ರಕ್ಷಣಾ ಸಚಿವಾಲಯದ ಸಮಿತಿಗೆ ಸಾಧ್ವಿ: ವಿಪಕ್ಷಗಳ ಪ್ರಶ್ನೆ ಇದ್ಹೇಗೆ ಸಾಧ್ಯ?

By Web DeskFirst Published Nov 21, 2019, 3:23 PM IST
Highlights

ರಕ್ಷಣಾ ಸಂಸದೀಯ ಸಮಾಲೋಚನಾ ಸಮಿತಿಗೆ ಪ್ರಜ್ಞಾ ಸಿಂಗ್ ಠಾಕೂರ್| ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಮಿತಿ| 21 ಸದಸ್ಯರ ಸಂಸದೀಯ ಸಮಾಲೋಚನಾ ಸಮಿತಿ|ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಾಧ್ವಿ| ಸಾಧ್ವಿ ಪ್ರಜ್ಞಾ ಸಿಂಗ್ ನೇಮಕಕ್ಕೆ ವಿಪಕ್ಷಗಳ ಅಸಮಾಧಾನ|

ನವದೆಹಲಿ(ನ.21): ಮಹತ್ವದ ಬೆಳವಣಿಗೆಯೊಂದರಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ಸಮಾಲೋಚನಾ ಸಮಿತಿಗೆ, ಮಾಲೆಗಾಂವ್ ಸ್ಫೋಟದ ಆರೋಪಿ ಹಾಗೂ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಅವರನ್ನು ನೇಮಕ ಮಾಡಲಾಗಿದೆ. 

ಪ್ರಧಾನಿ ಮೋದಿ ಯೋಜನೆಯ ಅಣಕ : ಬಿಜೆಪಿ ಸಂಸದೆ ಸಾಧ್ವಿಗೆ ನೋಟಿಸ್

ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವವಹಿಸಿರುವ 21 ಸದಸ್ಯರ ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಯಲ್ಲಿ  ಪ್ರಜ್ಞಾ ಠಾಕೂರ್ ಕೂಡ ಸ್ಥಾನ ಪಡೆದಿರುವುದು ವಿವಾದಕ್ಕೆ ಕಾರಣವಾಗಿದೆ.

Pragya Thakur, a terror accused & Godse fanatic has been nominated by the BJP govt. to be a member of the Parliamentary Panel on Defence. This move is an insult to our nation's defence forces, to our nation's esteemed parliamentarians & to every Indian. https://t.co/OqX4wGA4Dk

— Congress (@INCIndia)

ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿದ್ದ ಪ್ರಜ್ಞಾ ಠಾಕೂರ್,  ರಕ್ಷಣೆಗೆ ಸಂಬಂಧಿಸಿದ ಸಮಿತಿಗೆ ನೇಮಕವಾಗಿರುವುದು ವಿಪಕ್ಷಗಳ ಕೆಂಗೆಣ್ಣಿಗೆ ಗುರಿಯಾಗಿದೆ.

ಗಾಂಧಿ ಹಂತಕ ನಾಥುರಾಮ್ ಗೋಡ್ಸೆ ದೇಶಭಕ್ತ: ಸಾಧ್ವಿ!

2019ರ ಲೋಕಸಭಾ ಚುನಾವಣೆಯಲ್ಲಿ ಭೋಪಾಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪ್ರಜ್ಞಾ, ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರನ್ನು ಸೋಲಿಸಿದ್ದರು. 

ನನ್ನ ಶಾಪ ಮತ್ತು ಅವರ ಕರ್ಮದ ಫಲವಾಗಿ ಹೇಮಂತ್ ಕರ್ಕರೆ ಸಾವು: ಸಾಧ್ವಿ ಪ್ರಜ್ಞಾ!

click me!