ವಕ್ಫ್ ಜೆಪಿಸಿ ಸಭೆಯಲ್ಲಿ ಗದ್ದಲ: 10 ವಿಪಕ್ಷ ಸಂಸದರು ಸಸ್ಪೆಂಡ್‌

Published : Jan 25, 2025, 07:19 AM IST
ವಕ್ಫ್ ಜೆಪಿಸಿ ಸಭೆಯಲ್ಲಿ ಗದ್ದಲ: 10 ವಿಪಕ್ಷ ಸಂಸದರು ಸಸ್ಪೆಂಡ್‌

ಸಾರಾಂಶ

ವಕ್ಫ್ ತಿದ್ದುಪಡಿ ಮಸೂದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಭೆಯಲ್ಲಿ ಶುಕ್ರವಾರ ಕೋಲಾಹಲ ನಡೆದಿದ್ದು, 10 ಪ್ರತಿಪಕ್ಷದ ಸದಸ್ಯರನ್ನು ಶುಕ್ರವಾರ ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಲಾಗಿದೆ. 

ನವದೆಹಲಿ (ಜ.25): ವಕ್ಫ್ ತಿದ್ದುಪಡಿ ಮಸೂದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಭೆಯಲ್ಲಿ ಶುಕ್ರವಾರ ಕೋಲಾಹಲ ನಡೆದಿದ್ದು, 10 ಪ್ರತಿಪಕ್ಷದ ಸದಸ್ಯರನ್ನು ಶುಕ್ರವಾರ ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಲಾಗಿದೆ. ಮಸೂದೆ ಅಧ್ಯಯನಕ್ಕೆ ಕಾಲಾವಕಾಶ ನೀಡುತ್ತಿಲ್ಲ ಎಂದು (ಜೆಪಿಸಿ) ಅಧ್ಯಕ್ಷ ಜಗದಂಬಿಕಾ ಪಾಲ್ ವಿರುದ್ಧ ಪ್ರತಿಪಕ್ಷಗಳು ಪ್ರತಿಭಟನೆಗೆ ಇಳಿದವು. ಆಗ ಬಿಜೆಪಿ ಸದಸ್ಯ ನಿಶಿಕಾಂತ್ ದುಬೆ ಹಾಗೂ ಅಪರಾಜಿತಾ ಸಾರಂಗಿ, ‘ಪಾಲ್ ವಿರುದ್ಧ ಅಸಂಸದೀಯ ಭಾಷೆ ಬಳಸುತ್ತಿದ್ದೀರಿ. 

ಇದು ಅಸಹ್ಯ’ ಎಂದರು. ಆಗ ಪ್ರತಿಪಕ್ಷದ ಸದಸ್ಯರನ್ನು ಅಮಾನತುಗೊಳಿಸುವ ಪ್ರಸ್ತಾವನೆಯನ್ನು ದುಬೆ ಮಂಡಿಸಿದರು. ಕೊನೆಗೆ ಕಲ್ಯಾಣ ಬ್ಯಾನರ್ಜಿ, ಅಸಾದುದ್ದೀನ್‌ ಒವೈಸಿ ಸೇರಿ 10 ವಿಪಕ್ಷ ಸಂಸದರನ್ನು ಪಾಲ್‌ 1 ದಿನದ ಮಟ್ಟಿಗೆ ಸಸ್ಪೆಂಡ್‌ ಮಾಡಿದರು. ಈ ನಡುವೆ ಅಮಾನತು ಅಧಿಕಾರ ಜೆಪಿಸಿ ಅಧ್ಯಕ್ಷರಿಗೆ ಇಲ್ಲ ಎಂದು ಲೋಕಸಭೆ ಸಭಾಧ್ಯಕ್ಷರಿಗೆ ದೂರಲು ವಿಪಕ್ಷ ಸದಸ್ಯರು ನಿರ್ಧರಿಸಿದ್ದಾರೆ.

ಆಗಿದ್ದೇನು?: ಪ್ರತಿಪಕ್ಷ ಸದಸ್ಯರು ಕರಡು ಶಾಸನಕ್ಕೆ ಪ್ರಸ್ತಾಪಿಸಲಾದ ಬದಲಾವಣೆಗಳನ್ನು ಅಧ್ಯಯನ ಮಾಡಲು ಸಾಕಷ್ಟು ಸಮಯವನ್ನು ನೀಡುತ್ತಿಲ್ಲ ಎಂದು ಆರೋಪಿಸಿದರು. ದೆಹಲಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ತ್ವರಿತವಾಗಿ ಅಂಗೀಕರಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಟೀಕಿಸಿದರು. ಈ ಹಿನ್ನೆಲೆಯಲ್ಲಿ ಸಭೆಯಲ್ಲಿ ತೀವ್ರ ವಾಗ್ವಾದಗಳು ನಡೆದು ಕಲಾಪವನ್ನು ಸ್ವಲ್ಪ ಕಾಲ ಮುಂದೂಡಲಾಯಿತು.

ವಕ್ಫ್ ಮಂಡಳಿ ದೇಶಕ್ಕಂಟಿದ ಕ್ಯಾನ್ಸರ್‌ ಇದ್ದಂತೆ, ಅದನ್ನು ದೇಶದಿಂದ ತೊಲಗಿಸಬೇಕು: ಶಾಸಕ ಯತ್ನಾಳ್

ಪುನಃ ಸಭೆ ಸೇರಿದ ಬಳಿಕ ಪ್ರಸ್ತಾವಿತ ತಿದ್ದುಪಡಿಗಳ ಕಲಂ-ವಾರು ಪರಿಶೀಲನೆಗಾಗಿ ಜ.27ರಂದು ನಿಗದಿಯಾಗಿದ್ದ ಸಭೆಯನ್ನು ಜ.30 ಅಥವಾ ಜ.31ಕ್ಕೆ ಮುಂದೂಡಬೇಕು ಎಂದು ಪ್ರತಿಪಕ್ಷ ಸದಸ್ಯರು ಒತ್ತಾಯಿಸಿದರು. ಜೆಪಿಸಿ ಅಧ್ಯಕ್ಷ ಪಾಲ್ ವಿರುದ್ಧ ನಿರಂತರವಾಗಿ ಆರೋಪಗಳನ್ನು ಮಾಡಿದ ಪರಿಣಾಮ ಸಭೆಯಲ್ಲಿ ಬಿರುಸಿನ ವಾತಾವರಣ ಸೃಷ್ಟಿಯಾಯಿತು. ವಕ್ಫ್ (ತಿದ್ದುಪಡಿ) ಮಸೂದೆ, 2024 ಅನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಲೋಕಸಭೆಯಲ್ಲಿ ಮಂಡಿಸಿದ ನಂತರ ಕಳೆದ ವರ್ಷ ಆ. 8ರಂದು ಜೆಪಿಸಿಗೆ ಒಪ್ಪಿಸಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮನೆ ಮುಂದೆ ದನ ಸೆಗಣಿ ಹಾಕಿದ್ದಕ್ಕೆ ಯುವಕನ ಕೊಲೆ
ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು