಂತ್ ಕಿಶೋರ್ ಅವರನ್ನು ನೇಮಿಸಿಕೊಂಡಿದ್ದಾರೆ. ರಾಜಕಾರಣಿಗಳ ಸಿಟ್ಟು, ಸೇಡವು, ಪ್ರೀತಿ, ದ್ವೇಷ, ಉಪಕಾರ, ಮಮಕಾರ ಎಲ್ಲವೂ ದೊಡ್ಡ ನಾಟಕದ ವೈವಿಧ್ಯಮಯ ರಸಗಳು ಅಷ್ಟೆ. ಅಂದಹಾಗೆ, ಬೆವರು ಸುರಿಸಿ, ಬೀದಿ ಕಾಳಗ ಮಾಡಿ ಮೇಲೆ ಬಂದ ಮಮತಾ ಈಗ ತಮ್ಮನ ಮಗ ಅಭಿಷೇಕ್ ಬ್ಯಾನರ್ಜಿಯನ್ನು ಉತ್ತರಾಧಿಕಾರಿಯಂತೆ ಬಿಂಬಿಸುತ್ತಿದ್ದಾರೆ.
- ಪ್ರಶಾಂತ್ ನಾತು, ಸುವರ್ಣ ನ್ಯೂಸ್ ದೆಹಲಿ ಪ್ರತಿನಿಧಿ
ಇಂಡಿಯಾ ಗೇಟ್, ದೆಹಲಿಯಿಂದ ಕಂಡ ರಾಜಕಾರಣ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ