ಕೊರೋನಾ ಲಸಿಕೆ, ಸಿಹಿ ಸುದ್ದಿ ಕೊಟ್ಟ AIIMS ನಿರ್ದೇಶಕ ಡಾ. ಗುಲೇರಿಯಾ!

By Suvarna NewsFirst Published Jul 24, 2021, 1:27 PM IST
Highlights

* ಭಾರತದಲ್ಲಿ ಮಕ್ಕಳಿಗೆ ಕೊರೋನಾ ಲಸಿಕೆ ಅಭಿಯಾನ ಸೆಪ್ಟೆಂಬರ್ ವೇಳೆಗೆ ಪ್ರಾರಂಭ

* ಗುಡ್‌ನ್ಯೂಸ್‌ ಕೊಟ್ಟ ಏಮ್ಸ್ ನಿರ್ದೇಶಕ ಡಾ. ಗುಲೇರಿಯಾ

* ಅನೇಕ ಕಂಪನಿಗಳು ಮಕ್ಕಳಿಗೆ ಕೋವಿಡ್ -19 ಲಸಿಕೆ ತಯಾರಿಸುವಲ್ಲಿ ನಿರತ

ನವದೆಹಲಿ(ಜು.24): ಭಾರತದಲ್ಲಿ ಮಕ್ಕಳಿಗೆ ಕೊರೋನಾ ಲಸಿಕೆ ಅಭಿಯಾನ ಸೆಪ್ಟೆಂಬರ್ ವೇಳೆಗೆ ಪ್ರಾರಂಭವಾಗಬಹುದು. ಏಮ್ಸ್ ನಿರ್ದೇಶಕ ಡಾ.ರಣ್ದೀಪ್ ಗುಲೇರಿಯಾ ಸಂವಾದ ಒಂದರಲ್ಲಿ ಇಂತಹುದ್ದೊಂದು ಸಿಹಿ ಸುದ್ದಿ ಕೊಟ್ಟಿದ್ದಾರೆ. ಈವರೆಗೆ ಭಾರತದಲ್ಲಿ ವಯಸ್ಕರಿಗೆ 42 ಕೋಟಿಗೂ ಹೆಚ್ಚು ಕೊರೋನಾ ಲಸಿಕೆ ಪ್ರಮಾಣವನ್ನು ನೀಡಲಾಗಿದೆ. ಈ ವರ್ಷದ ಅಂತ್ಯದ ವೇಳೆಗೆ ಎಲ್ಲಾ ವಯಸ್ಕರಿಗೆ ಕೊರೋನಾ ಲಸಿಕೆ ನೀಡುವ ದೊಡ್ಡ ಗುರಿಯನ್ನು ಸರ್ಕಾರ ನಿಗದಿಪಡಿಸಿದೆ. ಇದಕ್ಕಾಗಿ ಪ್ರತಿದಿನ ಸುಮಾರು 1 ಕೋಟಿ ಲಸಿಕೆ ಪ್ರಮಾಣವನ್ನು ಅನ್ವಯಿಸಬೇಕಾಗುತ್ತದೆ. ಪ್ರಸ್ತುತ, ಪ್ರತಿದಿನ 40 ರಿಂದ 50 ಲಕ್ಷ ಕೊರೋನಾ ಲಸಿಕೆಗಳನ್ನು ನೀಡಲಾಗುತ್ತಿದೆ, ಆದರೆ ವಾರಾಂತ್ಯದಲ್ಲಿ ಈ ಸಂಖ್ಯೆ ಮತ್ತಷ್ಟು ಕಡಿಮೆಯಾಗುತ್ತದೆ. ಇನ್ನೂ ಅನೇಕ ಕಂಪನಿಗಳು ಮಕ್ಕಳಿಗೆ ಕೋವಿಡ್ -19 ಲಸಿಕೆ ತಯಾರಿಸುವಲ್ಲಿ ನಿರತವಾಗಿವೆ ಎಂದು ತಿಳಿಸಿದ್ದಾರೆ. 

ಮಕ್ಕಳಿಗೆ ತಗುಲುವ ಕೊರೋನಾ ಸರಪಳಿಯನ್ನು ಮುರಿಯಲು ಲಸಿಕೆ ಪ್ರಮುಖ ಹೆಜ್ಜೆಯಾಗಿದೆ ಎಂದು ಡಾ. ರಣ್ದೀಪ್ ಗುಲೇರಿಯಾ ಹೇಳಿದ್ದಾರೆ. ಝೈಡಸ್ ಕ್ಯಾಡಿಲಾ ಪ್ರಯೋಗಗಳನ್ನು ನಡೆಸಿದೆ ಹಾಗೂ ತುರ್ತು ಬಳಕೆಯ ಅನುಮೋದನೆಗಾಗಿ ಕಾಯುತ್ತಿದೆ. ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಪ್ರಯೋಗವನ್ನು ಮಕ್ಕಳ ಮೇಲೆ ಆಗಸ್ಟ್ ಅಥವಾ ಸೆಪ್ಟೆಂಬರ್ ವೇಳೆಗೆ ಪೂರ್ಣಗೊಳಿಸಬಹುದು. ಆ ಹೊತ್ತಿಗೆ ಮಕ್ಕಳ ಕೋವಿಡ್ -19 ಲಸಿಕೆಗೆ ಹಸಿರು ನಿಶಾನೆ ನೀಡಬಹುದು ಎಂದು ಗುಲೇರಿಯಾ ತಿಳಿಸಿದ್ದಾರೆ.

ಜಗತ್ತಿನಲ್ಲಿ, ಮಕ್ಕಳಿಗಾಗಿ ತಯಾರಿಸಿದ ಫೈಝರ್ ಲಸಿಕೆಯನ್ನು ಈಗಾಗಲೇ ಯುಎಸ್ ಆರೋಗ್ಯ ಸಂಸ್ಥೆ ಆಹಾರ ಮತ್ತು ಔಷಧ ನಿಯಂತ್ರಕದಿಂದ ಅನುಮೋದಿಸಲಾಗಿದೆ. ಸೆಪ್ಟೆಂಬರ್‌ನಿಂದ ನಾವು ಮಕ್ಕಳಿಗೆ ವ್ಯಾಕ್ಸಿನೇಷನ್ ಪ್ರಾರಂಭಿಸಲು ಸಾಧ್ಯವಾಗುತ್ತದೆ ಮತ್ತು ಇದು ಕೊರೋನಾ ವೈರಸ್‌ನ ಸರಪಳಿಯನ್ನು ಮುರಿಯುವಲ್ಲಿ ಉತ್ತಮ ಯಶಸ್ಸನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.

ಭಾರತ ಈವರೆಗೂ ಒಟ್ಟು 42 ಕೋಟಿಗೂ ಹೆಚ್ಚು ಕೊರೋನಾ ಲಸಿಕೆಗಳನ್ನು ನೀಡಿದೆ. 2021 ರ ಅಂತ್ಯದ ವೇಳೆಗೆ, 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಕೊರೋನಾ ಲಸಿಕೆ ಪ್ರಮಾಣವನ್ನು ನೀಡಬೇಕು ಎಂಬುದು ಸರ್ಕಾರದ ಉದ್ದೇಶ. ಆದರೆ, ದೇಶದ ಮಕ್ಕಳಿಗೆ ಕೊರೋನಾ ಲಸಿಕೆ ಇನ್ನೂ ಅನುಮೋದನೆ ನೀಡಿಲ್ಲ. ಕೊರೋನದ ಮೂರನೇ ಅಲೆ ತಡೆಗಟ್ಟಲು, ಆದಷ್ಟು ಬೇಗ ಮಕ್ಕಳಿಗೆ ಲಸಿಕೆ ಹಾಕುವುದು ಅಗತ್ಯ ಎಂದೂ ಅವರು ತಿಳಿಸಿದ್ದಾರೆ.

click me!