
ಬೆಂಗಳೂರು(ನ. 18) ಮುಂಬೈನ ಅಮರ್ ಜವಾನ್ ಸೈನಿಕ ಸ್ಮಾರಕಕ್ಕೆ ಅಪಮಾನ ಮಾಡಿದ ಅಪರಾಧಿಗಳ ಬಗ್ಗೆ ಸುಳಿವು ನೀಡಿದರೆ 5 ಲಕ್ಷ ರೂ. ಬಹುಮಾನ ನೀಡುತ್ತೇನೆ ಎಂದು ಸಂಸದ ರಾಜೀವ್ ಚಂದ್ರಶೇಖರ್ ಘೋಷಿಸಿದ್ದಾರೆ.
ಆಗಸ್ಟ್ 11 ರಂದು ಮುಂಬೈನ ಆಜಾದ್ ಮೈದಾನದಲ್ಲಿ ನಡೆದ ಹಿಂಸಾಚಾರದ ವೇಳೆ ಸ್ಮಾರಕಕ್ಕೆ ಹಾನಿ ಮಾಡಲಾಗಿತ್ತು. ಈ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತ ಇದ್ದಾರೆ.
ಕಪ್ಪು ಹಣಕ್ಕೆ ಬ್ರೇಕ್ ಹಾಕಿದ ನೋಟ್ ಬ್ಯಾನ್; ರಾಜೀವ್ ವಿವರಣೆ
ಸ್ಮಾರಕವನ್ನು ಧ್ವಂಸಗೊಳಿಸಿದ ಜನರು ಯಾವುದೇ ನಂಬಿಕೆ ಅಥವಾ ಧರ್ಮಕ್ಕೆ ಸೇರಿದವರಲ್ಲ ಎನ್ನುವುದು ಸ್ಪಷ್ಟವಾಗಿದೆ. ಈ ಕೆಲಸ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಬೇಕಿದೆ ಎಂದು ಚಂದ್ರಶೇಖರ್ ಆಗ್ರಹಿಸಿದ್ದಾರೆ.
1857 ರ ಬ್ರಿಟಿಷ್ ಆಡಳಿತದ ವಿರುದ್ಧದ ಮೊದಲ ಸ್ವಾತಂತ್ರ್ಯ ಸಂಗ್ರಾಮದ ವೇಳೆ ಹುತಾತ್ಮರಾದ ಸಿಪಾಯ್ ಸಯ್ಯದ್ ಹುಸೇನ್ ಮತ್ತು ಸಿಪಾಯ್ ಮಂಗಲ್ ಗಡಿಯಾ ಅವರ ಗೌರವಾರ್ಥ ಸ್ಮಾರಕ ನಿರ್ಮಾಣ ಮಾಡಲಾಗಿದೆ.
ಇಂಥ ಕೆಲಸ ಮಾಡಿರುವ ದುಷ್ಕರ್ಮಿಗಳು ದೇಶದ ಲಕ್ಷಾಂತರ ಜನರ ಭಾವನೆಗೆ ಧಕ್ಕೆ ತಂದಿದ್ದಾರೆ. ಹೊರಗಿನ ದುಷ್ಟ ಶಕ್ತಿಗಳಿಂದ ದೇಶವನ್ನು ಕಾಪಾಡಲು ಮುಂದಾದವರ ಅಪಮಾನ ಮಾಡಿದವರಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ