
ನವದೆಹಲಿ(ಜೂ 25 ) ಪ್ರಯಾಣಿಕ ರೈಲುಗಳ ಸಂಚಾರದ ಬಗ್ಗೆ ರೈಲ್ವೆ ಮಂಡಳಿ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು ಆಗಸ್ಟ್ 12ರ ತನಕ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದೆ.
"
ಸಾಮಾನ್ಯ ವೇಳಾಪಟ್ಟಿಯ ಪ್ಯಾಸೆಂಜರ್/ಮೇಲ್/ಎಕ್ಸ್ಪ್ರೆಸ್/ಸಬ್ ಅರ್ಬನ್ ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ಆಗಸ್ಟ್ 12 ರವರೆಗೆ ಬುಕಿಂಗ್ ಮಾಡಿದ್ದವರಿಗೆ ಹಣ ವಾಪಸ್ ಮಾಡುವುದಾಗಿಯೂ ತಿಳಿಸಲಾಗಿದೆ.
ಚೀನಾ ಕಂಪನಿಗೆ ಬಿಗ್ ಶಾಕ್ ನೀಡಿದ ಭಾರತೀಯ ರೈಲ್ವೆ
ಈಗಾಗಲೇ ಸಂಚಾರ ನಡೆಸುತ್ತಿರುವ 230 ವಿಶೇಷ ರೈಲುಗಳು, ಗೂಡ್ಸ್ ರೈಲು, ಅಗತ್ಯ ವಸ್ತುಗಳನ್ನು ಸಾಗಣೆ ಮಾಡುವ ವಿಶೇಷ ರೈಲುಗಳ ಸಂಚಾರ ಮುಂದುವರಿಯಲಿದೆ.
ಕೊರೋನಾ ಲಾಕ್ ಡೌನ್ ಕಾರಣಕ್ಕೆ ಮಾರ್ಚ್ 25 ರಿಂದಲೇ ಸಾಮಾನ್ಯ ರೈಲು ಸಂಚಾರ ಬಂದ್ ಮಾಡಲಾಗಿತ್ತು. ಬುಕಿಂಗ್ ಮಾಡುವ ಅವಕಾಶವನ್ನು ಸಹ ಐಆರ್ಸಿಟಿಸಿ ತೆಗೆದು ಹಾಕಲಿದ್ದು ಮುಂದಿನ ಪ್ರಕಟಣೆವರೆಗೂ ಕಾಯಬೇಕಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ