ರೈಲು ಬಿಡುವ 8 ಗಂಟೆ ಮುಂಚೆ ಟಿಕೆಟ್ ರದ್ದು ಮಾಡಿದ್ರಷ್ಟೇ ರೀಫಂಡ್‌

Kannadaprabha News   | Kannada Prabha
Published : Mar 25, 2026, 05:02 AM IST
Indian Railway Ticket

ಸಾರಾಂಶ

‘ರೈಲು ನಿರ್ಗಮನದ 8 ತಾಸು ಮೊದಲು ಟಿಕೆಟ್ ರದ್ದು ಮಾಡಿದ್ರಷ್ಟೇ ರೀಫಂಡ್‌... ಅಂತಿಮ 8 ತಾಸಿನೊಳಗೆ ರದ್ದು ಮಾಡಿದರೆ ರೀಫಂಡ್ ಇಲ್ಲ’ ಎಂಬ ನಿಯಮ ಸೇರಿ ರೈಲ್ವೆ ಇಲಾಖೆ , ಹೊಸ ಮರುಪಾವತಿ ಸ್ಲ್ಯಾಬ್‌ಗಳನ್ನು ಪ್ರಕಟಿಸಿದೆ. ಹೊಸ ಹೊಸ ನಿಯಮವು ಈ ವರ್ಷ ಏಪ್ರಿಲ್ 1 ರಿಂದ 15 ರವರೆಗೆ ಜಾರಿಗೆ ಬರಲಿದೆ.

ನವದೆಹಲಿ: ‘ರೈಲು ನಿರ್ಗಮನದ 8 ತಾಸು ಮೊದಲು ಟಿಕೆಟ್ ರದ್ದು ಮಾಡಿದ್ರಷ್ಟೇ ರೀಫಂಡ್‌... ಅಂತಿಮ 8 ತಾಸಿನೊಳಗೆ ರದ್ದು ಮಾಡಿದರೆ ರೀಫಂಡ್ ಇಲ್ಲ’ ಎಂಬ ನಿಯಮ ಸೇರಿ ರೈಲ್ವೆ ಇಲಾಖೆ , ಹೊಸ ಮರುಪಾವತಿ ಸ್ಲ್ಯಾಬ್‌ಗಳನ್ನು ಪ್ರಕಟಿಸಿದೆ. ಹೊಸ ಹೊಸ ನಿಯಮವು ಈ ವರ್ಷ ಏಪ್ರಿಲ್ 1 ರಿಂದ 15 ರವರೆಗೆ ಜಾರಿಗೆ ಬರಲಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ರೈಲ್ವೆ ನೆಟ್‌ವರ್ಕ್‌ ಅನ್ನು ಮೇಲ್ದರ್ಜೆಗೇರಿಸುವುದು ಮತ್ತು ಪ್ರಯಾಣಿಕರ ಸೇವೆಯನ್ನು ಉತ್ತಮಪಡಿಸುವ ಉದ್ದೇಶದಿಂದ ಸುಧಾರಣೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದಿದ್ದಾರೆ.

ಟಿಕೆಟ್‌ ರದ್ದತಿ ನಿಯಮ ಬದಲು:

ರೈಲು ಟಿಕೆಟ್ ಅನ್ನು ರೈಲಿನ ನಿರ್ಗಮನದ 8 ಗಂಟೆಗಿಂತ ಮೊದಲು ಕ್ಯಾನ್ಸಲ್‌ ಮಾಡಿದರಷ್ಟೇ ರೀಫಂಡ್‌ ಸಿಗಲಿದೆ. ರೈಲು ಬಿಡುವ ಸಮಯಕ್ಕಿಂತ ಮೊದಲಿನ ‘8 ತಾಸು ಅವಧಿ’ಯಲ್ಲಿ ರದ್ದು ಮಾಡಿದರೆ ರೀಫಂಡ್ ಇಲ್ಲ. ಕೊನೇ ಕ್ಷಣದಲ್ಲಿ ಟಿಕೆಟ್‌ ರದ್ದು ಮಾಡುವ ಅಭ್ಯಾಸ ತಡೆಯುವುದು, ಅಗತ್ಯವಿರುವ ಪ್ರಯಾಣಿಕರಿಗೆ ಟಿಕೆಟ್‌ ಲಭ್ಯವಾಗುವಂತೆ ನೋಡಿಕೊಳ್ಳಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಮುನ್ನ ಪ್ರಯಾಣದ 4 ತಾಸು ಮುಂಚಿನವರೆಗೂ ಟಿಕೆಟ್‌ ರದ್ದು ಮಾಡಿ ರೀಫಂಡ್‌ ಪಡೆಯಬಹುದಾಗಿಯತ್ತು.

ಟಿಕೆಟ್‌ ರದ್ದು ಮಾಡಿದರೆ, ಪ್ರಯಾಣಕ್ಕಿಂತ ಮುಂಚಿನ 8ರಿಂದ24 ಗಂಟೆ ಒಳಗೆ ರದ್ದಾಗುವ ಟಿಕೆಟ್‌ನ ಶೇ.50ರಷ್ಟು, 24-72 ಗಂಟೆ ನಡುವೆ ರದ್ದಾಗುವ ಟಿಕೆಟ್‌ನ ಶೇ.75ರಷ್ಟು ಹಣ ರೀಫಂಡ್‌ ಆಗಲಿದೆ. 72 ಗಂಟೆಗಿಂತ ಹಿಂದಿನ ಅವಧಿಯಲ್ಲಿ ರದ್ದು ಮಾಡಿದರೆ ಕನಿಷ್ಠ ಶುಲ್ಕವನ್ನಷ್ಟೇ ಕಡಿತ ಮಾಡಲಾಗುತ್ತದೆ.

ಕ್ಲಾಸ್‌ ಬದಲಾವಣೆಗೆ ಅ‍ವಕಾಶ:

ರೈಲು ಪ್ರಯಾಣಕ್ಕೆ 30 ನಿಮಿಷ ಮೊದಲು ಪ್ರಯಾಣಿಕರು ತಾವು ಪ್ರಯಾಣಿಸುವ ಕ್ಲಾಸ್‌ ಅನ್ನು ಮೇಲ್ದರ್ಜೆಗೇರಿಸಲೂ ಅವಕಾಶ ಸಿಗಲಿದೆ. ಈ ಹಿಂದೆ ರಿಸರ್ವೇಷನ್‌ ಚಾರ್ಚ್‌ ಸಿದ್ಧಪಡಿಸುವ ಮೊದಲಷ್ಟೇ ಈ ರೀತಿಯ ಬದಲಾವಣೆಗೆ ಅವಕಾಶವಿತ್ತು.

ಬೋರ್ಡಿಂಗ್‌ ಪಾಯಿಂಟ್‌ ಬದಲಾವಣೆ:

ರೈಲು ನಿರ್ಗಮಿಸುವ ಅರ್ಧಗಂಟೆ ಮೊದಲು ಪ್ರಯಾಣಿಕರು ತಾವು ರೈಲು ಹತ್ತುವ ಸ್ಥಳವನ್ನೂ ಬದಲಾವಣೆ ಮಾಡಿಕೊಳ್ಳಬಹುದಾಗಿದೆ. ಈ ಹಿಂದೆ ಚಾರ್ಟ್‌ ಸಿದ್ಧಪಡಿಸುವ ಮೊದಲಷ್ಟೇ ಇಂಥ ಬದಲಾವಣೆಗೆ ಅವಕಾಶ ಇತ್ತು.

ತತ್ಕಾಲ್‌ ಬುಕ್ಕಿಂಗ್‌ನಲ್ಲಿ ಬದಲಾವಣೆ:ತತ್ಕಾಲ್‌ ಬುಕ್ಕಿಂಗ್‌ಗೆ ಆಧಾರ್‌ ಆಧರಿತ ಒಟಿಪಿ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಈ ಮೂಲಕ ನಕಲಿ ಬುಕ್ಕಿಂಗ್‌ಗಳನ್ನು ತಡೆಯಲು ಕ್ರಮ ಕೈಗೊಳ್ಳಲಾಗಿದೆ.

5 ಹೊಸ ಡೆಕ್‌ಗಳು:

ಇನ್ನು ಸರಕು ಸಾಗಣೆ ಕ್ಷೇತ್ರದಲ್ಲೂ ಇಲಾಖೆ ಸುಧಾರಣೆ ತರುತ್ತಿದ್ದು, ಹೊಸ ಸಿಂಗಲ್‌ ಡೆಕ್‌ ಮತ್ತು ಡಬಲ್‌ ಡೆಕ್‌ ವ್ಯಾಗನ್‌ಗಳನ್ನು ಇಲಾಖೆ ಪರಿಚಯಿಸುತ್ತಿದೆ. ಉಪ್ಪು ಮತ್ತು ಆಟೋಮೊಬೈಲ್‌ಗಳ ಸಾಗಣೆಗೆ ಇದರಿಂದ ಅನುಕೂಲ ಆಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇ.ಡಿ. ದಾಳಿಗೆ ಅಡ್ಡಿ : ದೀದಿಗೆ ಸುಪ್ರೀಂ ಕೋರ್ಟ್‌ ಗುದ್ದು
ಹಿಂದೂ, ಸಿಖ್‌, ಬೌದ್ಧ ಧರ್ಮಕ್ಕಷ್ಟೇ ಎಸ್ಸಿ ಸ್ಥಾನ : ಸುಪ್ರೀಂಕೋರ್ಟ್‌