ಪ್ರತಿಭಟನಾನಿರತ ರಾಜ್ಯಸಭಾ ಸದಸ್ಯರಿಗೆ ಖುದ್ದು ಟೀ ತಂದು ಕೊಟ್ಟ ಉಪಸಭಾಪತಿ!

Published : Sep 22, 2020, 09:37 AM ISTUpdated : Sep 22, 2020, 09:46 AM IST
ಪ್ರತಿಭಟನಾನಿರತ ರಾಜ್ಯಸಭಾ ಸದಸ್ಯರಿಗೆ ಖುದ್ದು ಟೀ ತಂದು ಕೊಟ್ಟ ಉಪಸಭಾಪತಿ!

ಸಾರಾಂಶ

ರಾಜ್ಯಸಭೆಯಲ್ಲಿ ಭಾನುವಾರ ತೀವ್ರ ಕೋಲಾಹಲ| ಕೋಲಾಹಲ ಸೃಷ್ಟಿಸಿದ್ದ ಎಂಟು ಸದಸ್ಯರನ್ನು ಒಂದು ವಾರ ಅಮಾನತ್ತುಗೊಳಿಸಿದ ವೆಂಕಯ್ಯ ನಾಯ್ಡು| ಅಮಾನತ್ತು ವಿರೋಧಿಸಿ ಗಾಂಧೀ ಪ್ರತಿಮೆ ಎದುರು ಸದಸ್ಯರ ಪ್ರತಿಭಟನೆ| ಪ್ರತಿಭಟನಾ ನಿರತ ಸದಸ್ಯರಿಗೆ ಟೀ ತಂದುಕೊಟ್ಟ ಉಪಸಭಾಪತಿ ಹರಿವಂಶ್

ನವದೆಹಲಿ(ಸೆ.22): ಕೊರೋನಾತಂಕ ನಡುವೆಯೂ ಮುಂಜಾಗೃತಾ ಕ್ರಮಗಳೊಂದಿಗೆ ಸಂಸತ್ತು ಅಧಿವೇಶನ ಆರಂಭವಾಗಿದೆ. ಈ ನಡುವೆ ಭಾನುವಾರ ಕೃಷಿ ಮಸೂದೆ ವಿರೋಧಿಸಿ ತೀವ್ರ ಕೋಲಾಹಲದ ಸೃಷ್ಟಿಸಿದ್ದ ಎಂಟು ಸದಸ್ಯರನ್ನು ವೆಂಕಯ್ಯ ನಾಯ್ಡು ಅಮಾನತುಗೊಳಿಸಿದ್ದಾರೆ. ಆದರೀಗ ತಮ್ಮನ್ನು ಅಮಾನತ್ತುಗೊಳಿಸಿರುವ ನಿರ್ಧಾರವನ್ನು ಖಂಡಿಸಿ ಸದಸ್ಯರು ಗಾಂಧೀ ಪ್ರತಿಮೆ ಬಳಿ ಪ್ರತಿಭಟನೆ ಮುಂದುವರೆಸಿದ್ದಾರೆ. ಹೀಗಿರುವಾಗ ಪ್ರತಿಭಟನಾನಿರತರಿಗೆ ರಾಜ್ಯಸಭೆಯ ಉಪಸಭಾಪತಿಯವರು ಖುದ್ದು ಟೀ ತಂದು ನೀಡಿದ ಘಟನೆ ಬೆಳಕಿಗೆ ಬಂದಿದೆ.\

'ಹಾಸಿಗೆ-ದಿಂಬು ಇಟ್ಟುಕೊಂಡು ಸಂಸದರ ಧರಣಿ' ಕರ್ನಾಟಕದಲ್ಲೂ ಆಗಿತ್ತು!

ಹೌದು ಭಾನುವಾರದಂದು ಕೃಷಿ ಉತ್ಪನ್ನ ಮಾರುಕಟ್ಟೆಸಮಿತಿ(ಎಪಿಎಂಸಿ)ಯಿಂದ ಹೊರಗೆ, ದೇಶದ ಯಾವುದೇ ಭಾಗದಲ್ಲಾದರೂ ಉತ್ಪನ್ನ ಮಾರಲು ರೈತರಿಗೆ ಅವಕಾಶ ಕಲ್ಪಿಸುವ ಹಾಗೂ ಸಗಟು ವ್ಯಾಪಾರಿಗಳ ಜತೆ ಗುತ್ತಿಗೆ ಕರಾರು ಮಾಡಿಕೊಳ್ಳಲು ಅನ್ನದಾತರಿಗೆ ಅನುಮತಿ ನೀಡುವ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ 2 ಮಸೂದೆಗಳು ರಾಜ್ಯಸಭೆಯಲ್ಲಿ ತೀವ್ರ ವಿರೋಧದ ನಡುವೆ ಅಂಗೀಕಾರ ಪಡೆದಿವೆ. ಹೀಗಿರುವಾಗ ಹಿರಿಯರು ಹಾಗೂ ವಿಚಾರವಾದಿಗಳ ಸದನವಾಗಿರುವ ಸಂಸತ್ತಿನ ಮೇಲ್ಮನೆಯಲ್ಲಿ ಪ್ರತಿಪಕ್ಷಗಳ ಸದಸ್ಯರು ರಾಜ್ಯಸಭೆ ಉಪಸಭಾಪತಿಯತ್ತ ನಿಯಮಾವಳಿ ಪುಸ್ತಕವನ್ನು ತೂರಿದ್ದರು. 

ಕೃಷಿ ಮಸೂದೆ ಕೋಲಾಹಲ; ವಿಪಕ್ಷ ಸಂಸದರ ವರ್ತನೆಗೆ ರಾಜೀವ್ ಚಂದ್ರಶೇಖರ್ ಆಕ್ರೋಶ

ಇದರ ಬೆನ್ನಲ್ಲೇ ಸೋಮವಾರದಂದು ಉಪ ಸಭಾಪತಿ ಹರಿವಂಶ್ ಎಲ್ಲ ನಿಯಮಗಳನ್ನು,ಸಂಸದೀಯ ಪ್ರಕ್ರಿಯೆಗಳನ್ನು ಉಲ್ಲಂಘಿಸಿದ್ದಾರೆ. ಕೃಷಿ ಮಸೂದೆಯನ್ನು ವಿರೋಧಿಸುತ್ತಿರುವ ವಿವಿಧ ರಾಜಕೀಯ ಪಕ್ಷಗಳ ಸದಸ್ಯರಿಗೆ ಮಾತನಾಡಲು ಅವಕಾಶ ನೀಡಿಲ್ಲ. ಉಪಸಭಾಪತಿಯನ್ನು ಹುದ್ದೆಯಿಂದ ಕೆಳಗಿಳಿಸಬೇಕೆಂದು ಆಗ್ರಹಿಸಿ ವಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿಲುವಳಿಯನ್ನು ರಾಜ್ಯಸಭೆಯ ಸಭಾಪತಿ ವೆಂಕಯ್ಯ ನಾಯ್ಡು ಸೋಮವಾರ ತಿರಸ್ಕರಿಸಿದ್ದರು ಹಾಗೂ ಕೋಲಾಹಲ ಸೃಷ್ಟಿಸಿ ಕಲಾಪಕ್ಕೆ ಅಡ್ಡಿ ಪಡಿಸಿದ ಹಾಗೂ ಉಪ ಸಭಾಪತಿಯನ್ನು ಅನುಚಿತವಾಗಿ ನಡೆಸಿಕೊಂಡ ಆರೋಪದಡಿ ಎಂಟು ಮಂದಿಯನ್ನು ಒಂದು ವಾರ ಅಮಾನತುಗೊಳಿಸಿದ್ದಾರೆ.

ಹೀಗಿರುವಾಗ ವಿಪಕ್ಷ ನಾಯಕರು ಸಂಸತ್ತಿನೆದುರಿನ ಗಾಂಧಿ ಪ್ರತಿಮೆ ಎದುರು ತಮ್ಮ ಪ್ರತಿಭಟನೆ ಮುಂದುವರೆಸಿದ್ದಾರೆ. ರಾತ್ರಿಯನ್ನೂ ಅಲ್ಲೇ ಕಳೆದಿದ್ದಾರೆ. ಹೀಗಿರುವಾಗ ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ಬೆಳ್ಳಂ ಬೆಳಗ್ಗೆ ತಮ್ಮ ಮನೆಯಲ್ಲಿ ತಯಾರಿಸಿದ ಚಹಾವನ್ನು ಪ್ರತಿಭಟನಾನಿರತ ಸದಸ್ಯರಿಗೆ ತಾವೇ ತಂದು ಕೊಟ್ಟಿದ್ದಾರೆ. ಸದನದಲ್ಲಿ ಸದಸ್ಯರು ತಮ್ಮ ವಿರುದ್ಧ ಪ್ರತಿಭಟಿಸಿದ್ದರೂ, ಅದನ್ನೆಲ್ಲಾ ಮರೆತು ಸದಸ್ಯರ ಪರ ಕಾಳಜಿ ತೋರಿರುವ ಹರಿವಂಶ್‌ರವರ ಮಾನವೀಯ ನಡೆಗೆ ಸದ್ಯ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ಭೂರೂಪ ಬದಲಾಯಿಸಿದ ಪ್ರವಾಹ.. ವಿಶ್ವದ ಅತಿದೊಡ್ಡ ನದಿ ಮಜುಲಿ ದ್ವೀಪ ಬಗ್ಗೆ ನಿಮಗೆ ಗೊತ್ತೇ?