ಕಾಲೇಜೊಳಗೆ ನಮಾಜ್‌ಗೆ ಅವಕಾಶ ನೀಡದ್ದಕ್ಕೆ ಪ್ರಿನ್ಸಿಪಾಲ್‌ಗೆ ದಿಗ್ಬಂಧನ!

Published : Jul 30, 2024, 02:52 PM IST
ಕಾಲೇಜೊಳಗೆ ನಮಾಜ್‌ಗೆ ಅವಕಾಶ ನೀಡದ್ದಕ್ಕೆ ಪ್ರಿನ್ಸಿಪಾಲ್‌ಗೆ ದಿಗ್ಬಂಧನ!

ಸಾರಾಂಶ

ಚರ್ಚ್‌ ಆಡಳಿತದ ಕಾಲೇಜಲ್ಲಿ ನಮಾಜ್‌ ಮಾಡಲು ಮುಂದಾದ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ ತಡೆದಿದ್ದು ವಿವಾದಕ್ಕೀಡಾಗಿದೆ.

ಕೊಚ್ಚಿ (ಜು.30): ಇಲ್ಲಿಗೆ ಸಮೀಪದ ಮುವಾಟ್ಟುಪುಳದಲ್ಲಿ ಚರ್ಚ್‌ ಆಡಳಿತದ ಕಾಲೇಜಲ್ಲಿ ನಮಾಜ್‌ ಮಾಡಲು ಮುಂದಾದ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ ತಡೆದಿದ್ದು ವಿವಾದಕ್ಕೀಡಾಗಿದೆ. ಅನುಮತಿ ನಿರಾಕರಣೆ ವಿರೋಧಿಸಿ ಮುಸ್ಲಿಂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರೆ, ಇಂಥ ನಡೆಯನ್ನು ಬಿಜೆಪಿ ಹಾಗೂ ಕ್ರೈಸ್ತ ಸಂಘಟನೆಗಳು ವಿರೋಧಿಸಿವೆ.

ಶುಕ್ರವಾರ ನಿರ್ಮಲಾ ಕಾಲೇಜಿನ ಕೊಠಡಿಯೊಳಗೆ ಕೆಲವು ವಿದ್ಯಾರ್ಥಿನಿಯರು ಶುಕ್ರವಾರ ಪ್ರಾರ್ಥನೆ ಸಲ್ಲಿಸಲು ಮುಂದಾಗಿದ್ದರು. ಆದರೆ ಅವರನ್ನು ಬೋಧಕೇತರ ಸಿಬ್ಬಂದಿ ತಡೆದಿದ್ದಾರೆ ಎಂದು ಆರೋಪಿಸಿ ಕೆಲ ವಿದ್ಯಾರ್ಥಿಗಳು ನಿರ್ಮಲಾ ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿದರು ಹಾಗೂ ಪ್ರಾಚಾರ್ಯರಿಗೆ ಘೇರಾವ್‌ ಹಾಕಿದರು.

ಈ ಘಟನೆಯು ಬಿಜೆಪಿಯಿಂದ ಟೀಕೆಗೆ ಗುರಿಯಾಗಿದೆ. ಹಿಂದೂ ಮತ್ತು ಕ್ರೈಸ್ತ ಶಿಕ್ಷಣ ಸಂಸ್ಥೆಗಳಲ್ಲಿ ಕೆಲವರು ಸಮಸ್ಯೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಇಂತಹ ನಡೆಗಳ ಹಿಂದೆ ಉಗ್ರರ ಕೈವಾಡವಿದೆ. ಅಂತಹವರಿಗೆ ಎಡಪಕ್ಷಗಳು ಮತ್ತು ಕಾಂಗ್ರೆಸ್ ಬೆಂಬಲವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಆರೋಪಿಸಿದ್ದಾರೆ.

ವಂಚಿಸಿ ರಷ್ಯಾ ಸೇನೆಗೆ ಸೇರ್ಪಡೆ, ಉಕ್ರೇನ್ ಯುದ್ಧದಲ್ಲಿ ಹೋರಾಡುತ್ತಿದ್ ...

ಬಿಜೆಪಿ ನಾಯಕ ಪಿ.ಸಿ.ಜಾರ್ಜ್ ಮಾತನಾಡಿ, ‘ಯಾವುದಾದರೂ ಮುಸ್ಲಿಂ ಕಾಲೇಜುಗಳು ಹಿಂದೂಗಳು ಅಥವಾ ಕ್ರಿಶ್ಚಿಯನ್ನರಿಗೆ ಪ್ರಾರ್ಥನೆ ಮಾಡಲು ಕೊಠಡಿ ನೀಡುತ್ತವೆಯೇ?’ ಎಂದು ಪ್ರಶ್ನಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?
India Latest News Live: ನಾವು ದೇಶಕ್ಕಾಗಿ, ನೀವು ಚುನಾವಣೆಗಾಗಿ: ಬಿಜೆಪಿ. ಮೋದಿ ವಿರುದ್ದ ಪ್ರಿಯಾಂಕಾ ಗಾಂಧಿ ವಾಗ್ದಾಳಿ