ಮೀಸಲಾತಿ ಮೂಲಭೂತ ಹಕ್ಕಲ್ಲ, ಸರ್ಕಾರದ ವಿವೇಚನೆಗೆ ಬಿಟ್ಟ ವಿಚಾರ: ಸುಪ್ರೀಂ

Published : Feb 09, 2020, 02:40 PM ISTUpdated : Feb 09, 2020, 05:36 PM IST
ಮೀಸಲಾತಿ ಮೂಲಭೂತ ಹಕ್ಕಲ್ಲ, ಸರ್ಕಾರದ ವಿವೇಚನೆಗೆ ಬಿಟ್ಟ ವಿಚಾರ: ಸುಪ್ರೀಂ

ಸಾರಾಂಶ

ಮೀಸಲು ಮೂಲಭೂತ ಹಕ್ಕಲ್ಲ: ಸುಪ್ರೀಂಕೋರ್ಟ್‌| ಮೀಸಲು ಕೊಡಿ ಎಂದು ಆದೇಶಿಸುವ ಅಧಿಕಾರ ಕೋರ್ಟುಗಳಿಗೆ ಇಲ್ಲ| ಸರ್ಕಾರಗಳು ವಿವೇಚನೆ ಬಳಸಿ ಮೀಸಲು ಕೊಡಬಹುದು, ಕಡ್ಡಾಯ ಅಲ್ಲ

ನವದೆಹಲಿ[ಫೆ.09]: ಪರಿಶಿಷ್ಟಜಾತಿ ಹಾಗೂ ಪಂಗಡಗಳಿಗೆ ಉದ್ಯೋಗ ಮತ್ತು ಬಡ್ತಿಯಲ್ಲಿ ಮೀಸಲಾತಿ ನೀಡುವುದು ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟವಿಚಾರ. ಸರ್ಕಾರಿ ಉದ್ಯೋಗದಲ್ಲಿ ಮೀಸಲು ಬೇಕೇಬೇಕು ಎಂದು ಕೇಳುವುದಕ್ಕೆ ಅದು ಯಾವುದೇ ಮೂಲಭೂತ ಹಕ್ಕು ಇಲ್ಲ. ಮೀಸಲು ನೀಡುವಂತೆ ಸರ್ಕಾರಗಳಿಗೆ ಆದೇಶಿಸುವ ಅಧಿಕಾರ ನ್ಯಾಯಾಲಯಗಳಿಗೂ ಇಲ್ಲ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ಪ್ರಕಟಿಸಿದೆ.

ರಾಜ್ಯ ಸರ್ಕಾರಗಳು ಕೂಡ ಕಡ್ಡಾಯವಾಗಿ ಮೀಸಲು ನೀಡಬೇಕು ಎಂದೇನೂ ಇಲ್ಲ. ಮೀಸಲು ನೀಡಬೇಕೇ, ಬೇಡವೇ ಎಂಬ ವಿಚಾರ ರಾಜ್ಯಗಳ ವಿವೇಚನೆಗೆ ಸಂಬಂಧಿಸಿದ್ದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಮೀಸಲು ನೀಡಿಕೆ ಸಂದರ್ಭದಲ್ಲಿ ಸರ್ಕಾರಿ ನೌಕರಿಗಳಲ್ಲಿ ಎಸ್‌ಸಿ-ಎಸ್‌ಟಿಗೆ ಸೂಕ್ತ ಪ್ರಾತಿನಿಧ್ಯ ಇದೆಯೇ ಎಂಬ ಬಗ್ಗೆ ರಾಜ್ಯ ಸರ್ಕಾರಗಳು ಅಂಕಿ-ಅಂಶಗಳನ್ನು ಸಂಗ್ರಹಿಸಬೇಕು. ಅಗತ್ಯವಿಲ್ಲ ಎಂದು ಕಂಡುಬಂದಲ್ಲಿ ಮೀಸಲು ನೀಡಬೇಕಿಲ್ಲ ಎಂದು ನ್ಯಾ| ಎಲ್‌. ನಾಗೇಶ್ವರರಾವ್‌ ಹಾಗೂ ನ್ಯಾ| ಹೇಮಂತ ಗುಪ್ತಾ ಅವರನ್ನು ಒಳಗೊಂಡ ಪೀಠ ಹೇಳಿದೆ.\

ಕನ್ನಡಿಗರಿಗೇ ಮೊದಲ ಆದ್ಯತೆ, ಶೇ.75ರಷ್ಟು ಉದ್ಯೋಗ ಮೀಸಲಾತಿಗೆ ಸರ್ಕಾರದ ಸಿದ್ಧತೆ!

ಸಂವಿಧಾನದ 16ನೇ ಪರಿಚ್ಛೇದದ ಪ್ರಕಾರ ಎಸ್‌ಸಿ-ಎಸ್‌ಟಿ ಸಮುದಾಯಕ್ಕೆ ಮೀಸಲು ನೀಡುವ ವಿವೇಚನೆ ರಾಜ್ಯ ಸರ್ಕಾರಗಳಿಗೆ ಬಿಟ್ಟಿದ್ದಾಗಿದೆ. ಆದರೆ ಸರ್ಕಾರಿ ಹುದ್ದೆಗಳಲ್ಲಿ ಮೀಸಲು ನೀಡಿ ಎಂದು ರಾಜ್ಯ ಸರ್ಕಾರಗಳಿಗೆ ಆದೇಶ ನೀಡಲಾಗದು. ರಾಜ್ಯ ಸರ್ಕಾರಗಳು ಕೂಡ ಬಡ್ತಿಯಲ್ಲಿ ಮೀಸಲು ನೀಡಲೇಬೇಕು ಎಂದೇನಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಉತ್ತರಾಖಂಡ ಸರ್ಕಾರದ ಲೋಕೋಪಯೋಗಿ ಇಲಾಖೆಯ ಅಸಿಸ್ಟಂಟ್‌ ಸಿವಿಲ್‌ ಎಂಜಿನಿಯರ್‌ ಹುದ್ದೆಗೆ ಬಡ್ತಿ ಮೀಸಲು ನೀಡುವ ವಿಚಾರಕ್ಕೆ ಸಂಬಂಧಿಸಿದ ವ್ಯಾಜ್ಯದಲ್ಲಿ ಕೋರ್ಟ್‌ ಈ ನಿರ್ಣಯ ನೀಡಿದೆ. ಉತ್ತರಾಖಂಡ ಸರ್ಕಾರ ಬಡ್ತಿ ಮೀಸಲು ನೀಡಲು ನಿರಾಕರಿಸಿತ್ತು. ಇದು ಹೈಕೋರ್ಟ್‌ ಮೆಟ್ಟಿಲೇರಿದಾಗ, ಸರ್ಕಾರಿ ಹುದ್ದೆಗಳಲ್ಲಿ ಎಸ್‌ಸಿ/ಎಸ್ಟಿಪ್ರಾತಿನಿಧ್ಯ ಕುರಿತ ಮಾಹಿತಿ ಸಂಗ್ರಹಿಸಿ ಬಳಿಕ ನಿರ್ಧಾರ ಕೈಗೊಳ್ಳುವಂತೆ ಸೂಚಿಸಿತ್ತು.

ಫೆಬ್ರವರಿ 9ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಡಿಗೆದಾರರ ಮನೆಯಿಂದ ಹೊರಹಾಕಲು ಬಂದ ಮಾಲೀಕನಿಗೆ ಆಘಾತ, ತಾಯಿ-ಇಬ್ಬರು ಮಕ್ಕಳ ಶವಪತ್ತೆ
ಕೇರಳ ರಾಜಧಾನಿಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿಗೆ ಭರ್ಜರಿ ಗೆಲುವು, 45 ವರ್ಷದ LDF ಅಧಿಪತ್ಯ ಅಂತ್ಯ