
ನವದೆಹಲಿ (ಏ.8): ಉತ್ತರ ಪ್ರದೇಶದ ಮೀರತ್ನಲ್ಲಿ ಪತಿ ಸೌರಭ್ ರಜಪೂತ್ ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಜೈಲಿನಲ್ಲಿರುವ ಆರೋಪಿ ಮುಸ್ಕಾನ್ ರಸ್ತೋಗಿ ಗರ್ಭಿಣಿ ಎಂದು ವರದಿಯಾಗಿದೆ. ಅವರ ಪರೀಕ್ಷಾ ಫಲಿತಾಂಶ ಸೋಮವಾರ ದೃಢಪಟ್ಟಿದೆ ಎಂದು ವರದಿ ತಿಳಿಸಿದೆ. ಮಾರ್ಚ್ 4 ರಂದು ಮುಸ್ಕಾನ್ ರಸ್ತೋಗಿ ತನ್ನ ಪ್ರಿಯಕರ ಸಾಹಿಲ್ ಶುಕ್ಲಾ ಜೊತೆ ಸೇರಿ ಸೌರಭ್ ರಜಪೂತ್ ನನ್ನು ಇರಿದು ಕೊಂದು, ನಂತರ ಆತನ ದೇಹವನ್ನು ಹಲವಾರು ತುಂಡುಗಳಾಗಿ ಕತ್ತರಿಸಿ ಸಿಮೆಂಟ್ ತುಂಬಿದ ಡ್ರಮ್ ನೊಳಗೆ ಅಡಗಿಸಿಟ್ಟಿದ್ದರು.
ಇಬ್ಬರೂ ಆರೋಪಿಗಳನ್ನು ಮೀರತ್ ಜಿಲ್ಲಾ ಜೈಲಿನಲ್ಲಿರುವ ಪ್ರತ್ಯೇಕ ಬ್ಯಾರಕ್ಗಳಲ್ಲಿ ಇರಿಸಲಾಗಿದೆ. ಕಳೆದ ವಾರ, ಸ್ಥಳೀಯ ನ್ಯಾಯಾಲಯವು ಅವರ ನ್ಯಾಯಾಂಗ ಬಂಧನವನ್ನು ಇನ್ನೂ 14 ದಿನಗಳವರೆಗೆ ವಿಸ್ತರಿಸಿತು. ಇಂಡಿಯಾ ಟುಡೇ ವರದಿಯ ಪ್ರಕಾರ, ಮುಖ್ಯ ವೈದ್ಯಾಧಿಕಾರಿ ಅಶೋಕ್ ಕಟಾರಿಯಾ ಸೋಮವಾರ ಮುಸ್ಕಾನ್ ರಸ್ತೋಗಿಯ ಗರ್ಭಧಾರಣೆ ಪರೀಕ್ಷೆಯ ಫಲಿತಾಂಶವು ಪಾಸಿಟಿವ್ ಎಂದು ದೃಢಪಡಿಸಿದ್ದಾರೆ.
ಈ ಹಿಂದೆ, ಜೈಲು ಆಡಳಿತವು ಮುಖ್ಯಮಂತ್ರಿಯವರ ಕಚೇರಿಗೆ ಪತ್ರ ಬರೆದು ಮುಸ್ಕಾನ್ ರಸ್ತೋಗಿಯ ವೈದ್ಯಕೀಯ ಪರೀಕ್ಷೆ ನಡೆಸುವಂತೆ ಕೋರಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ, ಜಿಲ್ಲಾ ಆಸ್ಪತ್ರೆಯಿಂದ ತಂಡವನ್ನು ಜೈಲಿಗೆ ಕಳುಹಿಸಲಾಗಿತ್ತು.
ಕಳೆದ ವಾರ ಜೈಲಿನಲ್ಲಿಯೇ ಮುಸ್ಕಾನ್ ರಸ್ತೋಗಿ ಹಾಗೂ ಸಾಹಿಲ್ ಶುಕ್ಲಾ ಬಂಧನದ ಬಳಿಕ ಮೊದಲ ಬಾರಿಗೆ ಮುಖಾಮುಖಿಯಾಗಿದ್ದರು.ಜೈಲು ಆಡಳಿತವು ಇಬ್ಬರು ಆರೋಪಿಗಳ ನಡುವೆ ಯಾವುದೇ ಸಂವಹನವನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯಕ್ಕೆ ಹಾಜರಾದಾಗ ತನ್ನ ಪ್ರಿಯಕರನನ್ನು ನೋಡಿದಾಗ ರಸ್ತೋಗಿ ದುಃಖಿತಳಾದಳು ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ದೇಶವನ್ನೇ ಬೆಚ್ಚಿಬೀಳಿಸಿದ ಮೀರತ್ ಮರ್ಡರ್: ಮುಸ್ಕಾನ್ ರಸ್ತೋಗಿ ಮತ್ತು ಸಾಹುಲ್ ಶುಕ್ಲಾ ಮಾಡಿರುವ ಕೊಲೆ ದೇಶಕ್ಕೆ ಆಘಾತ ಸೃಷ್ಟಿಸಿತ್ತು. ಪ್ರಕರಣದ ತನಿಖೆಯ ವೇಳೆ ಸಾಕಷ್ಟಿ ರೋಚಕ ಅಂಶಗಳು ಬೆಳಕಿಗೆ ಬಂದಿದ್ದವು. ಕೊಲೆಯ ನಂತರ ಇಬ್ಬರೂ ಹಿಮಾಚಲ ಪ್ರದೇಶಕ್ಕೆ ಪ್ರವಾಸ ಕೈಗೊಂಡಿದ್ದರು. ತನಿಖೆಯ ಪ್ರಕಾರ, ರಸ್ತೋಗಿ ನವೆಂಬರ್ 2023 ರಿಂದ ತನ್ನ ಪತಿಯ ಕೊಲೆಗೆ ಯೋಜನೆ ರೂಪಿಸುತ್ತಿದ್ದಳು ಮತ್ತು ನಕಲಿ ಸ್ನ್ಯಾಪ್ಚಾಟ್ ಖಾತೆಯ ಮೂಲಕ ಸಾಹಿಲ್ ಶುಕ್ಲಾಳನ್ನು ತನ್ನ ಮೃತ ತಾಯಿಯಂತೆ ನಟಿಸುವ ಮೂಲಕ ಅಪರಾಧದಲ್ಲಿ ಭಾಗಿಯಾಗಿದ್ದಾಳೆ ಎಂದು ತಿಳಿದುಬಂದಿದೆ.
ಜೈಲಲ್ಲಿ ಪ್ರೇಮಿಯ ಜೊತೆ ಸಹ ಜೀವನ, ಡ್ರಗ್ಸ್ಗೆ ಬೇಡಿಕೆ ಇಟ್ಟ ಮರ್ಚಂಟ್ ನೇವಿ ಅಧಿಕಾರಿ ಕೊಂದ ಹಂತಕಿ
ಇದಲ್ಲದೆ, ಸೌರಭ್ ರಜಪೂತ್ ಅವರ ಮರಣೋತ್ತರ ಪರೀಕ್ಷೆಯ ವರದಿಯು ಅವರ ಕೊಲೆಯಲ್ಲಿ ತೀವ್ರ ಕ್ರೌರ್ಯವನ್ನು ಬಹಿರಂಗಪಡಿಸಿತ್ತು. ಅವರ ತಲೆಯನ್ನು ದೇಹದಿಂದ ಬೇರ್ಪಡಿಸಲಾಗಿತ್ತು, ಎರಡೂ ಕೈಗಳನ್ನು ಮಣಿಕಟ್ಟಿನಿಂದ ಕತ್ತರಿಸಲಾಗಿತ್ತು ಮತ್ತು ಅವರ ಕಾಲುಗಳನ್ನು ಹಿಂದಕ್ಕೆ ಬಗ್ಗಿಸಲಾಗಿತ್ತು, ಇದು ದೇಹವನ್ನು ಡ್ರಮ್ಗೆ ಅಳವಡಿಸುವ ಪ್ರಯತ್ನವನ್ನು ಸೂಚಿಸುತ್ತದೆ ಎಂದು ಶವಪರೀಕ್ಷೆ ವರದಿ ಬಹಿರಂಗಪಡಿಸಿದೆ. ಅವರ ಸಾವು ಆಘಾತ ಮತ್ತು ಅತಿಯಾದ ರಕ್ತಸ್ರಾವದಿಂದ ಉಂಟಾಗಿದೆ ಎಂದು ಹೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ