ಕೋವಿಡ್‌ನಿಂದ ಮೃತಪಟ್ಟ ಬಡವರಿಗೆ 1 ಲಕ್ಷ ರು. ಪರಿಹಾರ

By Kannadaprabha NewsFirst Published Sep 3, 2021, 7:23 AM IST
Highlights
  •  ಕೋವಿಡ್‌ 19ನಿಂದಾಗಿ ಸಾವಿಗೀಡಾದ ಬಡ ಕುಟುಂಬದವರ ರಕ್ತ ಸಂಬಂಧಿಗಳಿಗೆ 1 ಲಕ್ಷ ರು
  • ಈ ಪರಿಹಾರ ಧನ ಪಡೆಯುವವರು ಸರ್ಕಾರಿ ಉದ್ಯೋಗಿಗಳಾಗಿರಬಾರದು ಹಾಗೂ ಸರ್ಕಾರ ನೀಡುವ ಯಾವುದೇ ವಿಶ್ರಾಂತಿ ವೇತನ ಪಡೆಯುತ್ತಿರಬಾರದು 

ಗುವಾಹಟಿ (ಸೆ.03): ಕೋವಿಡ್‌ 19ನಿಂದಾಗಿ ಸಾವಿಗೀಡಾದ ಬಡ ಕುಟುಂಬದವರ ರಕ್ತ ಸಂಬಂಧಿಗಳಿಗೆ 1 ಲಕ್ಷ ರು. ನೀಡಲು ಅಸ್ಸಾಂ ಸರ್ಕಾರ ಬುಧವಾರ ನಿರ್ಧರಿಸಿದೆ. 

ಈ ಪರಿಹಾರ ಧನ ಪಡೆಯುವವರು ಸರ್ಕಾರಿ ಉದ್ಯೋಗಿಗಳಾಗಿರಬಾರದು ಹಾಗೂ ಸರ್ಕಾರ ನೀಡುವ ಯಾವುದೇ ವಿಶ್ರಾಂತಿ ವೇತನ ಪಡೆಯುತ್ತಿರಬಾರದು ಎಂಬ ಷರತ್ತು ವಿಧಿಸಲಾಗಿದೆ.

ಕೊರೋನಾ ಏರಿಕೆ; ಕೇಂದ್ರದಿಂದ ಕೇರಳಕ್ಕೆ ಖಡಕ್ ಎಚ್ಚರಿಕೆ!

‘ ಪ್ರಾರ್ಥನಾ ಯೋಜನೆಯಡಿಯಲ್ಲಿ 6 ಸಾವಿರ ಫಲಾನಿಭವಿಗಳನ್ನು ಗುರುತಿಸಲಾಗಿದೆ. ಇವರೆಲ್ಲರಿಗೂ ಗಾಂಧಿ ಜಯಂತಿ ದಿನದಂದು 1 ಲಕ್ಷ ರು. ಪರಿಹಾರಧನ ವಿತರಿಸಲಾಗುತ್ತದೆ. ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ, ಗಂಡನನ್ನು ಕಳೆದುಕೊಂಂಡ ಮಹಿಳೆಯರಿಗೆ ಪರಿಹಾರ ನೀಡಲು ಈಗಾಗಲೆ ಸರ್ಕಾರ 2 ಯೋಜನೆಗಳನ್ನು ಜಾರಿಗೊಳಿಸಿದೆ. 

ಪೋಷಕರನ್ನು ಕಳೆದುಕೊಂಡಿರುವ ಮಕ್ಕಳ ಹೆಸರಿನಲ್ಲಿ 7 ಲಕ್ಷ ರು.ಗಳ ನಿಶ್ಚಿತ ಠೇವಣಿ ಇಡಲಾಗುತ್ತದೆ ಎಂದು ಸಚಿವ ಪಿಯೂಶ್‌ ಹಜಾರಿಕ ಹೇಳಿದ್ದಾರೆ.

click me!