
ಚೆನ್ನೈ(ಆ.29): ತಮಿಳುನಾಡು ಬಿಜೆಪಿ ಮುಖ್ಯಸ್ಥನಾಗಿ ನೇಮಕಗೊಂಡ ತಿಂಗಳಲ್ಲೆ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮತ್ತು ಪಕ್ಷದ ಮುಖಂಡರ ನಡುವೆ ತಿಕ್ಕಾಟ ಶುರುವಾಗಿದೆ.
ಹಿರಿಯ ಬಿಜೆಪಿ ನಾಯಕ ಕೆ.ಟಿ. ರಾಘವನ್ ಇದ್ದ ಅಶ್ಲೀಲ ವಿಡಿಯೋವೊಂದನ್ನು ಬಿಡುಗಡೆ ಮಾಡುವಂತೆ ಅಣ್ಣಾಮಲೈ ಅವರೇ ಸೂಚಿಸಿದ್ದರು ಎನ್ನಲಾದ ಆಡಿಯೋ ಈಗ ಎಲ್ಲೆಡೆ ಹರಿದಾಡುತ್ತಿದೆ. ಇದು ಬಿಜೆಪಿಗೆ ಮುಜುಗರ ಉಂಟು ಮಾಡಿದೆ.
‘ವಿಡಿಯೋ ಬಿಡುಗಡೆ ಮಾಡಿದರೆ ಕೆಲವೇ ಗಂಟೆಗಳಲ್ಲಿ ಅವರನ್ನು ನಾನು ಹೊರಹಾಕುತ್ತೇನೆ. ವಿಡಿಯೋ ಬಿಡುಗಡೆಯಾಗದಿದ್ದರೆ ಅದು ನನಗೆ ದೊಡ್ಡ ತಲೆನೋವಾಗಲಿದೆ.
ನಾನು ಈ ವಿಡಿಯೋವನ್ನು ಎಲ್ಲರಿಗೂ ತೋರಿಸುತ್ತೇನೆ’ ಎಂದು ಅಣ್ಣಾಮಲೈ ಮಾತಾನಾಡಿರುವ ಆಡಿಯೋ ತುಣುಕು ವೈರಲ್ ಆಗಿದೆ. ವಿಡಿಯೋ ಬಿಡುಗಡೆಯಾದ ನಂತರ ರಾಘವನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ