ಕ್ರೈಸ್ತರಾಗಿ ಮತಾಂತರ ಆದ ಎಸ್‌ಸಿ ಸಮುದಾಯಕ್ಕೆ ಮೀಸಲಾತಿ!

Published : Apr 20, 2023, 06:52 AM IST
ಕ್ರೈಸ್ತರಾಗಿ ಮತಾಂತರ ಆದ ಎಸ್‌ಸಿ ಸಮುದಾಯಕ್ಕೆ ಮೀಸಲಾತಿ!

ಸಾರಾಂಶ

ಕ್ರೈಸ್ತ ಧರ್ಮಕ್ಕೆ ಮತಾಂತರವಾದ ಪರಿಶಿಷ್ಟಜಾತಿ ಸಮುದಾಯದ ಎಲ್ಲಾ ಜನರಿಗೆ ಹಿಂದಿನಂತೆ ಎಲ್ಲಾ ಸವಲತ್ತುಗಳನ್ನು ಮುಂದುವರೆಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಗೊತ್ತುವಳಿಯನ್ನು ತಮಿಳುನಾಡು ವಿಧಾನಸಭೆ ಬುಧವಾರ ಅಂಗೀಕರಿಸಿದೆ.

ಚೆನ್ನೈ: ಕ್ರೈಸ್ತ ಧರ್ಮಕ್ಕೆ ಮತಾಂತರವಾದ ಪರಿಶಿಷ್ಟಜಾತಿ ಸಮುದಾಯದ ಎಲ್ಲಾ ಜನರಿಗೆ ಹಿಂದಿನಂತೆ ಎಲ್ಲಾ ಸವಲತ್ತುಗಳನ್ನು ಮುಂದುವರೆಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಗೊತ್ತುವಳಿಯನ್ನು ತಮಿಳುನಾಡು ವಿಧಾನಸಭೆ ಬುಧವಾರ ಅಂಗೀಕರಿಸಿದೆ. ಮತಾಂತರಗೊಂಡ ಪರಿಶಿಷ್ಟರಿಗೂ ಶಿಕ್ಷಣ, ಉದ್ಯೋಗದಲ್ಲಿ ಮೀಸಲು ಕಲ್ಪಿಸಿದರೆ ಅದರಿಂದ ಮತಾಂತರಗೊಂಡ ದಲಿತರ ಅಭಿವೃದ್ಧಿಗೂ ಉಪಯೋಗವಾಗಲಿದೆ ಎಂದು ಮುಖ್ಯಮಂತ್ರಿ ಸ್ಟಾಲಿನ್‌ ಹೇಳಿದರು. ಜನರಿಗೆ ಅವರಿಗೆ ಬೇಕಾದ ಧರ್ಮವನ್ನು ಆಚರಿಸುವ ಹಕ್ಕು ಇದೆ. ಆದರೆ ಅವರನ್ನು ಜಾತಿ ಆಧಾರದಲ್ಲಿ ಬೇರ್ಪಡಿಸುವುದು ಮಾತ್ರ ಅಪರಾಧ. ಹೀಗಾಗಿ ನಾವು ಕೇಂದ್ರ ಸರ್ಕಾರಕ್ಕೆ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ನಂತರವು ಪರಿಶಿಷ್ಟರಿಗೆ ತಮ್ಮ ಎಸ್‌ಸಿ ಸೌಲಭ್ಯ ಒದಗಿಸುವಂತೆ ನಾವು ಮನವಿ ಮಾಡುತ್ತೇವೆ ಎಂದು ಸ್ಟಾಲಿನ್‌ ಹೇಳಿದರು. ಈ ವೇಳೆ ಬಿಜೆಪಿ ಸಭಾತ್ಯಾಗ ಮಾಡಿತು.

ಕ್ರೈಸ್ತ ಧರ್ಮಕ್ಕೆ ಮತಾಂತರವಾದ ಬಳಿಕ SC ಸರ್ಟಿಫಿಕೇಟ್‌ಗೆ ಬೆಲೆ ಇಲ್ಲ: ಈ ಕ್ಷೇತ್ರದ ಚುನಾವಣೆ ಅಸಿಂಧುಗೊಳಿಸಿದ ಹೈಕೋರ್ಟ್..!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ
ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್