#ಸದ್ಗತಿ Live Blog: ಕೊರೋನಾದಿಂದ ಕೊನೆಯುಸಿರೆಳೆದ ಗಣ್ಯರು

ಈ ಕೊರೋನಾ ವೈರಸ್ ವಿಶ್ವಕ್ಕೆ ವಕ್ಕರಿಸಿ, ಅನುಭವಿಸುತ್ತಿರುವ ನೋವು ಒಂದೆರಡಲ್ಲ. ಈ ದುರಿತ ಕಾಲದಲ್ಲಿ ಇನ್ನೇನು ನೋಡಬೇಕೋ ಎಂಬ ಭಯ ಮನುಷ್ಯನಿಗೆ ಸಾಮಾನ್ಯವಾಗಿದೆ. ಸಾವು ಜೀವನದ ಕಹಿ ವಾಸ್ತವ ಹೌದು. ಆದರೂ ನೆರೆಹೊರೆಯವರು, ಬಂಧು ಬಾಂಧವರು ಹಾಗೂ ಸ್ನೇಹಿತರು, ಸಹೋದ್ಯೋಗಿಗಳನ್ನು ಕಳೆದುಕೊಳ್ಳುತ್ತಿರುವ ಮನಸ್ಸು ಜರ್ಜರಿತವಾಗುತ್ತಿದೆ. ಒಂದು ಸುದ್ದಿ ಕೇಳಿ ಸುಧಾರಿಸಿಕೊಳ್ಳುತ್ತಿದ್ದಂತೆ, ಮತ್ತೊಂದು ಸಾವಿನ ಸುದ್ದಿ ಬರ ಸಿಡಿಲಿನಂತೆ ಬಂದು ಒಕ್ಕರಿಸುತ್ತದೆ. ಯಾವ ವರ್ಗ, ಜಾತಿ, ಧರ್ಮದವರನ್ನೂ ಬಿಡದೇ ಕಾಡುತ್ತಿರುವ ಈ ರೋಗ ದಿನಕ್ಕೆ ಹಲವಾರು ಗಣ್ಯರನ್ನೂ ಆಪೋಷನ ತೆಗೆದುಕೊಳ್ಳುತ್ತಿದೆ. ಹಾಗೆ ನಮ್ಮನ್ನು ಅಗಲುತ್ತಿರುವ ಜೀವಗಳ ಕಿರು ಮಾಹಿತಿ ಇಲ್ಲಿದೆ. 

9:24 AM

ಬಿಜೆಪಿ ಹಿರಿಯ ನಾಯಕ ಪ್ರಕಾಶ್ ಗೋಡಬೋಲೆ ನಿಧನ

ಧಾರವಾಡದ ಪಾಲಿಕೆ ಮಾಜಿ ಸದಸ್ಯ ಹಾಗೂ ಬಿಜೆಪಿ ಹಿರಿಯ ನಾಯಕ ಪ್ರಕಾಶ್ ಗೋಡಬೋಲೆ ನಿಧನ. ಕೋವಿಡ್ ಹಿನ್ನೆಲೆಯಲ್ಲಿ ಕಳೆದ 40 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಳಗ್ಗೆ ನಿಧನ

6:25 PM

ವಿಶ್ರಾಂತ ಕುಲಪತಿ ಪ್ರೊ. ಎಚ್. ಎಂ. ಮಹೇಶ್ವರಯ್ಯ ನಿಧನ

ಮೂಲತಃ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಹಿತ್ತಲ ಗ್ರಾಮದವರಾದ ಪ್ರೊ. ಮಹೇಶ್ವರಯ್ಯ ಅವರು ಧಾರವಾಡದ ಕರ್ನಾಟಕ ವಿ.ವಿ.ಯ ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ, ವಿದ್ಯಾರ್ಥಿ ಕಲ್ಯಾಣ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ನಂತರ ಕಲಬುರ್ಗಿಯ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿ.ವಿ. ಕುಲಪತಿಗಳಾಗಿ ಕಾರ್ಯನಿರ್ವಹಿಸಿದ್ದರು. ನಿವೃತ್ತಿಯ ಬಳಿಕ ಧಾರವಾಡಕ್ಕೆ ತಮ್ಮ ವಾಸ್ತವ್ಯ ಬದಲಾಯಿಸಿದ್ದರು. ಅವರಿಗೆ ಪತ್ನಿ. ಕೆಸಿಡಿ ಕಾಲೇಜಿನ ನಿವೃತ್ತ ಪ್ರಾಚಾರ್ಯೆ ಪ್ರೊ. ರಾಜೇಶ್ವರಿ ಮಹೇಶ್ವರಯ್ಯ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ಅವರಿಗೆ ಬ್ಲಾಕ್ ಫಂಗಸ್ ಆಗಿತ್ತು ಎಂಬ ಮಾಹಿತಿ ಇದೆ.

6:27 PM

ನಾಡೋಜ ಸಿದ್ದಲಿಂಗಯ್ಯ ಇನ್ನಿಲ್ಲ

ಬಂಡಾಯ ಸಾಹಿತಿ, ದಲಿತ ಕವಿ, ಕನ್ನಡದ ಮೇರು ಸಾಹಿತಿ ನಾಡೋಜ ಡಾ.ಸಿದ್ದಲಿಂಗಯ್ಯ ವಿಧಿವಶರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಕೋವಿಡ್‌ ಸೋಂಕಿನಿಂದ ಬಳಲುತ್ತಿದ್ದ ಸಿದ್ದಲಿಂಗಯ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 

ಸಂಪೂರ್ಣ ಸುದ್ದಿ ಓದಲು ಕ್ಲಿಕ್ ಮಾಡಿ: ಸಾಹಿತ್ಯ ಲೋಕ ಅಗಲಿದ ಕವಿ, ಸಾಹಿತಿ ಡಾ. ಸಿದ್ದಲಿಂಗಯ್ಯ ಇನ್ನು ನೆನಪು ಮಾತ್ರ...

 

4:38 PM

ಬಿಜೆಪಿ ಹಿರಿಯ ಶಾಸಕ ಸಿ.ಎಂ.ಉದಾಸಿ ವಿಧಿವಶ

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಹಿರಿಯ ಶಾಸಕ  ಸಿಎಂ ಉದಾಸಿ ವಿಧಿವಶರಾಗಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಸಿ.ಎಂ.ಉದಾಸಿ (77) ಅವರು ಇಂದು (ಮಂಗಳವಾರ) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಅನಾರೋಗ್ಯದಿಂದ ಬಳಲುತ್ತಿದ್ದ ಸಿ.ಎಂ. ಉದಾಸಿ ನಿಧನ

11:38 AM

ಮಾಜಿ ಸಚಿವ ಪ್ರೊ. ಮುಮ್ತಾಜ್ ಅಲಿ ಖಾನ್ ನಿಧನ!

ಮಾಜಿ ಸಚಿವ ಪ್ರೊ. ಮುಮ್ತಾಜ್ ಅಲಿ ಖಾನ್ (94) ಇಂದು ಮುಂಜಾನೆ ನಿಧನರಾದರು. 

ಬೆಂಗಳೂರಿನ ಗಂಗಾನಗರದ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದು ಅವರು ಪತ್ನಿ ಪುತ್ರಿಯನ್ನಗಲಿದ್ದಾರೆ. ಅವರು 2008ರಲ್ಲಿ ಹಜ್ ಹಾಗೂ ಅಲ್ಪಸಂಖ್ಯಾತ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ಹಿರಿಯ ನಾಯಕರು, ಮಾಜಿ ಅಲ್ಪಸಂಖ್ಯಾತ ಕಲ್ಯಾಣ, ಹಜ್, ವಕ್ಫ್ ಖಾತೆ ಸಚಿವರಾಗಿದ್ದ ಪ್ರೊ. ಮುಮ್ತಾಜ್ ಅಲಿಖಾನ್ ಅವರ ನಿಧನದ ಸುದ್ದಿ ನೋವು ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬ-ಹಿತೈಷಿ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ.

ಓಂ ಶಾಂತಿ. pic.twitter.com/W4ClTTKhu9

— Dr. Ashwathnarayan C. N. (@drashwathcn)

12:51 PM

ಕನ್ನಡದ ಖ್ಯಾತ ಸಾಹಿತಿ ಪ್ರೊಫೆಸರ್ ವಸಂತ ಕುಷ್ಟಗಿ ಇನ್ನಿಲ್ಲ

ಕನ್ನಡದ ಖ್ಯಾತ ಸಾಹಿತಿ, ದಾಸ ಸಾಹಿತ್ಯ ಸಂಶೋಧಕ ಪ್ರೊಫೆಸರ್  ವಸಂತ ಕುಷ್ಟಗಿ ಜೂ.04ರಂದು ಬೆಳೆಗ್ಗೆ ಕಲಬುರಗಿ ನಗರದ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಕಲಬುರಗಿಯಲ್ಲಿ ಕನ್ನಡದ ಕೈಂಕರ್ಯವನ್ನು ಮಾಡಿ, ದಾಸಸಾಹಿತ್ಯದಲ್ಲಿ ಕೃಷಿ ಮಾಡಿದ್ದ ಹಿರಿಯ ಜೀವಿ ಶ್ರಿ ವಸಂತಕುಷ್ಟಗಿ, ಕಲಬುರಗಿಯಲ್ಲಿ ಕನ್ನಡ ಸಾಹಿತ್ಯ ಸಂಘದ ಬೆಳವಣಿಗೆಗೂ ಸಾಕಷ್ಟು ಕಾಣಿಕೆ ನೀಡಿದ್ದರು. ಬೇಂದ್ರೆ, ಕಾರಂತ, ಗೋಕಾಕ್ ರಂತಹ ಖ್ಯಾತನಾಮರನ್ನು ಕಲಬುರಗಿ ಮಂದಿಗೆ ಪರಿಚಯಿಸಿದ್ದರು, ಗಾಂಧಿ ತತ್ವ, ಸಿದ್ಧಾಂತಗಳನ್ನು ಮೈಗೂಡಿಸಿಕೊಂಡಿದ್ದರು. ಇವರ ಹಾರೈಕೆ ಕವಿತೆ ಕನ್ನಡ ಪಠ್ಯ ಆಗಿತ್ತು.

5:17 PM

ಬಾಲಿವುಡ್ ಯುವ ನಿರ್ಮಾಪಕ ರಿಯಾನ್ ಸ್ಟೀಫನ್ ಇನ್ನಿಲ್ಲ

'ಇಂದೂ ಕಿ ಜವಾನಿ' ಮತ್ತು ಸಿನಿಮಾಗಳನ್ನು ಬ್ಯಾಂಕ್‌ರೋಲ್ ಮಾಡಿದ ನಿರ್ಮಾಪಕ ರಿಯಾನ್ ಸ್ಟೀಫನ್ ಇಂದು ಮೇ 29, 2021 ಗೋವಾದಲ್ಲಿ ನಿಧನರಾಗಿದ್ದಾರೆ. ಕೊರೋನಾ ದೃಢಪಟ್ಟಿದ್ದ ನಿರ್ಮಾಪಕ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ರಿಯಾನ್ ಸ್ಟೀಫನ್ 'ದೇವಿ' ಜನಪ್ರಿಯ ಕಿರುಚಿತ್ರವನ್ನು ನಿರ್ಮಿಸಿದ್ದರು. ಇದರಲ್ಲಿ ಕಾಜೋಲ್, ಶ್ರುತಿ ಹಾಸನ್, ನೇಹಾ ಧೂಪಿಯಾ, ನೀನಾ ಕುಲಕರ್ಣಿ, ಮುಕ್ತಾ ಬಾರ್ವೆ, ಶಿವಾನಿ ರಘುವಂಶಿ, ಯಶಸ್ವಿನಿ ದಯಾಮಾ, ಸಂಧ್ಯಾ ಮಾತ್ರೆ ಮತ್ತು ರಾಮ ಜೋಶಿ ನಟಿಸಿದ್ದಾರೆ.

12:09 PM

ಹಿರಿಯ ಚಿತ್ರ ನಿರ್ದೇಶಕ ತಿಪಟೂರು ರಘು ನಿಧನ

ಹಿರಿಯ ನಿರ್ದೇಶಕ, ಕಲಾವಿದ ತಿಪಟೂರು ರಘು (83) ಶನಿವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬ ವರ್ಗ ತಿಳಿಸಿದೆ. ಕೆಲವು ಕಾಲದಿಂದ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ರಘು ಇತ್ತೀಚೆಗಷ್ಟೇ ಶಸ್ತ್ರ ಚಿಕಿತ್ಸೆಗೂ ಒಳಗಾಗಿದ್ದರು. ರಘು ಅವರು ‘ಊರ್ವಶಿ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುತುರಿಸಿಕೊಂಡಿದ್ದರು. ‘ಹಳ್ಳಿ ಸುರಾಸುರರು’, ‘ಕಲ್ಲು ವೀಣೆ ನುಡಿಯಿತು’, ‘ಆಕ್ರೋಶ’, ‘ಲೇಡಿಸ್‌ ಹಾಸ್ಟೆಲ್‌’, ‘ಸ್ವರ್ಣ ಮಹಲ್‌ ರಹಸ್ಯ’, ‘ನಾಗ ಕಾಳ ಭೈರವ’, ‘ಬೆಂಕಿ ಬಿರುಗಾಳಿ’ ಅವರ ನಿರ್ದೇಶನದ ಜನಪ್ರಿಯ ಚಿತ್ರಗಳು.

12:09 PM

ಕೋವಿಡ್‌ ಇದ್ರೂ ಚಿಕಿತ್ಸೆ ಪಡೆಯದೇ ಯುವ ನಿರ್ದೇಶಕ ಅಭಿರಾಂ ನಿಧನ

ಯುವ ನಿರ್ದೇಶಕ ಅಭಿರಾಮ್‌ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಅವರಿಗೆ 34 ವರ್ಷ ವಯಸ್ಸಾಗಿತ್ತು. ‘ಸಂಯುಕ್ತಾ 2’, ‘0%  ಲವ್‌’ ಮೊದಲಾದ ಚಿತ್ರಗಳನ್ನು ಅವರು ನಿರ್ದೇಶಿಸಿದ್ದರು. ಕಳೆದ ಒಂದು ವಾರದಿಂದ ಜ್ವರ, ಕೆಮ್ಮು ಇತ್ಯಾದಿ ಕೊರೋನಾ ಲಕ್ಷಣಗಳಿದ್ದವು. ಆದರೆ ಸೂಕ್ತ ಚಿಕಿತ್ಸೆ ಪಡೆಯದೇ ಮನೆಯಲ್ಲಿಯೇ ಉಳಿದಿದ್ದರು. ಕೊನೆಗೆ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ. ಇವರ ನಿರ್ದೇಶನದಲ್ಲಿ ಎರಡು ಸಿನಿಮಾಗಳನ್ನು ನಿರ್ಮಿಸಿ, ಒಂದು ಚಿತ್ರದಲ್ಲಿ ನಾಯಕರಾಗಿದ್ದ ಡಿ.ಎಸ್‌. ಮಂಜುನಾಥ್‌ ಈ ಹಿಂದೆ ಕೊರೋನಾಗೆ ಬಲಿಯಾಗಿದ್ದರು. ಇದೀಗ ನಿರ್ದೇಶಕ ಅಭಿರಾಮ್‌ ಅವರೂ ಇಹಲೋಕ ತ್ಯಜಿಸಿದ್ದಾರೆ.

8:22 AM

ಕನ್ನಡದಲ್ಲಿ ತೀರ್ಪು ನೀಡುತ್ತಿದ್ದ ನ್ಯಾ| ಕೆ.ವಿ. ವಾಸುದೇವ ಇನ್ನಿಲ್ಲ

ರಾಜ್ಯದ ನ್ಯಾಯಾಂಗ ಇತಿಹಾಸದಲ್ಲಿ ಮೊದಲ ಬಾರಿಗೆ ಕನ್ನಡದಲ್ಲಿ ಆದೇಶಗಳನ್ನು ಬರೆಸಿದ ಕೀರ್ತಿಗೆ ಭಾಜನರಾಗಿದ್ದ ನಿವೃತ್ತ ಜಿಲ್ಲಾ ನ್ಯಾಯಾಧೀಶ ಕೆ.ವಿ. ವಾಸುದೇವ ಮೂರ್ತಿ (83) ಹೃದಯಾಘಾತದಿಂದ ಶನಿವಾರ ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ನಗರದ ಹನುಮಂತನಗರದ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ. ಸಂಜೆ 6.30ಕ್ಕೆ ಚಾಮರಾಜಪೇಟೆಯ ಟಿ.ಆರ್‌.ಮಿಲ್‌ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

9:37 AM

ಸ್ವಾತಂತ್ರ್ಯ ಹೋರಾಟಗಾರ ಎಚ್‌. ಎಸ್. ದೊರೆಸ್ವಾಮಿ ವಿಧಿವಶ

ಸ್ವಾತಂತ್ರ್ಯ ಹೋರಾಟಗಾರ ಎಚ್‌. ಎಸ್. ದೊರೆಸ್ವಾಮಿ ಇಂದು (ಬುಧವಾರ) ವಿಧಿವಶರಾಗಿದ್ದಾರೆ.103 ವರ್ಷದ ಎಚ್‌. ಎಸ್. ದೊರೆಸ್ವಾಮಿ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಬುಧವಾರ ಮಧ್ಯಾಹ್ನ 1.30ರ ಸುಮಾರಿಗೆ ಹೃಧಯಾಘಾತದಿಂದ ಮೃತಪಟ್ಟಿದ್ದಾರೆ.

"

ಕೋವಿಡ್ ಸೋಂಕಿನಿಂದ ಗುಣಮುಖಗೊಂಡ ದೊರೆಸ್ವಾಮಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆದ್ದರಿಂದ ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 12 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದರು.ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ಕರೆತರಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.

7:47 AM

ದೇಶದ ಅತಿದೊಡ್ಡ ಪುಸ್ತಕ ಮಳಿಗೆ, ಸಪ್ನಾ ಸಂಸ್ಥಾಪಕ ಸುರೇಶ್‌ ಶಾ ನಿಧನ!

ದೇಶದ ಅತಿದೊಡ್ಡ ಪುಸ್ತಕ ಮಳಿಗೆ ಎಂದೇ ಖ್ಯಾತವಾಗಿರುವ ಸಪ್ನಾ ಬುಕ್‌ಹೌಸ್‌ ಸಂಸ್ಥಾಪಕ ಸುರೇಶ್‌ ಸಿ. ಶಾ (84) ಅವರು ನಿಧನರಾದರು.

ಚಿಕ್ಕ ಮಳಿಗೆಯೊಂದರಲ್ಲಿ 1966ರಲ್ಲಿ ಸಪ್ನಾ ಬುಕ್‌ ಹೌಸ್‌ ಆರಂಭಿಸಿದ ಸುರೇಶ್‌, ದೇಶದ ಅತಿ ದೊಡ್ಡ ಮಳಿಗೆಯಾಗಿ ಬೆಳೆಸಿದರು. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ 19 ಶಾಖೆಗಳನ್ನು ಹೊಂದಿರುವ ಸಪ್ನಾ ಕನ್ನಡ ಪುಸ್ತಕಗಳನ್ನು ವ್ಯಾಪಕವಾಗಿ ಓದುಗರಿಗೆ ತಲುಪಿಸುವ ಕೆಲಸವನ್ನು ಸತತವಾಗಿ ಮಾಡಿಕೊಂಡು ಬರುತ್ತಿದೆ.

ಸುರೇಶ್‌ ಅವರು ಮೂವರು ಪುತ್ರರು ಸೇರಿದಂತೆ ಕುಟುಂಬ ಸದಸ್ಯರು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ ಎಂದು ಸಪ್ನಾ ಸಂಸ್ಥೆ ಪ್ರಕಟಣೆ ತಿಳಿಸಿದೆ. ಸಿಎಂ ಸೇರಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

11:37 AM

ಹಿರಿಯ ನಟ ಕೃಷ್ಣೇಗೌಡ ನಿಧನ

ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಹಿರಿಯ ನಟ ಕೃಷ್ಣೇಗೌಡ ಮಂಗಳವಾರ ಮುಂಜಾನೆ 4 ಗಂಟೆಗೆ, ಆಸ್ಟರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ರಂಗಭೂಮಿ ಕಲಾವಿದ ಹಾಗೂ ಹಲವಾರು ಚಿತ್ರಗಳಲ್ಲಿ ವಿಶಿಷ್ಟ ಅಭಿನಯ ನೀಡಿ ತಮ್ಮದೇ ಛಾಪು ಮೂಡಿಸಿದ್ದ ಕೃಷ್ಣೇಗೌಡರು, ಚಲನಚಿತ್ರ ಕಲಾವಿದರ ಸಂಘದ ಖಜಾಂಚಿ ಆಗಿ ಸೇವೆ ಸಲ್ಲಿಸಿದ್ದರು.

11:34 AM

ಪ್ರಖ್ಯಾತ ಭರತನಾಟ್ಯ ಕಲಾವಿದೆ ಭಾನುಮತಿ ಕೊರೋನಾಕ್ಕೆ ಬಲಿ

ಕರ್ನಾಟಕ ಕಂಡ ಅಪ್ರತಿಮ ನೃತ್ಯ ಕಲಾವಿದರಲ್ಲಿ ಒಬ್ಬರಾಗಿದ್ದ ನೃತ್ಯ ಗುರು ಬಿ .ಭಾನುಮತಿ ಅವರು  ಕೊರೊನಾದಿಂದ ಸೋಮವಾರ ನಿಧನ ಹೊಂದಿದ್ದಾರೆ. ಕಳೆದ ಒಂದು ವಾರದಿಂದ ಕೊರೋನಾಗೆ ಚಿಕಿತ್ಸೆ ಪಡೆಯುತ್ತಿದ್ದರು. 

ಮೂಲತ: ಕಲಾವಿದರ ಕುಟುಂಬದಿಂದಲೇ ಬಂದ ಬಿ. ಭಾನುಮತಿ ಭರತನಾಟ್ಯ ನೃತ್ಯ  ಪ್ರಕಾರದಲ್ಲಿ ದೊಡ್ಡ ಹೆಸರು ಮಾಡಿದವರು. ರಾಷ್ಟ್ರೀಯ, ಅಂತರ ರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕ ಶಾಸ್ತ್ರೀಯ ನೃತ್ಯ ಸೌಂದರ್ಯವನ್ನು ಪಸರಿಸಿದವರು ಭಾನುಮತಿ.

4:41 PM

ಪರಮಾಣು ಶಕ್ತಿ ಆಯೋಗದ ಮಾಜಿ ಅಧ್ಯಕ್ಷ ಶ್ರೀಕುಮಾರ್ ಬ್ಯಾನರ್ಜಿ ನಿಧನ

ಪರಮಾಣು ಶಕ್ತಿ ಆಯೋಗದ ಮಾಜಿ ಅಧ್ಯಕ್ಷ ಶ್ರೀಕುಮಾರ್ ಬ್ಯಾನರ್ಜಿ (70) ಅವರು ನವಿ ಮುಂಬೈನ ಸ್ವಗೃಹದಲ್ಲಿ ಭಾನುವಾರ ಹೃದಯಾಘಾತದಿಂದ ನಿಧನ ಹೊಂದಿದರು.

ಬ್ಯಾನರ್ಜಿ ಅವರು ಕಳೆದ ತಿಂಗಳಷ್ಟೇ ಕೋವಿಡ್‌–19ನಿಂದ ಗುಣಮುಖರಾಗಿದ್ದರು. 2012ರಲ್ಲಿ ಅವರು ಪರಮಾಣು ಶಕ್ತಿ ಆಯೋಗದ ಅಧ್ಯಕ್ಷ ಸ್ಥಾನ ಹಾಗೂ ಪರಮಾಣು ಶಕ್ತಿ ಇಲಾಖೆಯ ಕಾರ್ಯದರ್ಶಿ ಹುದ್ದೆಯಿಂದ ನಿವೃತ್ತಿ ಹೊಂದಿದ್ದರು.

2010ರ ತನಕ ಒಟ್ಟು ಆರು ವರ್ಷಗಳ ಕಾಲ ಬ್ಯಾನರ್ಜಿ ಅವರು ಭಾಭಾ ಪರಮಾಣು ಸಂಶೋಧನಾ ಕೇಂದ್ರದ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.

2:59 PM

ಅಂತಾರಾಷ್ಟ್ರೀಯ ಸ್ಯಾಕ್ಸೊಫೋನ್ ಕಲಾವಿದ ಮಚ್ಚೇಂದ್ರನಾಥ್ ಕೋವಿಡ್‌ನಿಂದ ಸಾವು

ಅಂತರರಾಷ್ಟ್ರೀಯ ಮಟ್ಟದ ಸ್ಯಾಕ್ಸೊಫೋನ್ ಕಲಾವಿದ ಮಚ್ಚೇಂದ್ರನಾಥ್ ಮಂಗಳಾದೇವಿ (62) ಭಾನುವಾರ ನಿಧನರಾದರು.

ಅವರಿಗೆ ಕೋವಿಡ್ ತಗುಲಿತ್ತು. ವಾರದ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ಪ್ರತಿನಿತ್ಯ ಸ್ಯಾಕ್ಸೊಫೋನ್ ಸೇವೆ ಸಲ್ಲಿಸುತ್ತಿದ್ದರು. ದುಬೈ, ಅಬುಧಾಬಿ, ಆಸ್ಟ್ರೇಲಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ ಸ್ಯಾಕ್ಸೊಫೋನ್ ಸಂಗೀತ ಕಚೇರಿಗಳನ್ನು ನಡೆಸಿದ್ದರು.

9:41 AM

ಮೈನೇ ಪ್ಯಾರ್‌ ಕಿಯಾ, ಹಮ್‌ ಆಪ್ಕೆ ಹೇ ಕೌನ್‌ ರಾಮ್‌ಲಕ್ಷಣ್‌ ಇನ್ನಿಲ್ಲ

ರಾಜಶ್ರೀ ಪ್ರೊಡಕ್ಷನ್‌ನ ಸೂಪರ್‌ಹಿಟ್‌ ಚಿತ್ರಗಳಾದ ‘ಮೈನೆ ಪ್ಯಾರ್‌ ಕಿಯಾ’, ‘ಹಮ್‌ ಆಪ್ಕೇ ಹೇ ಕೌನ್‌’ ಸೇರಿದಂತೆ ಹಲವು ಜನಪ್ರಿಯ ಚಿತ್ರಗಳಿಗೆ ಸಂಗೀತ ನೀಡಿದ್ದ ರಾಮ್‌ಲಕ್ಷ್ಮಣ್‌ (78)ಶನಿವಾರ ಹೃದಯಾಘಾತದಿಂದ ನಿಧನರಾದರು.

ರಾಮಲಕ್ಷ್ಮಣ್‌ 6 ದಿನಗಳ ಹಿಂದಷ್ಟೇ ಕೋವಿಶೀಲ್ಡ್‌ ಲಸಿಕೆಯ 2ನೇ ಡೋಸ್‌ ಪಡೆದಿದ್ದರು. ಲಸಿಕೆ ಪಡೆದಾಗ ಸಮಸ್ಯೆ ಇರಲಿಲ್ಲ. ಆದರೆ ಮನೆಗೆ ಬಂದ ನಂತರ ನಿಶ್ಯಕ್ತಿ ಕಾಣಿಸಿಕೊಂಡಿತ್ತು. ವೈದ್ಯರು ಮನೆಗೇ ಬಂದು ಚಿಕಿತ್ಸೆ ನೀಡಿದ್ದರು. ಆದರೆ ಶನಿವಾರ ಮುಂಜಾನೆ ಸಾವನ್ನಪ್ಪಿದರು’ ಎಂದು ಪುತ್ರ ಅಮರ್‌ ತಿಳಿಸಿದ್ದಾರೆ.

ಇವರ ಮೂಲ ಹೆಸರು ವಿಜಯ್‌ ಪಾಟೀಲ್‌. ತಮ್ಮ ಮೊದಲ ಮರಾಠಿ ಸಿನಿಮಾ ‘ಪಾಂಡು ಹವಾಲ್ದಾರ್‌’ನಲ್ಲಿ ಸಹೋದ್ಯೋಗಿ ಸುರೇಂದ್ರ ಅವರೊಂದಿಗೆ ಸೇರಿ ‘ರಾಮ-ಲಕ್ಷ್ಮಣ’ ಹೆಸರಿನಲ್ಲಿ ಹಾಡೊಂದನ್ನು ಬರೆದಿದ್ದರು. ಅನಂತರ ಅವರ ಹೆಸರೇ ರಾಮಲಕ್ಷ್ಮಣ್‌ ಎಂದಾಯಿತು. 40 ವರ್ಷಗಳ ವೃತ್ತಿಜೀವನದಲ್ಲಿ ಇವರು ಹಿಂದಿ, ಮರಾಠಿ, ಬೋಜ್ಪುರಿಯ 150ಕ್ಕೂ ಹೆಚ್ಚು ಸಿನಿಮಾಗಳಿಗೆ ಹಾಡು ಬರೆದಿದ್ದಾರೆ.

10:45 AM

ಕರ್ನಾಟಕದ ಮಾಜಿ ಸ್ಪೀಕರ್ ನಿಧನ

ಆಧುನಿಕ ಗಾಂಧಿವಾದಿ ಎಂದೇ ಪ್ರಸಿದ್ಧಿಯಾಗಿದ್ದ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ (80) ಅವರು ಅನಾರೋಗ್ಯದಿಂದ  ನಿಧನರಾಗಿದ್ದಾರೆ.

ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ಚೈನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮೈಸೂರಿನ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ಇಂದು (ಶುಕ್ರವಾರ) ಮಧ್ಯಾಹ್ನ ಮೈಸೂರಿನ ಕುವೆಂಪು ನಗರ ನಿವಾಸದಲ್ಲಿ ಸಾವನ್ನಪ್ಪಿದ್ದಾರೆ.

10:45 AM

ಕೇಂದ್ರದ ಮಾಜಿ ಸಚಿವ, ರೈತ ಮುಖಂಡ ಬಾಬಾಗೌಡ ಪಾಟೀಲ ಇನ್ನಿಲ್ಲ

ಕೇಂದ್ರದ ಮಾಜಿ ಸಚಿವ, ರೈತ ಮುಖಂಡ (78) ಅವರು ಇಂದು(ಶುಕ್ರವಾರ) ಅನಾರೋಗ್ಯದಿಂದ ರಾಗಿದ್ದಾರೆ. ಕೆಲ ದಿನಗಳ ಹಿಂದೆ ಅನರೋಗ್ಯದಿಂದ ಬಳಲುತ್ತಿದ್ದ ಬಾಬಾಗೌಡ ಅವರನ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. 

ಸಂಪೂರ್ಣ ಸುದ್ದಿಗಾಘಿ ಇಲ್ಲಿ ಕ್ಲಿಕ್ ಮಾಡಿ: ರೈತ ಮುಖಂಡ ಬಾಬಾಗೌಡ ಪಾಟೀಲ ವಿಧಿವಶ

2:47 PM

ಮರ ಅಪ್ಪಿಕೊಂಡು ಅಮರರಾದ ಪರಿಸರವಾದಿ ಸುಂದರಲಾಲ್ ಬಹುಗುಣ

ವೃಕ್ಷ ರಕ್ಷಕ ಸುಂದರ್‌ಲಾಲ್ ಬಹುಗುಣ ಇನ್ನಿಲ್ಲ
 

 

 

Passing away of Shri Sunderlal Bahuguna Ji is a monumental loss for our nation. He manifested our centuries old ethos of living in harmony with nature. His simplicity and spirit of compassion will never be forgotten. My thoughts are with his family and many admirers. Om Shanti.

— Narendra Modi (@narendramodi)

 

7:46 AM

ಡಾ. ರಾಜ್‌ ಯೋಗ ಗುರು ಹೊನ್ನಪ್ಪ ಕೋವಿಡ್‌ಗೆ ಬಲಿ

ಬೆಂಗಳೂರು: ಡಾ. ರಾಜ್‌ಕುಮಾರ್‌ ಸೇರಿದಂತೆ ಹಲವು ಗಣ್ಯ ವ್ಯಕ್ತಿಗಳಿಗೆ ಯೋಗ ಗುರು ಆಗಿದ್ದ ಹೊನ್ನಪ್ಪ ನಾಯ್ಕರ್‌ ಕೊರೋನಾದಿಂದ ಮೃತಪಟ್ಟಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಹಿಂದೆ ಪೊಲೀಸ್‌ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅವರು ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ. ನಾಯ್ಕರ್‌ ನಿಧನಕ್ಕೆ ಹಿರಿಯ ನಿರ್ಮಾಪಕ ಚಿನ್ನೇಗೌಡ ಸೇರಿದಂತೆ ಚಿತ್ರರಂಗದ ಹಲವರು ಶೋಕ ವ್ಯಕ್ತಪಡಿಸಿದ್ದಾರೆ. ಜೆ.ಪಿ. ನಗರದಲ್ಲಿ ವಾಸ್ತವ್ಯವಿದ್ದ ನಾಯ್ಕರ್‌ ಅವರ ಯೋಗಾಶ್ರಮ ಕನಕಪುರದ ಬಳಿ ಇದೆ. ಮೃತರ ಅಂತ್ಯಕ್ರಿಯೆ ಕನಕಪುರದ ನಾಗದೇವನಹಳ್ಳಿ ಬಳಿ ನೆರವೇರಿದೆ.

6:19 PM

ಕಾಂಗ್ರೆಸ್ ಹಿರಿಯ ನಾಯಕಿ ಡಾ. ಶಾಂತಾ ಹಲಗಿ ನಿಧನ!

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ನಾಯಕಿ ಡಾ. ಶಾಂತಾ ಹಲಗಿ ಧಾರವಾಡದ ನಿವಾಸದಲ್ಲಿ ನಿಧನರಾಗಿದ್ದಾರೆ. 

ಚಲನಚಿತ್ರ ಸೆನ್ಸಾರ್ ಮಂಡಳಿ ಪ್ರಾದೇಶಿಕ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಹಲಗಿ, ಸಮಾಜ ಕಲ್ಯಾಣ ಸಲಹಾ ಮಂಡಳಿ, ಮದ್ಯಪಾನ ಸಂಯಮ ಮಂಡಳಿ, ರಾಜ್ಯ ಮಹಿಳಾ ಆಯೋಗಗಳಿಗೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು

ಕೃಷಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ವೃತ್ತಿ ಜೀವನ ಆರಂಭಿಸಿದ್ದ ಹಲಗಿ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ರಾಜಕೀಯ ಪ್ರವೇಶಿಸಿದ್ದ ಅವರು ರಾಜ್ಯ ಮತ್ತು ಕೇಂದ್ರದಲ್ಲಿ ಅನೇಕ ಹುದ್ದೆಗಳನ್ನು ನಿರ್ವಹಿಸಿದ್ದರು. 

5:38 PM

ಪ್ರಿಯಾ ಪೂನಿಯಾ ತಾಯಿ ಬಲಿ ಪಡೆದ ಕೊರೋನಾ ವೈರಸ್‌

ಕೋವಿಡ್ ಎರಡನೇ ಅಲೆಗೆ ಭಾರತ ತತ್ತರಿಸಿ ಹೋಗಿದೆ. ಇದೀಗ ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಪ್ರಿಯಾ ಪೂನಿಯಾ ತಾಯಿಯನ್ನು ಕೊರೋನಾ ಹೆಮ್ಮಾರಿ ಬಲಿ ಪಡೆದಿದೆ. ಈ ಆಘಾತಕಾರಿ ಸುದ್ದಿಯನ್ನು ಪ್ರಿಯಾ ಪೂನಿಯಾ ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗ ಪಡಿಸಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ : ಟೀಂ ಇಂಡಿಯಾ ಕ್ರಿಕೆಟ್ ಆಟಗಾರ್ತಿ ಪ್ರಿಯಾ ಪೂನಿಯಾ ತಾಯಿ ಕೊರೋನಾಗೆ ಬಲಿ

2:31 PM

IMA ಮಾಜಿ ನಿರ್ದೇಶಕ, ಪದ್ಮಶ್ರೀ ಡಾ. ಅಗರ್ವಾಲ್ ಕೊರೋನಾಗೆ ಬಲಿ!

ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ನ ಮಾಜಿ ನಿರ್ದೇಶಕ ಹಾಗೂ ಪದ್ಮಶ್ರೀ ಡಾ. ಕೆಕೆ ಅಗರ್ವಾಲ್ ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿನಿಂದ ಬಳಲುತ್ತಿದ್ದರು. ಆದರೆ ಸೋಂಕು ಕಡಿಮೆಯಾಗದ ಹಿನ್ನೆಲೆ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗುತ್ತು. 

ಕೆಲ ದಿನಗಳ ಹಿಂದಷ್ಟೇ ತಮಗೆ ಸೋಂಕು ಕಾಣಿಸಿಕೊಂಡಿದೆ ಎಂದು ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು. ಆದರೆ ಸೋಮವಾರ ರಾತ್ರಿ 11.30 ಗಂಟೆಗೆ ಇದೇ ಟ್ವಿಟರ್‌ ಖಾತೆಯಲ್ಲಿ ಅವರ ನಿಧನದ ಸುದ್ದಿಯೂ ಹಾಕಲಾಗಿದೆ. 

pic.twitter.com/uy7JzOyGWK

— Dr K K Aggarwal (@DrKKAggarwal)

ಸಾವಿರಾರು ಮಂದಿಗೆ ಸಹಾಯ ಮಾಡಿದ್ದ, ಅನೇಕರಿಗೆ ಉಚಿತ ಚಿಕಿತ್ಸೆ ನೀಡಿದ್ದ ವೈದ್ಯ ಅಗರ್ವಾಲ್ ಕೊರೋನಾ ವಿರುದ್ಧದ ಹೋರಾಟದಲ್ಲಿ ಸೋತು ಕೊನೆಯುಸಿರೆಳೆದಿದ್ದಾರೆ. 

11:20 AM

ಶ್ರೀಮತಿ ನಿರ್ಮಲ ರಘು ಹೃದಯಾಘಾತದಿಂದ ನಿಧನ

ಡಿ.ದೇವರಾಜ ಅರಸು ಹಿಂದುಳಿದ ವಗ೯ಗಳ ಅಭಿವೃಧ್ಧಿ ನಿಗಮದ ಅಧ್ಯಕ್ಷರಾದ ಆರ್.ರಘು( ಕೌಟಿಲ್ಯ )ರವರ ಧಮ೯ಪತ್ನಿ ಶ್ರೀಮತಿ ನಿರ್ಮಲ ರಘು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

 

2:20 PM

ಫೈನಾನ್ಷಿಯಲ್ ಎಕ್ಸ್‌ಪ್ರೆಸ್‌ ವ್ಯವಸ್ಥಾಪಕ ಸಂಪಾದಕ ಸುನಿಲ್ ಜೈನ್ ನಿಧನ!

ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಫೈನಾನ್ಷಿಯಲ್ ಎಕ್ಸ್‌ಪ್ರೆಸ್‌ ವ್ಯವಸ್ಥಾಪಕ ಸಂಪಾದಕ ಸುನಿಲ್ ಜೈನ್ ನಿಧನರಾಗಿದ್ದಾರೆ. ಜೈನ್ ಸಹೋದರಿ ಸಂಧ್ಯಾ ತನ್ನ ಸಹೋದರನ ನಿಧನದ ಸುದ್ದಿಯನ್ನು ಟ್ವಿಟ್ಟರ್ ನಲ್ಲಿ ಖಚಿತಪಡಿಸಿದ್ದಾರೆ.

"ನಾನು ಇಂದು ಸಹೋದರ ಸುನಿಲ್ ಜೈನ್ ಅವರನ್ನು ಕೊರೋನಾದಿಂದಾಗಿ ಕಳೆದುಕೊಂಡಿದ್ದೇವೆ. ಏಮ್ಸ್ ನ ವೈದ್ಯರು ಸಾಕಷ್ಟು ಶ್ರಮಿಸಿದ್ದರೂ ಅವರನ್ನು ಉಳಿಸಲಾಗಿಲ್ಲ. ತೀರ್ಥಂಕರರು ಅಗಲಿದ ಆತ್ಮಕ್ಕೆ  ಮುಂದಿನ ಪ್ರಯಾಣಕ್ಕೆ ಮಾರ್ಗದರ್ಶನ ನೀಡಲಿ ಎಂದು  ಸಂಧ್ಯಾ  ಹೇಳಿದ್ದಾರೆ.

We lost my brother Sunil Jain this evening to Covid+its complications. Doctors+staff at AIIMS battled heroically, but the demon was too powerful. May Tirthankaras guide his onward journey; deep gratitude to all who stood by us in these darkest days

— Sandhya Jain (@vijayvaani)

2:15 PM

ಗುಣಮುಖರಾಗಿದ್ದ ಕಾಂಗ್ರೆಸ್ ಸಂಸದ ರಾಜೀವ್ ಇನ್ನಿಲ್ಲ

ಕೊರೋನ ವೈರಸ್ ಸೋಂಕಿನಿಂದ ಚೇತರಿಸಿಕೊಂಡ ಕೆಲ ದಿನಗಳ ನಂತರ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಸಂಸದ ರಾಜೀವ್ ಸತವ್(46) ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇದು ನಮ್ಮೆಲ್ಲರಿಗೂ ದೊಡ್ಡ ನಷ್ಟವಾಗಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀ ಸತವ್ ಅವರು ಕಾಂಗ್ರೆಸ್ ಆದರ್ಶಗಳನ್ನು ಸಾಕಾರಗೊಳಿಸಿದ ನನ್ನ ಸ್ನೇಹಿತ ಎಂದು ಹೊಗಳಿದ್ದಾರೆ ರಾಹುಲ್ ಗಾಂಧಿ.

ರಾಜೀವ್ ಸತವ್ ಅವರಿಗೆ ಮೇ 9, 2021 ರಂದು ಕೊರೋನಾ ನೆಗೆಟಿವ್ ಬಂದಿತ್ತು. ಆದರೂ ದೀರ್ಘಕಾಲದ ಅನಾರೋಗ್ಯದ ನಂತರ ಅವರು ಮೇ 16 ರಂದು ಬೆಳಗ್ಗೆ 4:58ಕ್ಕೆ ನ್ಯುಮೋನಿಯಾಕ್ಕೆ ಬಲಿಯಾದರು ಎಂದು ಕಾಂಗ್ರೆಸ್ ನಾಯಕನಿಗೆ ಚಿಕಿತ್ಸೆ ನೀಡಿದ ಜೆಹಂಗೀರ್ ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ.

4:02 PM

ಮಮತಾ ಬ್ಯಾನರ್ಜಿ ಸಹೋದರ ನಿಧನ!

ಪಶ್ಚಿಮ ಬಂಗಾಳದ ಮುಖ್ಯಮಮತ್ರಿ ಮಮತಾ ಬ್ಯಾನರ್ಜಿ ಸಹೋದರ ಅಶೀಮ್ ಬ್ಯಾನರ್ಜಿ(60) ಶನಿವಾರದಂದು ಮೃತಪಟ್ಟಿದ್ದಾರೆ.

ಕೊರೋನಾ ಸೋಂಕು ತಗುಲಿದ್ದ ಅಶೀಮ್‌ರವರಿಗೆ ಕೋಲ್ಕತ್ತಾದ ಮೆಡಿಕೋ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಆರಂಭಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಆಶೀಮ್ ಕೊನೆಯುಸಿರೆಳೆದಿದ್ದಾರೆ. ಇಂದು ಮಧ್ಯಾಹ್ನ ಕೊರೋನಾ ಮಾರ್ಗಸೂಚಿಯಂತೆ ಅಂತ್ಯ ಕ್ರಿಯೆ ನಡೆಯಲಿದೆ. 

1:38 PM

ಸ್ವಾತಂತ್ರ್ಯ ಸೇನಾನಿ ಭಗತ್ ಸಿಂಗ್ ಸೋದರಳಿಯ ಕೊರೋನಾಗೆ ಬಲಿ!

ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಭಗತ್‌ ಸಿಂಗ್‌ರವರ ಸೋದರಳಿಯ ಅಭಯ್ ಸಿಂಗ್ ಸಂಧು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರದಂದು ಮೊಹಾಲಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿಳೆದಿದ್ದಾರೆ.

ಪಂಜಾಬ್‌ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹಾಗೂ ಆರೋಗ್ಯ ಸಚಿವ ಬಲಬೀರ್‌ ಸಿಂಗ್ ಸಿಧು ಇವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. 

12:01 PM

ಉಪತಹಶೀಲ್ದಾರ ಜಯಶ್ರೀ ನಾಗನೂರಿ ಕೋವಿಡ್ ಗೆ ಬಲಿ!

ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಉಪತಹಶೀಲ್ದಾರ ಜಯಶ್ರೀ ನಾಗನೂರಿ  ಕೋವಿಡ್ ಗೆ ಬಲಿಯಾಗಿದ್ದಾರೆ. 

7:16 AM

ಧಾರವಾಡದ ಹಿರಿಯ ಸಾಹಿತಿ ಪ್ರೊ. ಹಸನಬಿ ಬಿಳಗಿ ಇನ್ನಿಲ್ಲ!

ಮೂಲತಃ ಬಾಗಲಕೋಟ ಜೆಲ್ಲೆಯ ಧಾರವಾಡದ ಹಿರಿಯ ಸಾಹಿತಿ ಪ್ರೊ.ಹಸನಬಿ ಬಿಳಗಿ ಶುಕ್ರವಾರ ನಿಧನರಾದರು. ವಚನ ಸಾಹಿತ್ಯದಲ್ಲಿ ಆಳವಾದ ಅಧ್ಯಯನ ಮಾಡಿದ್ದರು. ಕೊರೋನಾ ಮಹಾಮಾರಿಯಿಂದಾಗಿ ಇವರು ಕೊನೆಯುಸಿರೆಳೆದಿದ್ದಾರೆ.

5:36 PM

ನಟ ದರ್ಶನ್ ಬಾಡಿಗಾರ್ಡ್‌ ವಿಷ್ಣು ಕೊರೋನಾಗೆ ಬಲಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಲಾಕ್‌ಡೌನ್‌ ದಿನಗಳನ್ನು ಮೈಸೂರಿನಲ್ಲಿ ಕಳೆಯುತ್ತಿದ್ದಾರೆ. ಇದೇ ಸಮಯದಲ್ಲಿ ತಮ್ಮೊಟ್ಟಿಗೆ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಬಾಡಿಗಾರ್ಡ್‌ ವಿಷ್ಣು ನಿಧನರಾಗಿದ್ದಾರೆ, ಅದೂ ಕೊರೋನಾದಿಂದ. ಬೇಸರಗೊಂಡ ದರ್ಶನ ಕಂಬನಿ ಮಿಡಿದಿದ್ದಾರೆ.
"

5:18 PM

ಹಿರಿಯ ಪತ್ರಕರ್ತ, ಸಿಎಂ ಮಾಜಿ ಮಾಧ್ಯಮ ಸಲಹೆಗಾರ ಮಹಾದೇವ್ ಪ್ರಕಾಶ್ ಇನ್ನಿಲ್ಲ

ಕರ್ನಾಟಕದ ರಾಜಕೀಯ ಇತಿಹಾಸವನ್ನು ಸಂಪೂರ್ಣ ಬಲ್ಲವರಾಗಿದ್ದ ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ (65) ಇನ್ನಿಲ್ಲ. ಕೊರೋನಾ ವೈರಸ್ ಅವರ ಪ್ರಾಣವನ್ನು ಬಲಿ ಪಡೆದಿದೆ. ಸಿಎಂ ಯಡಿಯೂರಪ್ಪ ಅವರಿಗೆ ರಾಜಕೀಯ ಸಲಹೆಗಾರರಾಗಿಯೂ ಕೆಲಸ ನಿರ್ವಹಿಸಿದ್ದರು. ಕೆಂಗಲ್ ಹನುಮಂತಯ್ಯ ಅವರ ಕಾಲದಿಂದ ಇಂದಿನ ರಾಜಕಾರಣದ ಬೆಳವಣಿಗೆಗಳ ಜ್ಞಾನ ಅವರಿಗಿತ್ತು. ಪಕ್ಷಗಳು ಬೆಳೆದ ರೀತಿ, ಚುನಾವಣೆ, ರಾಜಕೀಯ ಧ್ರುವೀಕರಣ, ಪಕ್ಷಾಂತರ ಮತ್ತು ಪರಿಣಾಮ ಹೀಗೆ ಎಲ್ಲ ವಿಚಾರಗಳನ್ನು ವಿಶ್ಲೇಷಿಸುವ ಶಕ್ತಿ ಇದ್ದ ಹಿರಿಯ ಪತ್ರಕರ್ತ ಕನ್ನಡ ಪತ್ರಿಕೋದ್ಯಮದಿಂದ ದೂರವಾಗಿದ್ದಾರೆ.

ಮಹಾದೇವ್ ಪ್ರಕಾಶ್ ಇನ್ನಿಲ್ಲ
 

 

 

4:13 PM

ಯಾರಾದರೂ ಕೊನೆಯುಸಿರೆಳೆದರೆ ಓಂ ಶಾಂತಿ ಎಂದು ಹೇಳುವುದೇಕೆ?

3:34 PM

ಲವ್ ಯೂ ಜಿಂದಗೀ ಎಂದು ಬೋಲ್ಡ್ ಆಗಿದ್ದೋಳನ್ನು ಬಲಿ ತೆಗೆದುಕೊಂಡ ಕೊರೋನಾ

2:35 PM

2 ಡೋಸ್ ವ್ಯಾಕ್ಸಿನ್ ಪಡೆದ ಪೊಲೀಸ್ ಕೊರೋನಾಗೆ ಬಲಿ

ಮಂಗಳೂರು ಮೀಸಲು ಪೊಲೀಸ್ ಪಡೆಯ ಸಿದ್ದಪ್ಪ ಶಿಂಗೆ(50) ಮೃತರು. ಮೂಲತಃ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನವರಾಗಿದ್ದ ಶಿಂಗೆ, ಎರಡು ವಾರಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಟೆಸ್ಟ್ ವೇಳೆ ಕೊರೋನಾ ಪಾಸಿಟಿವ್ ಆಗಿತ್ತು.

ಸದ್ಯ ಪಾಸಿಟಿವ್ ಆಗಿ ಬಹು ಅಂಗಾಂಗ ವೈಫಲ್ಯದಿಂದ ಸಾವು. ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿದ್ದರೂ ಬಲಿ ಪಡೆದ ವೈರಸ್.

12:50 PM

ಮುಖೇಶ್ ಖನ್ನಾ ಸಹೋದರಿ ಸಾವು

ಹಿಂದಿ ಕಿರುತೆರೆ ನಟ, ಮಹಾಭಾರತ ಧಾರಾವಾಹಿಯ ಭೀಷ್ಮ ಪಾತ್ರಧಾರಿ ಮುಖೇಶ್ ಖನ್ನಾ ಸಾವಿನ ಗಾಳಿ ಸುದ್ದಿ ವೈರಲ್ ಆದ ಬೆನ್ನಲ್ಲೇ, ಅವರ ಸಹೋದರಿ ಕಮಲ್ ಕಪೂರ್ ಕೊರೋನಾ 19ಗೆ ಬಲಿಯಾಗಿದ್ದಾರೆ.

 

11:48 AM

ಕರ್ನಾಟಕದ ಮೊದಲ ಮಹಿಳಾ ಶಿಲ್ಪಿ ಇನ್ನಿಲ್ಲ

9:24 AM IST:

ಧಾರವಾಡದ ಪಾಲಿಕೆ ಮಾಜಿ ಸದಸ್ಯ ಹಾಗೂ ಬಿಜೆಪಿ ಹಿರಿಯ ನಾಯಕ ಪ್ರಕಾಶ್ ಗೋಡಬೋಲೆ ನಿಧನ. ಕೋವಿಡ್ ಹಿನ್ನೆಲೆಯಲ್ಲಿ ಕಳೆದ 40 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಳಗ್ಗೆ ನಿಧನ

6:29 PM IST:

ಮೂಲತಃ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಹಿತ್ತಲ ಗ್ರಾಮದವರಾದ ಪ್ರೊ. ಮಹೇಶ್ವರಯ್ಯ ಅವರು ಧಾರವಾಡದ ಕರ್ನಾಟಕ ವಿ.ವಿ.ಯ ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ, ವಿದ್ಯಾರ್ಥಿ ಕಲ್ಯಾಣ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ನಂತರ ಕಲಬುರ್ಗಿಯ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿ.ವಿ. ಕುಲಪತಿಗಳಾಗಿ ಕಾರ್ಯನಿರ್ವಹಿಸಿದ್ದರು. ನಿವೃತ್ತಿಯ ಬಳಿಕ ಧಾರವಾಡಕ್ಕೆ ತಮ್ಮ ವಾಸ್ತವ್ಯ ಬದಲಾಯಿಸಿದ್ದರು. ಅವರಿಗೆ ಪತ್ನಿ. ಕೆಸಿಡಿ ಕಾಲೇಜಿನ ನಿವೃತ್ತ ಪ್ರಾಚಾರ್ಯೆ ಪ್ರೊ. ರಾಜೇಶ್ವರಿ ಮಹೇಶ್ವರಯ್ಯ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ಅವರಿಗೆ ಬ್ಲಾಕ್ ಫಂಗಸ್ ಆಗಿತ್ತು ಎಂಬ ಮಾಹಿತಿ ಇದೆ.

6:31 PM IST:

ಬಂಡಾಯ ಸಾಹಿತಿ, ದಲಿತ ಕವಿ, ಕನ್ನಡದ ಮೇರು ಸಾಹಿತಿ ನಾಡೋಜ ಡಾ.ಸಿದ್ದಲಿಂಗಯ್ಯ ವಿಧಿವಶರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಕೋವಿಡ್‌ ಸೋಂಕಿನಿಂದ ಬಳಲುತ್ತಿದ್ದ ಸಿದ್ದಲಿಂಗಯ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 

ಸಂಪೂರ್ಣ ಸುದ್ದಿ ಓದಲು ಕ್ಲಿಕ್ ಮಾಡಿ: ಸಾಹಿತ್ಯ ಲೋಕ ಅಗಲಿದ ಕವಿ, ಸಾಹಿತಿ ಡಾ. ಸಿದ್ದಲಿಂಗಯ್ಯ ಇನ್ನು ನೆನಪು ಮಾತ್ರ...

 

4:39 PM IST:

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಹಿರಿಯ ಶಾಸಕ  ಸಿಎಂ ಉದಾಸಿ ವಿಧಿವಶರಾಗಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಸಿ.ಎಂ.ಉದಾಸಿ (77) ಅವರು ಇಂದು (ಮಂಗಳವಾರ) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಅನಾರೋಗ್ಯದಿಂದ ಬಳಲುತ್ತಿದ್ದ ಸಿ.ಎಂ. ಉದಾಸಿ ನಿಧನ

11:39 AM IST:

ಮಾಜಿ ಸಚಿವ ಪ್ರೊ. ಮುಮ್ತಾಜ್ ಅಲಿ ಖಾನ್ (94) ಇಂದು ಮುಂಜಾನೆ ನಿಧನರಾದರು. 

ಬೆಂಗಳೂರಿನ ಗಂಗಾನಗರದ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದು ಅವರು ಪತ್ನಿ ಪುತ್ರಿಯನ್ನಗಲಿದ್ದಾರೆ. ಅವರು 2008ರಲ್ಲಿ ಹಜ್ ಹಾಗೂ ಅಲ್ಪಸಂಖ್ಯಾತ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ಹಿರಿಯ ನಾಯಕರು, ಮಾಜಿ ಅಲ್ಪಸಂಖ್ಯಾತ ಕಲ್ಯಾಣ, ಹಜ್, ವಕ್ಫ್ ಖಾತೆ ಸಚಿವರಾಗಿದ್ದ ಪ್ರೊ. ಮುಮ್ತಾಜ್ ಅಲಿಖಾನ್ ಅವರ ನಿಧನದ ಸುದ್ದಿ ನೋವು ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬ-ಹಿತೈಷಿ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ.

ಓಂ ಶಾಂತಿ. pic.twitter.com/W4ClTTKhu9

— Dr. Ashwathnarayan C. N. (@drashwathcn)

12:53 PM IST:

ಕನ್ನಡದ ಖ್ಯಾತ ಸಾಹಿತಿ, ದಾಸ ಸಾಹಿತ್ಯ ಸಂಶೋಧಕ ಪ್ರೊಫೆಸರ್  ವಸಂತ ಕುಷ್ಟಗಿ ಜೂ.04ರಂದು ಬೆಳೆಗ್ಗೆ ಕಲಬುರಗಿ ನಗರದ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಕಲಬುರಗಿಯಲ್ಲಿ ಕನ್ನಡದ ಕೈಂಕರ್ಯವನ್ನು ಮಾಡಿ, ದಾಸಸಾಹಿತ್ಯದಲ್ಲಿ ಕೃಷಿ ಮಾಡಿದ್ದ ಹಿರಿಯ ಜೀವಿ ಶ್ರಿ ವಸಂತಕುಷ್ಟಗಿ, ಕಲಬುರಗಿಯಲ್ಲಿ ಕನ್ನಡ ಸಾಹಿತ್ಯ ಸಂಘದ ಬೆಳವಣಿಗೆಗೂ ಸಾಕಷ್ಟು ಕಾಣಿಕೆ ನೀಡಿದ್ದರು. ಬೇಂದ್ರೆ, ಕಾರಂತ, ಗೋಕಾಕ್ ರಂತಹ ಖ್ಯಾತನಾಮರನ್ನು ಕಲಬುರಗಿ ಮಂದಿಗೆ ಪರಿಚಯಿಸಿದ್ದರು, ಗಾಂಧಿ ತತ್ವ, ಸಿದ್ಧಾಂತಗಳನ್ನು ಮೈಗೂಡಿಸಿಕೊಂಡಿದ್ದರು. ಇವರ ಹಾರೈಕೆ ಕವಿತೆ ಕನ್ನಡ ಪಠ್ಯ ಆಗಿತ್ತು.

5:23 PM IST:

'ಇಂದೂ ಕಿ ಜವಾನಿ' ಮತ್ತು ಸಿನಿಮಾಗಳನ್ನು ಬ್ಯಾಂಕ್‌ರೋಲ್ ಮಾಡಿದ ನಿರ್ಮಾಪಕ ರಿಯಾನ್ ಸ್ಟೀಫನ್ ಇಂದು ಮೇ 29, 2021 ಗೋವಾದಲ್ಲಿ ನಿಧನರಾಗಿದ್ದಾರೆ. ಕೊರೋನಾ ದೃಢಪಟ್ಟಿದ್ದ ನಿರ್ಮಾಪಕ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ರಿಯಾನ್ ಸ್ಟೀಫನ್ 'ದೇವಿ' ಜನಪ್ರಿಯ ಕಿರುಚಿತ್ರವನ್ನು ನಿರ್ಮಿಸಿದ್ದರು. ಇದರಲ್ಲಿ ಕಾಜೋಲ್, ಶ್ರುತಿ ಹಾಸನ್, ನೇಹಾ ಧೂಪಿಯಾ, ನೀನಾ ಕುಲಕರ್ಣಿ, ಮುಕ್ತಾ ಬಾರ್ವೆ, ಶಿವಾನಿ ರಘುವಂಶಿ, ಯಶಸ್ವಿನಿ ದಯಾಮಾ, ಸಂಧ್ಯಾ ಮಾತ್ರೆ ಮತ್ತು ರಾಮ ಜೋಶಿ ನಟಿಸಿದ್ದಾರೆ.

12:09 PM IST:

ಹಿರಿಯ ನಿರ್ದೇಶಕ, ಕಲಾವಿದ ತಿಪಟೂರು ರಘು (83) ಶನಿವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬ ವರ್ಗ ತಿಳಿಸಿದೆ. ಕೆಲವು ಕಾಲದಿಂದ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ರಘು ಇತ್ತೀಚೆಗಷ್ಟೇ ಶಸ್ತ್ರ ಚಿಕಿತ್ಸೆಗೂ ಒಳಗಾಗಿದ್ದರು. ರಘು ಅವರು ‘ಊರ್ವಶಿ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುತುರಿಸಿಕೊಂಡಿದ್ದರು. ‘ಹಳ್ಳಿ ಸುರಾಸುರರು’, ‘ಕಲ್ಲು ವೀಣೆ ನುಡಿಯಿತು’, ‘ಆಕ್ರೋಶ’, ‘ಲೇಡಿಸ್‌ ಹಾಸ್ಟೆಲ್‌’, ‘ಸ್ವರ್ಣ ಮಹಲ್‌ ರಹಸ್ಯ’, ‘ನಾಗ ಕಾಳ ಭೈರವ’, ‘ಬೆಂಕಿ ಬಿರುಗಾಳಿ’ ಅವರ ನಿರ್ದೇಶನದ ಜನಪ್ರಿಯ ಚಿತ್ರಗಳು.

12:09 PM IST:

ಯುವ ನಿರ್ದೇಶಕ ಅಭಿರಾಮ್‌ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಅವರಿಗೆ 34 ವರ್ಷ ವಯಸ್ಸಾಗಿತ್ತು. ‘ಸಂಯುಕ್ತಾ 2’, ‘0%  ಲವ್‌’ ಮೊದಲಾದ ಚಿತ್ರಗಳನ್ನು ಅವರು ನಿರ್ದೇಶಿಸಿದ್ದರು. ಕಳೆದ ಒಂದು ವಾರದಿಂದ ಜ್ವರ, ಕೆಮ್ಮು ಇತ್ಯಾದಿ ಕೊರೋನಾ ಲಕ್ಷಣಗಳಿದ್ದವು. ಆದರೆ ಸೂಕ್ತ ಚಿಕಿತ್ಸೆ ಪಡೆಯದೇ ಮನೆಯಲ್ಲಿಯೇ ಉಳಿದಿದ್ದರು. ಕೊನೆಗೆ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ. ಇವರ ನಿರ್ದೇಶನದಲ್ಲಿ ಎರಡು ಸಿನಿಮಾಗಳನ್ನು ನಿರ್ಮಿಸಿ, ಒಂದು ಚಿತ್ರದಲ್ಲಿ ನಾಯಕರಾಗಿದ್ದ ಡಿ.ಎಸ್‌. ಮಂಜುನಾಥ್‌ ಈ ಹಿಂದೆ ಕೊರೋನಾಗೆ ಬಲಿಯಾಗಿದ್ದರು. ಇದೀಗ ನಿರ್ದೇಶಕ ಅಭಿರಾಮ್‌ ಅವರೂ ಇಹಲೋಕ ತ್ಯಜಿಸಿದ್ದಾರೆ.

8:22 AM IST:

ರಾಜ್ಯದ ನ್ಯಾಯಾಂಗ ಇತಿಹಾಸದಲ್ಲಿ ಮೊದಲ ಬಾರಿಗೆ ಕನ್ನಡದಲ್ಲಿ ಆದೇಶಗಳನ್ನು ಬರೆಸಿದ ಕೀರ್ತಿಗೆ ಭಾಜನರಾಗಿದ್ದ ನಿವೃತ್ತ ಜಿಲ್ಲಾ ನ್ಯಾಯಾಧೀಶ ಕೆ.ವಿ. ವಾಸುದೇವ ಮೂರ್ತಿ (83) ಹೃದಯಾಘಾತದಿಂದ ಶನಿವಾರ ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ನಗರದ ಹನುಮಂತನಗರದ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ. ಸಂಜೆ 6.30ಕ್ಕೆ ಚಾಮರಾಜಪೇಟೆಯ ಟಿ.ಆರ್‌.ಮಿಲ್‌ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

11:11 AM IST:

ಸ್ವಾತಂತ್ರ್ಯ ಹೋರಾಟಗಾರ ಎಚ್‌. ಎಸ್. ದೊರೆಸ್ವಾಮಿ ಇಂದು (ಬುಧವಾರ) ವಿಧಿವಶರಾಗಿದ್ದಾರೆ.103 ವರ್ಷದ ಎಚ್‌. ಎಸ್. ದೊರೆಸ್ವಾಮಿ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಬುಧವಾರ ಮಧ್ಯಾಹ್ನ 1.30ರ ಸುಮಾರಿಗೆ ಹೃಧಯಾಘಾತದಿಂದ ಮೃತಪಟ್ಟಿದ್ದಾರೆ.

"

ಕೋವಿಡ್ ಸೋಂಕಿನಿಂದ ಗುಣಮುಖಗೊಂಡ ದೊರೆಸ್ವಾಮಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆದ್ದರಿಂದ ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 12 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದರು.ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ಕರೆತರಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.

7:48 AM IST:

ದೇಶದ ಅತಿದೊಡ್ಡ ಪುಸ್ತಕ ಮಳಿಗೆ ಎಂದೇ ಖ್ಯಾತವಾಗಿರುವ ಸಪ್ನಾ ಬುಕ್‌ಹೌಸ್‌ ಸಂಸ್ಥಾಪಕ ಸುರೇಶ್‌ ಸಿ. ಶಾ (84) ಅವರು ನಿಧನರಾದರು.

ಚಿಕ್ಕ ಮಳಿಗೆಯೊಂದರಲ್ಲಿ 1966ರಲ್ಲಿ ಸಪ್ನಾ ಬುಕ್‌ ಹೌಸ್‌ ಆರಂಭಿಸಿದ ಸುರೇಶ್‌, ದೇಶದ ಅತಿ ದೊಡ್ಡ ಮಳಿಗೆಯಾಗಿ ಬೆಳೆಸಿದರು. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ 19 ಶಾಖೆಗಳನ್ನು ಹೊಂದಿರುವ ಸಪ್ನಾ ಕನ್ನಡ ಪುಸ್ತಕಗಳನ್ನು ವ್ಯಾಪಕವಾಗಿ ಓದುಗರಿಗೆ ತಲುಪಿಸುವ ಕೆಲಸವನ್ನು ಸತತವಾಗಿ ಮಾಡಿಕೊಂಡು ಬರುತ್ತಿದೆ.

ಸುರೇಶ್‌ ಅವರು ಮೂವರು ಪುತ್ರರು ಸೇರಿದಂತೆ ಕುಟುಂಬ ಸದಸ್ಯರು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ ಎಂದು ಸಪ್ನಾ ಸಂಸ್ಥೆ ಪ್ರಕಟಣೆ ತಿಳಿಸಿದೆ. ಸಿಎಂ ಸೇರಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

11:41 AM IST:

ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಹಿರಿಯ ನಟ ಕೃಷ್ಣೇಗೌಡ ಮಂಗಳವಾರ ಮುಂಜಾನೆ 4 ಗಂಟೆಗೆ, ಆಸ್ಟರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ರಂಗಭೂಮಿ ಕಲಾವಿದ ಹಾಗೂ ಹಲವಾರು ಚಿತ್ರಗಳಲ್ಲಿ ವಿಶಿಷ್ಟ ಅಭಿನಯ ನೀಡಿ ತಮ್ಮದೇ ಛಾಪು ಮೂಡಿಸಿದ್ದ ಕೃಷ್ಣೇಗೌಡರು, ಚಲನಚಿತ್ರ ಕಲಾವಿದರ ಸಂಘದ ಖಜಾಂಚಿ ಆಗಿ ಸೇವೆ ಸಲ್ಲಿಸಿದ್ದರು.

11:35 AM IST:

ಕರ್ನಾಟಕ ಕಂಡ ಅಪ್ರತಿಮ ನೃತ್ಯ ಕಲಾವಿದರಲ್ಲಿ ಒಬ್ಬರಾಗಿದ್ದ ನೃತ್ಯ ಗುರು ಬಿ .ಭಾನುಮತಿ ಅವರು  ಕೊರೊನಾದಿಂದ ಸೋಮವಾರ ನಿಧನ ಹೊಂದಿದ್ದಾರೆ. ಕಳೆದ ಒಂದು ವಾರದಿಂದ ಕೊರೋನಾಗೆ ಚಿಕಿತ್ಸೆ ಪಡೆಯುತ್ತಿದ್ದರು. 

ಮೂಲತ: ಕಲಾವಿದರ ಕುಟುಂಬದಿಂದಲೇ ಬಂದ ಬಿ. ಭಾನುಮತಿ ಭರತನಾಟ್ಯ ನೃತ್ಯ  ಪ್ರಕಾರದಲ್ಲಿ ದೊಡ್ಡ ಹೆಸರು ಮಾಡಿದವರು. ರಾಷ್ಟ್ರೀಯ, ಅಂತರ ರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕ ಶಾಸ್ತ್ರೀಯ ನೃತ್ಯ ಸೌಂದರ್ಯವನ್ನು ಪಸರಿಸಿದವರು ಭಾನುಮತಿ.

4:41 PM IST:

ಪರಮಾಣು ಶಕ್ತಿ ಆಯೋಗದ ಮಾಜಿ ಅಧ್ಯಕ್ಷ ಶ್ರೀಕುಮಾರ್ ಬ್ಯಾನರ್ಜಿ (70) ಅವರು ನವಿ ಮುಂಬೈನ ಸ್ವಗೃಹದಲ್ಲಿ ಭಾನುವಾರ ಹೃದಯಾಘಾತದಿಂದ ನಿಧನ ಹೊಂದಿದರು.

ಬ್ಯಾನರ್ಜಿ ಅವರು ಕಳೆದ ತಿಂಗಳಷ್ಟೇ ಕೋವಿಡ್‌–19ನಿಂದ ಗುಣಮುಖರಾಗಿದ್ದರು. 2012ರಲ್ಲಿ ಅವರು ಪರಮಾಣು ಶಕ್ತಿ ಆಯೋಗದ ಅಧ್ಯಕ್ಷ ಸ್ಥಾನ ಹಾಗೂ ಪರಮಾಣು ಶಕ್ತಿ ಇಲಾಖೆಯ ಕಾರ್ಯದರ್ಶಿ ಹುದ್ದೆಯಿಂದ ನಿವೃತ್ತಿ ಹೊಂದಿದ್ದರು.

2010ರ ತನಕ ಒಟ್ಟು ಆರು ವರ್ಷಗಳ ಕಾಲ ಬ್ಯಾನರ್ಜಿ ಅವರು ಭಾಭಾ ಪರಮಾಣು ಸಂಶೋಧನಾ ಕೇಂದ್ರದ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.

3:01 PM IST:

ಅಂತರರಾಷ್ಟ್ರೀಯ ಮಟ್ಟದ ಸ್ಯಾಕ್ಸೊಫೋನ್ ಕಲಾವಿದ ಮಚ್ಚೇಂದ್ರನಾಥ್ ಮಂಗಳಾದೇವಿ (62) ಭಾನುವಾರ ನಿಧನರಾದರು.

ಅವರಿಗೆ ಕೋವಿಡ್ ತಗುಲಿತ್ತು. ವಾರದ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ಪ್ರತಿನಿತ್ಯ ಸ್ಯಾಕ್ಸೊಫೋನ್ ಸೇವೆ ಸಲ್ಲಿಸುತ್ತಿದ್ದರು. ದುಬೈ, ಅಬುಧಾಬಿ, ಆಸ್ಟ್ರೇಲಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ ಸ್ಯಾಕ್ಸೊಫೋನ್ ಸಂಗೀತ ಕಚೇರಿಗಳನ್ನು ನಡೆಸಿದ್ದರು.

9:43 AM IST:

ರಾಜಶ್ರೀ ಪ್ರೊಡಕ್ಷನ್‌ನ ಸೂಪರ್‌ಹಿಟ್‌ ಚಿತ್ರಗಳಾದ ‘ಮೈನೆ ಪ್ಯಾರ್‌ ಕಿಯಾ’, ‘ಹಮ್‌ ಆಪ್ಕೇ ಹೇ ಕೌನ್‌’ ಸೇರಿದಂತೆ ಹಲವು ಜನಪ್ರಿಯ ಚಿತ್ರಗಳಿಗೆ ಸಂಗೀತ ನೀಡಿದ್ದ ರಾಮ್‌ಲಕ್ಷ್ಮಣ್‌ (78)ಶನಿವಾರ ಹೃದಯಾಘಾತದಿಂದ ನಿಧನರಾದರು.

ರಾಮಲಕ್ಷ್ಮಣ್‌ 6 ದಿನಗಳ ಹಿಂದಷ್ಟೇ ಕೋವಿಶೀಲ್ಡ್‌ ಲಸಿಕೆಯ 2ನೇ ಡೋಸ್‌ ಪಡೆದಿದ್ದರು. ಲಸಿಕೆ ಪಡೆದಾಗ ಸಮಸ್ಯೆ ಇರಲಿಲ್ಲ. ಆದರೆ ಮನೆಗೆ ಬಂದ ನಂತರ ನಿಶ್ಯಕ್ತಿ ಕಾಣಿಸಿಕೊಂಡಿತ್ತು. ವೈದ್ಯರು ಮನೆಗೇ ಬಂದು ಚಿಕಿತ್ಸೆ ನೀಡಿದ್ದರು. ಆದರೆ ಶನಿವಾರ ಮುಂಜಾನೆ ಸಾವನ್ನಪ್ಪಿದರು’ ಎಂದು ಪುತ್ರ ಅಮರ್‌ ತಿಳಿಸಿದ್ದಾರೆ.

ಇವರ ಮೂಲ ಹೆಸರು ವಿಜಯ್‌ ಪಾಟೀಲ್‌. ತಮ್ಮ ಮೊದಲ ಮರಾಠಿ ಸಿನಿಮಾ ‘ಪಾಂಡು ಹವಾಲ್ದಾರ್‌’ನಲ್ಲಿ ಸಹೋದ್ಯೋಗಿ ಸುರೇಂದ್ರ ಅವರೊಂದಿಗೆ ಸೇರಿ ‘ರಾಮ-ಲಕ್ಷ್ಮಣ’ ಹೆಸರಿನಲ್ಲಿ ಹಾಡೊಂದನ್ನು ಬರೆದಿದ್ದರು. ಅನಂತರ ಅವರ ಹೆಸರೇ ರಾಮಲಕ್ಷ್ಮಣ್‌ ಎಂದಾಯಿತು. 40 ವರ್ಷಗಳ ವೃತ್ತಿಜೀವನದಲ್ಲಿ ಇವರು ಹಿಂದಿ, ಮರಾಠಿ, ಬೋಜ್ಪುರಿಯ 150ಕ್ಕೂ ಹೆಚ್ಚು ಸಿನಿಮಾಗಳಿಗೆ ಹಾಡು ಬರೆದಿದ್ದಾರೆ.

10:49 AM IST:

ಆಧುನಿಕ ಗಾಂಧಿವಾದಿ ಎಂದೇ ಪ್ರಸಿದ್ಧಿಯಾಗಿದ್ದ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ (80) ಅವರು ಅನಾರೋಗ್ಯದಿಂದ  ನಿಧನರಾಗಿದ್ದಾರೆ.

ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ಚೈನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮೈಸೂರಿನ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ಇಂದು (ಶುಕ್ರವಾರ) ಮಧ್ಯಾಹ್ನ ಮೈಸೂರಿನ ಕುವೆಂಪು ನಗರ ನಿವಾಸದಲ್ಲಿ ಸಾವನ್ನಪ್ಪಿದ್ದಾರೆ.

10:46 AM IST:

ಕೇಂದ್ರದ ಮಾಜಿ ಸಚಿವ, ರೈತ ಮುಖಂಡ (78) ಅವರು ಇಂದು(ಶುಕ್ರವಾರ) ಅನಾರೋಗ್ಯದಿಂದ ರಾಗಿದ್ದಾರೆ. ಕೆಲ ದಿನಗಳ ಹಿಂದೆ ಅನರೋಗ್ಯದಿಂದ ಬಳಲುತ್ತಿದ್ದ ಬಾಬಾಗೌಡ ಅವರನ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. 

ಸಂಪೂರ್ಣ ಸುದ್ದಿಗಾಘಿ ಇಲ್ಲಿ ಕ್ಲಿಕ್ ಮಾಡಿ: ರೈತ ಮುಖಂಡ ಬಾಬಾಗೌಡ ಪಾಟೀಲ ವಿಧಿವಶ

2:51 PM IST:

ವೃಕ್ಷ ರಕ್ಷಕ ಸುಂದರ್‌ಲಾಲ್ ಬಹುಗುಣ ಇನ್ನಿಲ್ಲ
 

 

 

Passing away of Shri Sunderlal Bahuguna Ji is a monumental loss for our nation. He manifested our centuries old ethos of living in harmony with nature. His simplicity and spirit of compassion will never be forgotten. My thoughts are with his family and many admirers. Om Shanti.

— Narendra Modi (@narendramodi)

 

7:47 AM IST:

ಬೆಂಗಳೂರು: ಡಾ. ರಾಜ್‌ಕುಮಾರ್‌ ಸೇರಿದಂತೆ ಹಲವು ಗಣ್ಯ ವ್ಯಕ್ತಿಗಳಿಗೆ ಯೋಗ ಗುರು ಆಗಿದ್ದ ಹೊನ್ನಪ್ಪ ನಾಯ್ಕರ್‌ ಕೊರೋನಾದಿಂದ ಮೃತಪಟ್ಟಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಹಿಂದೆ ಪೊಲೀಸ್‌ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅವರು ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ. ನಾಯ್ಕರ್‌ ನಿಧನಕ್ಕೆ ಹಿರಿಯ ನಿರ್ಮಾಪಕ ಚಿನ್ನೇಗೌಡ ಸೇರಿದಂತೆ ಚಿತ್ರರಂಗದ ಹಲವರು ಶೋಕ ವ್ಯಕ್ತಪಡಿಸಿದ್ದಾರೆ. ಜೆ.ಪಿ. ನಗರದಲ್ಲಿ ವಾಸ್ತವ್ಯವಿದ್ದ ನಾಯ್ಕರ್‌ ಅವರ ಯೋಗಾಶ್ರಮ ಕನಕಪುರದ ಬಳಿ ಇದೆ. ಮೃತರ ಅಂತ್ಯಕ್ರಿಯೆ ಕನಕಪುರದ ನಾಗದೇವನಹಳ್ಳಿ ಬಳಿ ನೆರವೇರಿದೆ.

6:22 PM IST:

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ನಾಯಕಿ ಡಾ. ಶಾಂತಾ ಹಲಗಿ ಧಾರವಾಡದ ನಿವಾಸದಲ್ಲಿ ನಿಧನರಾಗಿದ್ದಾರೆ. 

ಚಲನಚಿತ್ರ ಸೆನ್ಸಾರ್ ಮಂಡಳಿ ಪ್ರಾದೇಶಿಕ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಹಲಗಿ, ಸಮಾಜ ಕಲ್ಯಾಣ ಸಲಹಾ ಮಂಡಳಿ, ಮದ್ಯಪಾನ ಸಂಯಮ ಮಂಡಳಿ, ರಾಜ್ಯ ಮಹಿಳಾ ಆಯೋಗಗಳಿಗೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು

ಕೃಷಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ವೃತ್ತಿ ಜೀವನ ಆರಂಭಿಸಿದ್ದ ಹಲಗಿ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ರಾಜಕೀಯ ಪ್ರವೇಶಿಸಿದ್ದ ಅವರು ರಾಜ್ಯ ಮತ್ತು ಕೇಂದ್ರದಲ್ಲಿ ಅನೇಕ ಹುದ್ದೆಗಳನ್ನು ನಿರ್ವಹಿಸಿದ್ದರು. 

5:43 PM IST:

ಕೋವಿಡ್ ಎರಡನೇ ಅಲೆಗೆ ಭಾರತ ತತ್ತರಿಸಿ ಹೋಗಿದೆ. ಇದೀಗ ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಪ್ರಿಯಾ ಪೂನಿಯಾ ತಾಯಿಯನ್ನು ಕೊರೋನಾ ಹೆಮ್ಮಾರಿ ಬಲಿ ಪಡೆದಿದೆ. ಈ ಆಘಾತಕಾರಿ ಸುದ್ದಿಯನ್ನು ಪ್ರಿಯಾ ಪೂನಿಯಾ ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗ ಪಡಿಸಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ : ಟೀಂ ಇಂಡಿಯಾ ಕ್ರಿಕೆಟ್ ಆಟಗಾರ್ತಿ ಪ್ರಿಯಾ ಪೂನಿಯಾ ತಾಯಿ ಕೊರೋನಾಗೆ ಬಲಿ

4:41 PM IST:

ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ನ ಮಾಜಿ ನಿರ್ದೇಶಕ ಹಾಗೂ ಪದ್ಮಶ್ರೀ ಡಾ. ಕೆಕೆ ಅಗರ್ವಾಲ್ ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿನಿಂದ ಬಳಲುತ್ತಿದ್ದರು. ಆದರೆ ಸೋಂಕು ಕಡಿಮೆಯಾಗದ ಹಿನ್ನೆಲೆ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗುತ್ತು. 

ಕೆಲ ದಿನಗಳ ಹಿಂದಷ್ಟೇ ತಮಗೆ ಸೋಂಕು ಕಾಣಿಸಿಕೊಂಡಿದೆ ಎಂದು ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು. ಆದರೆ ಸೋಮವಾರ ರಾತ್ರಿ 11.30 ಗಂಟೆಗೆ ಇದೇ ಟ್ವಿಟರ್‌ ಖಾತೆಯಲ್ಲಿ ಅವರ ನಿಧನದ ಸುದ್ದಿಯೂ ಹಾಕಲಾಗಿದೆ. 

pic.twitter.com/uy7JzOyGWK

— Dr K K Aggarwal (@DrKKAggarwal)

ಸಾವಿರಾರು ಮಂದಿಗೆ ಸಹಾಯ ಮಾಡಿದ್ದ, ಅನೇಕರಿಗೆ ಉಚಿತ ಚಿಕಿತ್ಸೆ ನೀಡಿದ್ದ ವೈದ್ಯ ಅಗರ್ವಾಲ್ ಕೊರೋನಾ ವಿರುದ್ಧದ ಹೋರಾಟದಲ್ಲಿ ಸೋತು ಕೊನೆಯುಸಿರೆಳೆದಿದ್ದಾರೆ. 

7:40 PM IST:

ಡಿ.ದೇವರಾಜ ಅರಸು ಹಿಂದುಳಿದ ವಗ೯ಗಳ ಅಭಿವೃಧ್ಧಿ ನಿಗಮದ ಅಧ್ಯಕ್ಷರಾದ ಆರ್.ರಘು( ಕೌಟಿಲ್ಯ )ರವರ ಧಮ೯ಪತ್ನಿ ಶ್ರೀಮತಿ ನಿರ್ಮಲ ರಘು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

 

2:20 PM IST:

ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಫೈನಾನ್ಷಿಯಲ್ ಎಕ್ಸ್‌ಪ್ರೆಸ್‌ ವ್ಯವಸ್ಥಾಪಕ ಸಂಪಾದಕ ಸುನಿಲ್ ಜೈನ್ ನಿಧನರಾಗಿದ್ದಾರೆ. ಜೈನ್ ಸಹೋದರಿ ಸಂಧ್ಯಾ ತನ್ನ ಸಹೋದರನ ನಿಧನದ ಸುದ್ದಿಯನ್ನು ಟ್ವಿಟ್ಟರ್ ನಲ್ಲಿ ಖಚಿತಪಡಿಸಿದ್ದಾರೆ.

"ನಾನು ಇಂದು ಸಹೋದರ ಸುನಿಲ್ ಜೈನ್ ಅವರನ್ನು ಕೊರೋನಾದಿಂದಾಗಿ ಕಳೆದುಕೊಂಡಿದ್ದೇವೆ. ಏಮ್ಸ್ ನ ವೈದ್ಯರು ಸಾಕಷ್ಟು ಶ್ರಮಿಸಿದ್ದರೂ ಅವರನ್ನು ಉಳಿಸಲಾಗಿಲ್ಲ. ತೀರ್ಥಂಕರರು ಅಗಲಿದ ಆತ್ಮಕ್ಕೆ  ಮುಂದಿನ ಪ್ರಯಾಣಕ್ಕೆ ಮಾರ್ಗದರ್ಶನ ನೀಡಲಿ ಎಂದು  ಸಂಧ್ಯಾ  ಹೇಳಿದ್ದಾರೆ.

We lost my brother Sunil Jain this evening to Covid+its complications. Doctors+staff at AIIMS battled heroically, but the demon was too powerful. May Tirthankaras guide his onward journey; deep gratitude to all who stood by us in these darkest days

— Sandhya Jain (@vijayvaani)

2:16 PM IST:

ಕೊರೋನ ವೈರಸ್ ಸೋಂಕಿನಿಂದ ಚೇತರಿಸಿಕೊಂಡ ಕೆಲ ದಿನಗಳ ನಂತರ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಸಂಸದ ರಾಜೀವ್ ಸತವ್(46) ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇದು ನಮ್ಮೆಲ್ಲರಿಗೂ ದೊಡ್ಡ ನಷ್ಟವಾಗಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀ ಸತವ್ ಅವರು ಕಾಂಗ್ರೆಸ್ ಆದರ್ಶಗಳನ್ನು ಸಾಕಾರಗೊಳಿಸಿದ ನನ್ನ ಸ್ನೇಹಿತ ಎಂದು ಹೊಗಳಿದ್ದಾರೆ ರಾಹುಲ್ ಗಾಂಧಿ.

ರಾಜೀವ್ ಸತವ್ ಅವರಿಗೆ ಮೇ 9, 2021 ರಂದು ಕೊರೋನಾ ನೆಗೆಟಿವ್ ಬಂದಿತ್ತು. ಆದರೂ ದೀರ್ಘಕಾಲದ ಅನಾರೋಗ್ಯದ ನಂತರ ಅವರು ಮೇ 16 ರಂದು ಬೆಳಗ್ಗೆ 4:58ಕ್ಕೆ ನ್ಯುಮೋನಿಯಾಕ್ಕೆ ಬಲಿಯಾದರು ಎಂದು ಕಾಂಗ್ರೆಸ್ ನಾಯಕನಿಗೆ ಚಿಕಿತ್ಸೆ ನೀಡಿದ ಜೆಹಂಗೀರ್ ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ.

4:06 PM IST:

ಪಶ್ಚಿಮ ಬಂಗಾಳದ ಮುಖ್ಯಮಮತ್ರಿ ಮಮತಾ ಬ್ಯಾನರ್ಜಿ ಸಹೋದರ ಅಶೀಮ್ ಬ್ಯಾನರ್ಜಿ(60) ಶನಿವಾರದಂದು ಮೃತಪಟ್ಟಿದ್ದಾರೆ.

ಕೊರೋನಾ ಸೋಂಕು ತಗುಲಿದ್ದ ಅಶೀಮ್‌ರವರಿಗೆ ಕೋಲ್ಕತ್ತಾದ ಮೆಡಿಕೋ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಆರಂಭಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಆಶೀಮ್ ಕೊನೆಯುಸಿರೆಳೆದಿದ್ದಾರೆ. ಇಂದು ಮಧ್ಯಾಹ್ನ ಕೊರೋನಾ ಮಾರ್ಗಸೂಚಿಯಂತೆ ಅಂತ್ಯ ಕ್ರಿಯೆ ನಡೆಯಲಿದೆ. 

1:53 PM IST:

ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಭಗತ್‌ ಸಿಂಗ್‌ರವರ ಸೋದರಳಿಯ ಅಭಯ್ ಸಿಂಗ್ ಸಂಧು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರದಂದು ಮೊಹಾಲಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿಳೆದಿದ್ದಾರೆ.

ಪಂಜಾಬ್‌ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹಾಗೂ ಆರೋಗ್ಯ ಸಚಿವ ಬಲಬೀರ್‌ ಸಿಂಗ್ ಸಿಧು ಇವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. 

12:03 PM IST:

ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಉಪತಹಶೀಲ್ದಾರ ಜಯಶ್ರೀ ನಾಗನೂರಿ  ಕೋವಿಡ್ ಗೆ ಬಲಿಯಾಗಿದ್ದಾರೆ. 

7:17 AM IST:

ಮೂಲತಃ ಬಾಗಲಕೋಟ ಜೆಲ್ಲೆಯ ಧಾರವಾಡದ ಹಿರಿಯ ಸಾಹಿತಿ ಪ್ರೊ.ಹಸನಬಿ ಬಿಳಗಿ ಶುಕ್ರವಾರ ನಿಧನರಾದರು. ವಚನ ಸಾಹಿತ್ಯದಲ್ಲಿ ಆಳವಾದ ಅಧ್ಯಯನ ಮಾಡಿದ್ದರು. ಕೊರೋನಾ ಮಹಾಮಾರಿಯಿಂದಾಗಿ ಇವರು ಕೊನೆಯುಸಿರೆಳೆದಿದ್ದಾರೆ.

5:37 PM IST:

ಚಾಲೆಂಜಿಂಗ್ ಸ್ಟಾರ್ ದರ್ಶನ್ ಲಾಕ್‌ಡೌನ್‌ ದಿನಗಳನ್ನು ಮೈಸೂರಿನಲ್ಲಿ ಕಳೆಯುತ್ತಿದ್ದಾರೆ. ಇದೇ ಸಮಯದಲ್ಲಿ ತಮ್ಮೊಟ್ಟಿಗೆ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಬಾಡಿಗಾರ್ಡ್‌ ವಿಷ್ಣು ನಿಧನರಾಗಿದ್ದಾರೆ, ಅದೂ ಕೊರೋನಾದಿಂದ. ಬೇಸರಗೊಂಡ ದರ್ಶನ ಕಂಬನಿ ಮಿಡಿದಿದ್ದಾರೆ.
"

5:59 PM IST:

ಕರ್ನಾಟಕದ ರಾಜಕೀಯ ಇತಿಹಾಸವನ್ನು ಸಂಪೂರ್ಣ ಬಲ್ಲವರಾಗಿದ್ದ ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ (65) ಇನ್ನಿಲ್ಲ. ಕೊರೋನಾ ವೈರಸ್ ಅವರ ಪ್ರಾಣವನ್ನು ಬಲಿ ಪಡೆದಿದೆ. ಸಿಎಂ ಯಡಿಯೂರಪ್ಪ ಅವರಿಗೆ ರಾಜಕೀಯ ಸಲಹೆಗಾರರಾಗಿಯೂ ಕೆಲಸ ನಿರ್ವಹಿಸಿದ್ದರು. ಕೆಂಗಲ್ ಹನುಮಂತಯ್ಯ ಅವರ ಕಾಲದಿಂದ ಇಂದಿನ ರಾಜಕಾರಣದ ಬೆಳವಣಿಗೆಗಳ ಜ್ಞಾನ ಅವರಿಗಿತ್ತು. ಪಕ್ಷಗಳು ಬೆಳೆದ ರೀತಿ, ಚುನಾವಣೆ, ರಾಜಕೀಯ ಧ್ರುವೀಕರಣ, ಪಕ್ಷಾಂತರ ಮತ್ತು ಪರಿಣಾಮ ಹೀಗೆ ಎಲ್ಲ ವಿಚಾರಗಳನ್ನು ವಿಶ್ಲೇಷಿಸುವ ಶಕ್ತಿ ಇದ್ದ ಹಿರಿಯ ಪತ್ರಕರ್ತ ಕನ್ನಡ ಪತ್ರಿಕೋದ್ಯಮದಿಂದ ದೂರವಾಗಿದ್ದಾರೆ.

ಮಹಾದೇವ್ ಪ್ರಕಾಶ್ ಇನ್ನಿಲ್ಲ
 

 

 

2:36 PM IST:

ಮಂಗಳೂರು ಮೀಸಲು ಪೊಲೀಸ್ ಪಡೆಯ ಸಿದ್ದಪ್ಪ ಶಿಂಗೆ(50) ಮೃತರು. ಮೂಲತಃ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನವರಾಗಿದ್ದ ಶಿಂಗೆ, ಎರಡು ವಾರಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಟೆಸ್ಟ್ ವೇಳೆ ಕೊರೋನಾ ಪಾಸಿಟಿವ್ ಆಗಿತ್ತು.

ಸದ್ಯ ಪಾಸಿಟಿವ್ ಆಗಿ ಬಹು ಅಂಗಾಂಗ ವೈಫಲ್ಯದಿಂದ ಸಾವು. ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿದ್ದರೂ ಬಲಿ ಪಡೆದ ವೈರಸ್.

12:50 PM IST:

ಹಿಂದಿ ಕಿರುತೆರೆ ನಟ, ಮಹಾಭಾರತ ಧಾರಾವಾಹಿಯ ಭೀಷ್ಮ ಪಾತ್ರಧಾರಿ ಮುಖೇಶ್ ಖನ್ನಾ ಸಾವಿನ ಗಾಳಿ ಸುದ್ದಿ ವೈರಲ್ ಆದ ಬೆನ್ನಲ್ಲೇ, ಅವರ ಸಹೋದರಿ ಕಮಲ್ ಕಪೂರ್ ಕೊರೋನಾ 19ಗೆ ಬಲಿಯಾಗಿದ್ದಾರೆ.