
ಚೆನ್ನೈ(ಸೆ. 28) ಅಪಾರ ಸಂಗೀತ ಖಜಾನೆಯನ್ನು ಬಿಟ್ಟು ಅಗಲಿದ ಚೇತನ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆಸ್ಪತ್ರೆ ಖರ್ಚು ವೆಚ್ಚದ ಬಗ್ಗೆಯೂ ಸೋಶಿಯಲ್ ಮೀಡಿಯಾದಲ್ಲಿ ಜೋರಾದ ಚರ್ಚೆ ಯಾಗಿತ್ತು.
ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಮಣ್ಯಂ ಅವರ ಸಾವಿನ ನಂತರ ಬಾಕಿ ಉಳಿದಿದ್ದ ಆಸ್ಪತ್ರೆಯ ಚಿಕಿತ್ಸಾ ವೆಚ್ಚವನ್ನು ಭರಿಸಲು ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಮುಂದಾಗಿದ್ದರು ಎಂಬ ವದಂತಿಗಳು ಹಬ್ಬಿದ್ದವು. ಇದೆಲ್ಲದಕ್ಕೆಎಸ್ ಪಿಬಿ ಪುತ್ರ ಎಸ್ಪಿ ಚರಣ್ ಸ್ಪಷ್ಟನೆ ನೀಡಿದ್ದು ದಾಖಲೆ ಸಮೇತ ಎಲ್ಲ ವಿವರ ನೀಡಿದ್ದಾರೆ.
ಹಿರಿಯ ಗಾಯಕನಿಗೆ ಭಾರತ ರತ್ನ ಗೌರವ ಸಿಗಲಿ; ಸಿಎಂ ಪತ್ರ
ವದಂತಿಗಳ ನಂತರ ಎಂಜಿಎಂ ಆಸ್ಪತ್ರೆಯ ವೈದ್ಯರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಚರಣ್ ಅವರು, ನನ್ನ ತಂದೆಯ ಮರಣದ ನಂತರ, ಇನ್ನು ಎಷ್ಟು ಹಣ ಪಾವತಿಸಬೇಕು ಎಂದು ಆಸ್ಪತ್ರೆಯ ಸಿಬ್ಬಂದಿಯನ್ನು ಕೇಳಿದ್ದೆ. ಆದರೆ ಆಸ್ಪತ್ರೆಯ ಅಧಿಕಾರಿಗಳು ಯಾವುದೇ ಬಾಕಿ ಬಿಲ್ ಸ್ವೀಕರಿಸುವುದಿಲ್ಲ ಎಂದು ಹೇಳಿದರು.
"
ಎಂಜಿಎಂ ಹೆಲ್ತ್ಕೇರ್ ಆಸ್ಪತ್ರೆ ಗಾಯಕನ ಚಿಕಿತ್ಸೆಗಾಗಿ 3 ಕೋಟಿ ರೂ.ಗಳಿಗಿಂತ ಹೆಚ್ಚಿನ ಬಿಲ್ ಮಾಡಿದೆ. 1.85 ಕೋಟಿ ರೂ. ಬಾಕಿ ಇದೆ ಎಂಬ ಸುದ್ದಿ ಹರಿದಾಡಿತ್ತು.
ನನಗೆ ಗೊತ್ತಾಗುತ್ತಿಲ್ಲ. ಜನರು ಯಾಕೆ ಈ ರೀತಿ ಎಲ್ಲ ಮಾತನಾಡುತ್ತಾರೆ? ಎಂದು ಪ್ರಶ್ನೆ ಮಾಡಿರುವ ಚರಣ್ ಇದು ನಿಜಕ್ಕೂ ವಿಷಾದದ ಸಂಗತಿ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ