ಅಮೇಠಿಯಿಂದ ಸ್ಮೃತಿ ವಿರುದ್ಧ ಸ್ಪರ್ಧೆ: ಸೋನಿಯಾ ಅಳಿಯ ವಾದ್ರಾ ಇಂಗಿತ

Published : Apr 05, 2024, 05:49 AM IST
ಅಮೇಠಿಯಿಂದ ಸ್ಮೃತಿ ವಿರುದ್ಧ ಸ್ಪರ್ಧೆ: ಸೋನಿಯಾ ಅಳಿಯ ವಾದ್ರಾ ಇಂಗಿತ

ಸಾರಾಂಶ

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್‌ ವಾದ್ರಾ ಉತ್ತರ ಪ್ರದೇಶದ ಅಮೇಠಿಯಿಂದ ಕಣಕ್ಕೆ ಇಳಿಯುವ ಮುನ್ಸೂಚನೆ ನೀಡಿದ್ದಾರೆ. ‘ಅಮೇಠಿ ಜನರು ಹಾಲಿ ಸಂಸದೆ ಸ್ಮೃತಿ ಇರಾನಿ ವಿರುದ್ಧ ಕ್ಷೇತ್ರದಿಂದ ನಾನು ಸ್ಪರ್ಧಿಸಬೇಕು ಎಂದು ಬಯಸುತ್ತಿದ್ದಾರೆ’ ಎಂದು ಹೇಳಿದ್ದಾರೆ.  

ನವದೆಹಲಿ (ಏ.05): ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್‌ ವಾದ್ರಾ ಉತ್ತರ ಪ್ರದೇಶದ ಅಮೇಠಿಯಿಂದ ಕಣಕ್ಕೆ ಇಳಿಯುವ ಮುನ್ಸೂಚನೆ ನೀಡಿದ್ದಾರೆ. ‘ಅಮೇಠಿ ಜನರು ಹಾಲಿ ಸಂಸದೆ ಸ್ಮೃತಿ ಇರಾನಿ ವಿರುದ್ಧ ಕ್ಷೇತ್ರದಿಂದ ನಾನು ಸ್ಪರ್ಧಿಸಬೇಕು ಎಂದು ಬಯಸುತ್ತಿದ್ದಾರೆ’ ಎಂದು ಹೇಳಿದ್ದಾರೆ.

ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು ‘ಅಮೇಠಿಯ ಜನರು ತಮ್ಮ ತಪ್ಪನ್ನು ಅರ್ಥಮಾಡಿಕೊಂಡಿದ್ದಾರೆ. ಮತ್ತು ಈಗ ಅವರು ತಮ್ಮ ಕ್ಷೇತ್ರವನ್ನು ಪ್ರತಿನಿಧಿಸಲು ಗಾಂಧಿ ಕುಟುಂಬದ ಸದಸ್ಯರನ್ನು ಬಯಸುತ್ತಾರೆ ಎಂದು ನಾನು ಭಾವಿಸುತ್ತೇನೆ. ನಾನು ರಾಜಕೀಯಕ್ಕೆ ಸೇರಲು ನಿರ್ಧರಿಸಿದರೆ ಅಮೇಠಿಯಿಂದಲೇ ಪದಾರ್ಪಣೆ ಮಾಡಬೇಕು. ಇಲ್ಲಿಂದಲೇ ಆಯ್ಕೆ ಆಗಬೇಕು ಎಂದು ಅಲ್ಲಿನ ಜನರಿಂದ ನನಗೆ ವಿನಂತಿಗಳು ಬರುತ್ತವೆ’ ಎಂದರು.

‘ಈಗಿನ ಸಂಸದೆಯನ್ನು (ಇರಾನಿ) ಅವರನ್ನು ಆಯ್ಕೆ ಮಾಡಿ ತಪ್ಪು ಮಾಡಿದೆವು ಎಂದು ಜನ ಅಂದುಕೊಳ್ಳುತ್ತಿದ್ದಾರೆ. ಹೀಗಾಗಿಯೇ ಅವರು ಗಾಂಧಿ ಕುಟುಂಬದ ಪುನರಾಗಮನ ಬಯಸುತ್ತಿದ್ದಾರೆ’ ಎಂದರು. ಅಲ್ಲದೆ, ‘ನಾನು ಮೊದಲ ಚುನಾವಣಾ ಪ್ರಚಾರ ಮಾಡಿದ್ದು 1999ರಲ್ಲಿ ಅಮೇಠಿಯಿಂದಲಲೇ ಎಂಬುದು ನನಗೆ ನೆನಪಿದೆ’ ಎಂದು ವಾದ್ರಾ ಹೇಳಿದರು.

ಗುಜರಾತ್‌ ಹ್ಯಾಟ್ರಿಕ್‌ ಕ್ಲೀನ್‌ಸ್ವೀಪ್‌ಗೆ ಬಿಜೆಪಿ ಗುರಿ: ಬಿಜೆಪಿ ಓಟ ತಡೆಯಲು ಕಾಂಗ್ರೆಸ್- ಆಪ್‌ ಮೈತ್ರಿ

ಅಮೇಠಿ ಕ್ಷೇತ್ರದಲ್ಲಿ ಕಳೆದ ಸಲ ಕಾಂಗ್ರೆಸ್‌ ಅಭ್ಯರ್ಥಿ ರಾಹುಲ್ ಗಾಂಧಿ ಅವರು ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಸೋತಿದ್ದರು. ಈ ಸಲ ಇರಾನಿ ಮತ್ತೆ ಚುನಾವಣೆಗೆ ನಿಂತಿದ್ದಾರೆ. ಆದರೆ ಕಾಂಗ್ರೆಸ್‌ ಅಭ್ಯರ್ಥಿ ಇನ್ನೂ ಘೋಷಣೆ ಆಗಿಲ್ಲ. ವಾದ್ರಾ ವಿರುದ್ಧ ಅಕ್ರಮ ಆದಾಯ, ಅಕ್ರಮ ಆಸ್ತಿ ಸೇರಿ ಹಲವು ಆರೋಪಗಳು ಇದ್ದು ಸಿಬಿಐ ಸೇರಿ ವಿವಿಧ ಸಂಸ್ಥೆಗಳು ತನಿಖೆ ಮಡೆಸುತ್ತಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 6 !
ಇನ್ನೂ 3 ದಿನ ತಗ್ಗುವುದಿಲ್ಲ ಇಂಡಿಗೋಳು! - ನಿನ್ನೆ ಮತ್ತೆ 650 ವಿಮಾನ ರದ್ದು