
ಅಮರಾವತಿ (ನ. 06): ಗ್ರಾಮ ಪಂಚಾಯಿತಿಗಳಿಗೆ ಪಕ್ಷದ ಬಣ್ಣ ಬಳಿಸಿ ವಿವಾದ ಸೃಷ್ಟಿಸಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ, ಇದೀಗ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಹೆಸರಲ್ಲಿ ನೀಡುತ್ತಿದ್ದ ಪ್ರಶಸ್ತಿಗೆ ತನ್ನ ತಂದೆ ಹೆಸರಿಡುವ ಮೂಲಕ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ಈ ನಿರ್ಧಾರ ಭಾರೀ ಟೀಕೆಗೆ ಗುರಿಯಾದ ಬೆನ್ನಲ್ಲೇ ಅವರು ತಮ್ಮ ಆದೇಶ ವಾಪಸ್ ಪಡೆದಿದ್ದಾರೆ. ದೇಶದ ಮೊದಲ ಶಿಕ್ಷಣ ಮಂತ್ರಿ ಅಬ್ದುಲ್ ಕಲಾಂ ಅಜಾದ್ ಅವರ ಜನ್ಮದಿನವಾದ ನ.11ರಂದು ನಡೆಯುವ ರಾಷ್ಟ್ರೀಯ ಶಿಕ್ಷಣ ದಿನದಂದು ಉತ್ತಮ ಸಾಧನೆ ಮಾಡುವ ಮಕ್ಕಳಿಗೆ ಪ್ರದಾನ ಮಾಡಲಾಗುವ ‘ಎಪಿಜೆ ಅಬ್ದುಲ್ ಕಲಾಂ ಪ್ರತಿಭಾ ಪುರಸ್ಕಾರ’ ಪ್ರಶಸ್ತಿಯನ್ನು ‘ವೈಎಸ್ಆರ್ ವಿದ್ಯಾ ಪುರಸ್ಕಾರ್’ ಎಂದು ಮರುನಾಮಕರಣ ಮಾಡಲಾಗಿತ್ತು. ಇದಕ್ಕೆ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಸೇರಿದಂತೆ ಹಲವು ಮಂದಿ ವಿರೋಧ ವ್ಯಕ್ತ ಪಡಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ