
ನವದೆಹಲಿ(ಮೇ.02): ದೇಶದ ಉತ್ತರದ ರಾಜ್ಯಗಳಲ್ಲಿ ಉಷ್ಣ ಮಾರುತದ ಪ್ರಭಾವ ಭಾನುವಾರವೂ ಮುಂದುವರೆದಿದ್ದು, ಹಲವು ರಾಜ್ಯಗಳಲ್ಲಿ ಭಾರೀ ಪ್ರಮಾಣದ ಉಷ್ಣಾಂಶ ದಾಖಲಾಗಿದೆ. ರಾಜಸ್ಥಾನದ ಬಿಕಾನೇರ್ನಲ್ಲಿ ಗರಿಷ್ಠ 47.1 ಡಿಸೆ ಉಷ್ಣಾಂಶ ದಾಖಲಾಗಿದೆ. ಉಳಿದಂತೆ ಶ್ರೀಗಂಗಾನಗರ್ದಲ್ಲಿ 46.9 ಡಿ.ಸೆ, ಅಲಹಾಬಾದ್, ಲಖನೌ, ಝಾನ್ಸಿ, ಸತ್ನಾ, ಗುರುಗ್ರಾಮದಲ್ಲಿ ದಾಖಲೆಯ 46.8 ಡಿ.ಸೆ ಉಷ್ಣಾಂಶ ದಾಖಲಾಗಿದೆ.
ಈ ನಡುವೆ ಉಷ್ಣಾಂಶ ಭಾರೀ ಪ್ರಮಾಣದಲ್ಲಿ ಏರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಉಷ್ಣ ಸಂಬಂಧಿ ಕಾಯಿಲೆಗಳ ನಿರ್ವಹಣೆಗೆ ಅಗತ್ಯ ಪ್ರಮಾಣದ ಔಷಧಿ, ವೈದ್ಯಕೀಯ ಉಪಕರಣಗಳ ಲಭ್ಯತೆಯಿರುವುದಾಗಿ ಖಾತ್ರಿ ಪಡಿಸಿಕೊಳ್ಳುವಂತೆ ಸೂಚನೆ ನೀಡಿದೆ.
ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದಾರೆ. ರಾಷ್ಟ್ರೀಯ ಕ್ರಿಯಾ ಯೋಜನೆಯಡಿ ಉಷ್ಣ ಸಂಬಂಧಿತ ಕಾಯಿಲೆಗಳ ನಿರ್ವಹಣೆಗೆ ಮಾರ್ಗಸೂಚಿಯನ್ನು ಹೊರಡಿಸಿದ್ದು, ಉಷ್ಣ ಸಂಬಂಧಿ ಕಾಯಿಲೆಗಳ ಬಗ್ಗೆ ದೈನಂದಿನ ನಿಗಾ ವರದಿಯನ್ನು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (ಎನ್ಸಿಡಿಸಿ)ಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ