ಕೇಂದ್ರ ಬಜೆಟ್‌ನಲ್ಲಿ 50 ಸಾವಿರ ಕೋಟಿ ನೀಡುವಂತೆ ಕಿಂಗ್‌ ಮೇಕರ್‌ಗಳ ಪಟ್ಟು

Published : Jul 10, 2024, 11:41 AM IST
ಕೇಂದ್ರ ಬಜೆಟ್‌ನಲ್ಲಿ 50 ಸಾವಿರ ಕೋಟಿ ನೀಡುವಂತೆ ಕಿಂಗ್‌ ಮೇಕರ್‌ಗಳ ಪಟ್ಟು

ಸಾರಾಂಶ

ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಜು.23 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್‌ನಿಂದ ತಮ್ಮ ರಾಜ್ಯಗಳಿಗೆ ಸುಮಾರು 50 ಸಾವಿರ ಕೋಟಿ ರು.ಗೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ನವದೆಹಲಿ: ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಜು.23 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್‌ನಿಂದ ತಮ್ಮ ರಾಜ್ಯಗಳಿಗೆ ಸುಮಾರು 50 ಸಾವಿರ ಕೋಟಿ ರು.ಗೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಮೋದಿ ಸರ್ಕಾರ ಈ ಇಬ್ಬರ ಪಕ್ಷಗಳಾದ ಟಿಡಿಪಿ ಹಾಗೂ ಜೆಡಿಯು ಬೆಂಬಲ ಆಧರಿಸಿಯೇ ಜೀವಿತವಾಗಿದೆ. ಹೀಗಾಗಿ ಇವರ ಬೇಡಿಕೆಯು ಮೋದಿಗೆ ತಲೆನೋವಾಗಿ ಪರಿಣಮಿಸುವ ಸಾಧ್ಯತೆ ಇದೆ.

ಎರಡು ರಾಜ್ಯಗಳು 2025ನೇ ಸಾಲಿಗೆ ಹೆಚ್ಚುವರಿ ನಿಧಿಯಾಗಿ ಸುಮಾರು 48,000 ಕೋಟಿ ರು.ಗೆ ಬೇಡಿಕೆ ಇಟ್ಟಿವೆ. ಇದರ ಜತೆಗೆ ಕೇಂದ್ರವು ಬಂಡವಾಳ ವೆಚ್ಚಕ್ಕಾಗಿ ನೀಡುವ 1 ಲಕ್ಷ ಕೋಟಿ ರು. ಬಡ್ಡಿ ರಹಿತ ದೀರ್ಘಾವಧಿಯ ಸಾಲವನ್ನು ದ್ವಿಗುಣಗೊಳಿಸಲು ರಾಜ್ಯಗಳು ಕೇಳಿಕೊಂಡಿವೆ ಎಂದು ವರದಿ ಹೇಳಿದೆ. ಈ ಹಿಂದಿನ ಸಾಲಿನಲ್ಲಿ ಕೇಂದ್ರ ಸರ್ಕಾರವು ರಾಜ್ಯಗಳಿಗೆ ವಿಶೇಷ ಸಹಾಯಕ್ಕಾಗಿ 1.3 ಲಕ್ಷ ಕೋಟಿ ರು. ಮೀಸಲಿಟ್ಟಿತ್ತು.

ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಿ: ಕೇಂದ್ರ ಸರ್ಕಾರಕ್ಕೆ ಕಿಂಗ್ ಮೇಕರ್‌ ಜೆಡಿಯುನಿಂದ ಆಗ್ರಹ

ಇದೇ ವೇಳೆ, ಈ ರಾಜ್ಯಗಳು ಮಾರುಕಟ್ಟೆಯಿಂದ ಸಾಲ ಪಡೆಯಲು ಇರುವ ನಿಯಮಗಳ ಸಡಿಲಿಕೆಗೆ ಬೇಡಿಕೆ ಇರಿಸಿವೆ. ಈಗ ಕೇಂದ್ರ ಸರ್ಕಾರವು ಸಾಲದ ಮಿತಿಯನ್ನು ರಾಜ್ಯದ ಆದಾಯ ಅಥವಾ ಒಟ್ಟು ರಾಜ್ಯ ದೇಶೀಯ ಉತ್ಪನ್ನದ (ಜಿಎಸ್‌ಡಿಪಿ) ಶೇ.3ಕ್ಕೆಸೀಮಿತಗೊಳಿಸಿದೆ. ಬಿಹಾರ ನಿರ್ದಿಷ್ಟವಾಗಿ 9 ಹೊಸ ವಿಮಾನ ನಿಲ್ದಾಣಗಳು, 2 ವಿದ್ಯುತ್ ಯೋಜನೆಗಳು, 2 ನದಿ ನೀರಿನ ಯೋಜನೆ ಮತ್ತು ಯಾವುದೇ ನಿರ್ದಿಷ್ಟ ಕಾಲಮಿತಿಯಿಲ್ಲದೆ 7 ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಹಣ ನೀಡುವಂತೆ ಕೋರಿದೆ.

ರಾಹುಲ್‌ ಗಾಂಧಿ ರೀತಿ ವರ್ತಿಸಬೇಡಿ: ಬಿಜೆಪಿ ಸಂಸದರಿಗೆ ಮೋದಿ ಕಿವಿಮಾತು

ಇನ್ನು ಆಂಧ್ರಪ್ರದೇಶವು ರಾಜ್ಯದ ರಾಜಧಾನಿ ಅಮರಾವತಿಯನ್ನು ಅಭಿವೃದ್ಧಿಪಡಿಸಲು ಮತ್ತು ನೀರಾವರಿ ಯೋಜನೆಗೆ ಹಣವನ್ನು ಕೋರಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನನ್ನ ಜೊತೆಗೂ ಬಾ: ಗೆಳೆಯನ ಗರ್ಲ್‌ಫ್ರೆಂಡ್‌ಗೆ ಸಂದೇಶ: ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ
ರಣವೀರ್ ನಟನೆಯ ಧುರಂಧರ್ ಸಿನಿಮಾದ ಕತೆ ಭಾರತೀಯ ಸೇನೆಯ ಹೀರೋ ಮೇಜರ್ ಮೋಹಿತ್ ಶರ್ಮಾ ಅವರದ್ದಾ?