
ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರವನ್ನು ಖಂಡಿಸಿದೆ ಮತ್ತು ಸ್ಥಳೀಯ ಆಡಳಿತ, ಪೊಲೀಸರು, ಭದ್ರತಾ ಪಡೆಗಳು ಮತ್ತು ಕೇಂದ್ರೀಯ ಏಜೆನ್ಸಿಗಳು ಸೇರಿದಂತೆ ಸರ್ಕಾರವು ತಕ್ಷಣವೇ ಶಾಂತಿಯ ಮರುಸ್ಥಾಪನೆಗೆ ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮನವಿ ಮಾಡಿದೆ.
ಆರ್ಎಸ್ಎಸ್ (RSS) ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ (Dattatreya Hosabale) ಭಾನುವಾರ ಸಂಜೆ ಈ ಹೇಳಿಕೆ ನೀಡಿ, ‘ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಅಗತ್ಯ ಕ್ರಮಗಳ ಜೊತೆಗೆ ಹಿಂಸೆಯಿಂದ ನಿರಾಶ್ರಿತರಾದವರಿಗೆ ಪರಿಹಾರ ಸಾಮಗ್ರಿಗಳ ತಡೆರಹಿತ ಪೂರೈಕೆ ಆಗುವಂತೆ ಸರ್ಕಾರ ನೋಡಿಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ. ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದ್ವೇಷ ಮತ್ತು ಹಿಂಸೆಗೆ ಸ್ಥಳವಿಲ್ಲ. ಪ್ರಸ್ತುತ ಬಿಕ್ಕಟ್ಟಿಗೆ ಕಾರಣವಾದ ವಿಶ್ವಾಸ ಕೊರತೆಯನ್ನು ಎರಡೂ ಕಡೆಯವರು ನಿವಾರಿಸಬೇಕು ಮತ್ತು ಶಾಂತಿ (Peace) ಮರುಸ್ಥಾಪಿಸಲು ಮಾತುಕತೆ ಪ್ರಾರಂಭಿಸಬೇಕು. ಹಿಂಸೆಯಿಂದ ನಿರಾಶ್ರಿತರಾದ 50 ಸಾವಿರ ಜನರ ನೆರವಿಗೆ ಆರೆಸ್ಸೆಸ್ ನಿಲ್ಲಲಿದೆ ಎಂದು ಒತ್ತಿ ಹೇಳಿದ್ದಾರೆ.
ಮಣಿಪುರ ಹಿಂಸಾಚಾರ: ಕೇಂದ್ರ ಸಚಿವರ ಮನೆಗೆ ಬೆಂಕಿ; 1200 ಜನರ ಗುಂಪಿನಿಂದ ದುಷ್ಕೃತ್ಯ
ಕಳೆದ 45 ದಿನಗಳ ನಿರಂತರ ಹಿಂಸೆ ಅತ್ಯಂತ ಕಳವಳಕಾರಿ. ವಿಷಾದನೀಯ. ಸ್ಥಿತಿ ತಿಳಿಗೊಳಿಸಲು ಮತ್ತು ಜನರ ಜೀವ ಉಳಿಸಲು ಸಾಧ್ಯವಿರುವ ಎಲ್ಲ ಕ್ರಮ ತೆಗೆದುಕೊಳ್ಳಬೇಕು ಎಂದು ಮಣಿಪುರದ ನಾಗರಿಕ ಸಮಾಜ, ರಾಜಕೀಯ ಗುಂಪುಗಳು ಮತ್ತು ಸಾರ್ವಜನಿಕರಿಗೆ ಆರ್ಎಸ್ಎಸ್ ಮನವಿ ಮಾಡುತ್ತದೆ ಎಂದಿದ್ದಾರೆ. ಮಣಿಪುರದಲ್ಲಿ ಒಂದೂವರೆ ತಿಂಗಳ ಹಿಂದೆ ಭುಗಿಲೆದ್ದ ಮೈತೇಯಿ ಮತ್ತು ಕುಕಿ ಸಮುದಾಯದ ಜನರ ನಡುವಿನ ಜನಾಂಗೀಯ ಹಿಂಸೆಯಲ್ಲಿ (Racial violence) 110ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. 11 ಜಿಲ್ಲೆಗಳಲ್ಲಿ ಕರ್ಫ್ಯೂ (curfew) ವಿಧಿಸಲಾಗಿದೆ ಮತ್ತು ಇಂಟರ್ನೆಟ್ ಸೇವೆ (Internet Service)ಸ್ತಬ್ಧಗೊಂಡಿದೆ.
ಕಾಂಗ್ರೆಸ್ ವ್ಯಂಗ್ಯ:
ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್, ಆರೆಸ್ಸೆಸ್ಗೆ ಪ್ರತಿಕ್ರಿಯಿಸಲು 45 ದಿನ ಬೇಕಾಯಿತು. ಇನ್ನು ಪ್ರಧಾನಿ ನರೇಂದ್ರ ಮೋದಿ ಮೌನ ಮುರಿಯಬೇಕು. ಆರೆಸ್ಸೆಸ್ ಮೂಲಕ ಮಾತಾಡಿಸುವುದನ್ನು ನಿಲ್ಲಿಸಬೇಕು ಎಂದಿದ್ದಾರೆ.
ಮಣಿಪುರ ರಾಜಧಾನಿಯಲ್ಲಿ ಮತ್ತೆ ಹಿಂಸೆ: ಮನೆಗಳಿಗೆ ಬೆಂಕಿ: ಪೊಲೀಸರ ಜತೆ ಉದ್ರಿಕ್ತರ ಘರ್ಷಣೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ