ಕೋವಿಡ್‌ನಿಂದ ಮೃತಪಟ್ಟ ಬಡವರಿಗೆ 1 ಲಕ್ಷ ರು. ಪರಿಹಾರ

Kannadaprabha News   | Asianet News
Published : Sep 03, 2021, 07:23 AM IST
ಕೋವಿಡ್‌ನಿಂದ ಮೃತಪಟ್ಟ ಬಡವರಿಗೆ 1 ಲಕ್ಷ ರು. ಪರಿಹಾರ

ಸಾರಾಂಶ

 ಕೋವಿಡ್‌ 19ನಿಂದಾಗಿ ಸಾವಿಗೀಡಾದ ಬಡ ಕುಟುಂಬದವರ ರಕ್ತ ಸಂಬಂಧಿಗಳಿಗೆ 1 ಲಕ್ಷ ರು ಈ ಪರಿಹಾರ ಧನ ಪಡೆಯುವವರು ಸರ್ಕಾರಿ ಉದ್ಯೋಗಿಗಳಾಗಿರಬಾರದು ಹಾಗೂ ಸರ್ಕಾರ ನೀಡುವ ಯಾವುದೇ ವಿಶ್ರಾಂತಿ ವೇತನ ಪಡೆಯುತ್ತಿರಬಾರದು 

ಗುವಾಹಟಿ (ಸೆ.03): ಕೋವಿಡ್‌ 19ನಿಂದಾಗಿ ಸಾವಿಗೀಡಾದ ಬಡ ಕುಟುಂಬದವರ ರಕ್ತ ಸಂಬಂಧಿಗಳಿಗೆ 1 ಲಕ್ಷ ರು. ನೀಡಲು ಅಸ್ಸಾಂ ಸರ್ಕಾರ ಬುಧವಾರ ನಿರ್ಧರಿಸಿದೆ. 

ಈ ಪರಿಹಾರ ಧನ ಪಡೆಯುವವರು ಸರ್ಕಾರಿ ಉದ್ಯೋಗಿಗಳಾಗಿರಬಾರದು ಹಾಗೂ ಸರ್ಕಾರ ನೀಡುವ ಯಾವುದೇ ವಿಶ್ರಾಂತಿ ವೇತನ ಪಡೆಯುತ್ತಿರಬಾರದು ಎಂಬ ಷರತ್ತು ವಿಧಿಸಲಾಗಿದೆ.

ಕೊರೋನಾ ಏರಿಕೆ; ಕೇಂದ್ರದಿಂದ ಕೇರಳಕ್ಕೆ ಖಡಕ್ ಎಚ್ಚರಿಕೆ!

‘ ಪ್ರಾರ್ಥನಾ ಯೋಜನೆಯಡಿಯಲ್ಲಿ 6 ಸಾವಿರ ಫಲಾನಿಭವಿಗಳನ್ನು ಗುರುತಿಸಲಾಗಿದೆ. ಇವರೆಲ್ಲರಿಗೂ ಗಾಂಧಿ ಜಯಂತಿ ದಿನದಂದು 1 ಲಕ್ಷ ರು. ಪರಿಹಾರಧನ ವಿತರಿಸಲಾಗುತ್ತದೆ. ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ, ಗಂಡನನ್ನು ಕಳೆದುಕೊಂಂಡ ಮಹಿಳೆಯರಿಗೆ ಪರಿಹಾರ ನೀಡಲು ಈಗಾಗಲೆ ಸರ್ಕಾರ 2 ಯೋಜನೆಗಳನ್ನು ಜಾರಿಗೊಳಿಸಿದೆ. 

ಪೋಷಕರನ್ನು ಕಳೆದುಕೊಂಡಿರುವ ಮಕ್ಕಳ ಹೆಸರಿನಲ್ಲಿ 7 ಲಕ್ಷ ರು.ಗಳ ನಿಶ್ಚಿತ ಠೇವಣಿ ಇಡಲಾಗುತ್ತದೆ ಎಂದು ಸಚಿವ ಪಿಯೂಶ್‌ ಹಜಾರಿಕ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಹಿರಿಯ ನಾಗರಿಕರು, 45+ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ರೈಲ್ವೆ; ಇಲ್ಲಿದೆ ಸೂಪರ್ ಅಪ್‌ಡೇಟ್
ಮಾಲೀಕನ ನಿಧನಕ್ಕೆ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಶ್ವಾನ; ವಿಡಿಯೋ ನೋಡಿ ಭಾವುಕರಾದ ಜನರು