ಮಣಿ​ಪು​ರ​ದಲ್ಲಿ ಶಾಂತಿ ಕಾಪಾ​ಡಿ: ಆರೆ​ಸ್ಸೆಸ್‌ ಮನ​ವಿ

Published : Jun 19, 2023, 06:51 AM IST
ಮಣಿ​ಪು​ರ​ದಲ್ಲಿ ಶಾಂತಿ ಕಾಪಾ​ಡಿ: ಆರೆ​ಸ್ಸೆಸ್‌ ಮನ​ವಿ

ಸಾರಾಂಶ

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌​) ಮಣಿಪುರದಲ್ಲಿ ಜನಾಂಗೀ​ಯ ಹಿಂಸಾಚಾರವನ್ನು ಖಂಡಿಸಿದೆ ಸರ್ಕಾರವು ತಕ್ಷ​ಣವೇ ಶಾಂತಿಯ ಮರುಸ್ಥಾಪ​ನೆಗೆ ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮನವಿ ಮಾಡಿದೆ.

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌​) ಮಣಿಪುರದಲ್ಲಿ ಜನಾಂಗೀ​ಯ ಹಿಂಸಾಚಾರವನ್ನು ಖಂಡಿಸಿದೆ ಮತ್ತು ಸ್ಥಳೀಯ ಆಡಳಿತ, ಪೊಲೀ​ಸ​ರು, ಭದ್ರತಾ ಪಡೆಗಳು ಮತ್ತು ಕೇಂದ್ರೀಯ ಏಜೆನ್ಸಿಗಳು ಸೇರಿದಂತೆ ಸರ್ಕಾರವು ತಕ್ಷ​ಣವೇ ಶಾಂತಿಯ ಮರುಸ್ಥಾಪ​ನೆಗೆ ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮನವಿ ಮಾಡಿದೆ.

ಆರ್‌ಎಸ್‌ಎಸ್‌ (RSS) ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ (Dattatreya Hosabale) ಭಾನು​ವಾರ ಸಂಜೆ ಈ ಹೇಳಿಕೆ ನೀಡಿ, ‘ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಅಗತ್ಯ ಕ್ರಮಗಳ ಜೊತೆಗೆ ಹಿಂಸೆಯಿಂದ ನಿರಾಶ್ರಿತರಾದವರಿಗೆ ಪರಿಹಾರ ಸಾಮಗ್ರಿಗಳ ತಡೆರಹಿತ ಪೂರೈಕೆ ಆಗು​ವಂತೆ ಸರ್ಕಾರ ನೋಡಿ​ಕೊ​ಳ್ಳ​ಬೇ​ಕು’ ಎಂದು ಆಗ್ರ​ಹಿ​ಸಿ​ದ್ದಾ​ರೆ. ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದ್ವೇಷ ಮತ್ತು ಹಿಂಸೆಗೆ ಸ್ಥಳವಿಲ್ಲ. ಪ್ರಸ್ತುತ ಬಿಕ್ಕಟ್ಟಿಗೆ ಕಾರಣವಾದ ವಿಶ್ವಾಸ ಕೊರತೆಯನ್ನು ಎರಡೂ ಕಡೆಯವರು ನಿವಾರಿಸಬೇಕು ಮತ್ತು ಶಾಂತಿ (Peace) ಮರುಸ್ಥಾಪಿಸಲು ಮಾತು​ಕ​ತೆ ಪ್ರಾರಂಭಿಸಬೇಕು. ಹಿಂಸೆ​ಯಿಂದ ನಿರಾ​ಶ್ರಿ​ತ​ರಾದ 50 ಸಾವಿರ ಜನರ ನೆರ​ವಿಗೆ ಆರೆ​ಸ್ಸೆಸ್‌ ನಿಲ್ಲ​ಲಿ​ದೆ ಎಂದು ಒತ್ತಿ ಹೇಳಿ​ದ್ದಾ​ರೆ.

ಮಣಿಪುರ ಹಿಂಸಾಚಾರ: ಕೇಂದ್ರ ಸಚಿವರ ಮನೆಗೆ ಬೆಂಕಿ; 1200 ಜನರ ಗುಂಪಿನಿಂದ ದುಷ್ಕೃತ್ಯ

ಕಳೆದ 45 ದಿನಗಳ ನಿರಂತರ ಹಿಂಸೆ ಅತ್ಯಂತ ಕಳ​ವ​ಳ​ಕಾ​ರಿ. ವಿಷಾ​ದ​ನೀ​ಯ. ಸ್ಥಿತಿ ತಿಳಿ​ಗೊ​ಳಿ​ಸಲು ಮತ್ತು ಜನರ ಜೀವ ಉಳಿ​ಸ​ಲು ಸಾಧ್ಯವಿರುವ ಎಲ್ಲ ಕ್ರಮ ತೆಗೆದುಕೊಳ್ಳಬೇಕು ಎಂದು ಮಣಿಪುರದ ನಾಗರಿಕ ಸಮಾಜ, ರಾಜಕೀಯ ಗುಂಪುಗಳು ಮತ್ತು ಸಾರ್ವಜನಿಕರಿಗೆ ಆರ್‌ಎಸ್‌ಎಸ್‌ ಮನವಿ ಮಾಡುತ್ತದೆ ಎಂದಿ​ದ್ದಾ​ರೆ.  ಮಣಿಪುರದಲ್ಲಿ ಒಂದೂವ​ರೆ ತಿಂಗಳ ಹಿಂದೆ ಭುಗಿಲೆದ್ದ ಮೈತೇಯಿ ಮತ್ತು ಕುಕಿ ಸಮುದಾಯದ ಜನರ ನಡುವಿನ ಜನಾಂಗೀಯ ಹಿಂಸೆ​ಯ​ಲ್ಲಿ (Racial violence) 110ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. 11 ಜಿಲ್ಲೆಗಳಲ್ಲಿ ಕರ್ಫ್ಯೂ (curfew) ವಿಧಿಸಲಾ​ಗಿ​ದೆ ಮತ್ತು ಇಂಟರ್ನೆಟ್‌ ಸೇವೆ (Internet Service)ಸ್ತಬ್ಧ​ಗೊಂಡಿ​ದೆ.

ಕಾಂಗ್ರೆಸ್‌ ವ್ಯಂಗ್ಯ:

ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌, ಆ​ರೆ​ಸ್ಸೆ​ಸ್‌ಗೆ ಪ್ರತಿ​ಕ್ರಿ​ಯಿ​ಸಲು 45 ದಿನ ಬೇಕಾ​ಯಿತು. ಇನ್ನು ಪ್ರಧಾನಿ ನರೇಂದ್ರ ಮೋದಿ ಮೌನ ಮುರಿ​ಯ​ಬೇಕು. ಆರೆಸ್ಸೆಸ್‌ ಮೂಲಕ ಮಾತಾ​ಡಿ​ಸು​ವು​ದನ್ನು ನಿಲ್ಲಿ​ಸ​ಬೇ​ಕು ಎಂದಿ​ದ್ದಾ​ರೆ.

ಮಣಿಪುರ ರಾಜ​ಧಾ​ನಿ​ಯಲ್ಲಿ ಮತ್ತೆ ಹಿಂಸೆ: ಮನೆಗಳಿಗೆ ಬೆಂಕಿ: ಪೊಲೀಸರ ಜತೆ ಉದ್ರಿ​ಕ್ತ​ರ ಘರ್ಷಣೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು
ಮನೆ ಮುಂದೆ ದನ ಸೆಗಣಿ ಹಾಕಿದ್ದಕ್ಕೆ ಯುವಕನ ಕೊಲೆ