ಕಾಶಿ-ಮಥುರಾ ಬೇಡಿಕೆ ಘೋಷಣೆ: ಅಂತರ ಕಾಯ್ದುಕೊಂಡ RSS!

By Web DeskFirst Published Nov 10, 2019, 5:13 PM IST
Highlights

ಅಯೋಧ್ಯೆ ಭೂವಿವಾದದ ಸುಪ್ರೀಂಕೋರ್ಟ್ ತೀರ್ಪು ಹಿನ್ನೆಲೆ/ ವಿವಾದಿತ ಸ್ಥಳದಲ್ಲಿ ಮಂದಿರ ಕಟ್ಟಲು ಘನ ನ್ಯಾಯಲಯ ಅನುಮತಿ/ ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿಸಿದ RSS ಮುಖ್ಯಸ್ಥ ಮೋಹನ್ ಭಾಗವತ್/ ಅಯೋಧ್ಯೆ ತೀರ್ಪು ಪ್ರಕಟವಾಗುತ್ತಿದ್ದಂತೇ ಕಾಶಿ-ಮಥುರಾ ಮಂದಿರಗಳಿಗಾಗಿ ಬೇಡಿಕೆ ಆರಂಭ/ ಕಾಶಿ-ಮಥುರಾ ಮಂದಿರ ಬೇಡಿಕೆಯಿಂದ ಅಂತರ ಕಾಯ್ದುಕೊಂಡ RSS/ ಕಾಶಿ-ಮಥುರಾ ಮಂದಿರ ಬೇಡಿಕೆಗೂ ಸಂಘಕ್ಕೂ ಸಂಬಂಧವಿಲ್ಲ ಎಂದ ಭಾಗವತ್/ 

ನಾಗ್ಪುರ್(ನ.10): ಅಯೋಧ್ಯೆ ಭೂವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ವಿವಾದಿತ ಸ್ಥಳದಲ್ಲಿ ಮಂದಿರ ಕಟ್ಟಲು ಘನ ನ್ಯಾಯಲಯ ಅನುಮತಿ ನೀಡಿದೆ.

ರಾಮನಿಗೆ ದೊರೆತ ಅಯೋಧ್ಯೆ: ಶತಮಾನಗಳ ನಂಬಿಕೆಗೆ ಸುಪ್ರೀಂ ತೀರ್ಪಿನ ನೈವೇದ್ಯೆ!
ಇನ್ನು ಅಯೋಧ್ಯೆ ತೀರ್ಪು ಪ್ರಕಟವಾಗುತ್ತಿದ್ದಂತೇ ಕಾಶಿ-ಮಥುರಾ ಮಂದಿರಗಳಿಗಾಗಿ ಬೇಡಿಕೆ ಆರಂಭವಾಗಿದ್ದು, ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ಈ ಘೋಷಣೆಯಿಂದ ಅಂತರ ಕಾಯ್ದುಕೊಂಡಿದೆ.

ಬಾಬರ್ ಅಯೋಧ್ಯೆ(5 ಎಕರೆ)ಯಲ್ಲೇ ಇರಲಿದ್ದಾನೆ: ಸಹೋದರರ ನಂಬಿಕೆ ಮುಖ್ಯ ಎಂದ ಸುಪ್ರೀಂ!

ಅಯೋಧ್ಯೆ ತೀರ್ಪು ಪ್ರಕಟವಾದ ಬೆನ್ನಲ್ಲೇ, ಕೆಲವು ಬಲಪಂಥೀಯ ಸಂಘಟನೆಗಳು ಕಾಶಿ-ಮಥುರಾ ಮಂದಿರಕ್ಕಾಗಿ ಬೇಡಿಕೆ ಮಂಡಿಸಿದ್ದು, ಇದಕ್ಕೂ ಸಂಘಟನೆಗೂ ಸಂಬಂಧವಿಲ್ಲ ಎಂದು RSS ಮುಖ್ಯಸ್ಥ ಮೋಹನ್ ಭಾಗವತ್ ಸ್ಪಷ್ಟಪಡಿಸಿದ್ದಾರೆ.

श्री रामजन्मभूमि विषय पर सर्वोच्च न्यायालय के निर्णय पर राष्ट्रीय स्वयंसेवक संघ के सरसंघचालक डॉ मोहन जी भागवत की प्रेस वार्ता https://t.co/Jx69L65h2j

— RSS (@RSSorg)

ವಿವಾದ ಇತ್ಯರ್ಥ ಬಯಸಿದ್ದೇವು, ಬಗೆಹರಿದಿದೆ: ಮೋಹನ್ ಭಾಗವತ್!
ಅಯೋಧ್ಯೆ ತೀರ್ಪಿನ ಬಳಿಕ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಮೋಹನ್ ಭಾಗವತ್, ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸುವುದಾಗಿ ಸ್ಪಷ್ಟಪಡಿಸಿದರು.

ರಾಮ ಮಂದಿರ ಸಂಕಲ್ಪದ ಮಹಾಯಜ್ಞ: ವರ್ಷ ಕಳೆದು ಅದೇ ದಿನ ಪ್ರಕಟವಾಯ್ತು ತೀರ್ಪು

ಆದರೆ ಕಾಶಿ-ಮಥುರಾ ಮಂದಿರ ಬೇಡಿಕೆಗೆ ಪ್ರತಿಕ್ರಿಯೆ ನಡೆಸಲು ನಿರಾಕರಿಸಿರುವ ಮೋಹನ್ ಭಾಗವತ್, ಈ ಬೇಡಿಕೆಗೂ ಸಂಘಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.

ಅಯೋಧ್ಯೆ ತೀರ್ಪು: ಜಾಲತಾಣದಲ್ಲೂ ಸೌಹಾರ್ದತೆ!

click me!