ಶಬರಿಮಲೆ ಚಿನ್ನಕ್ಕೆ ಕನ್ನ : ಟಿಡಿಬಿ ಮಾಜಿ ಅಧ್ಯಕ್ಷ ಬಂಧನ

Kannadaprabha News   | Kannada Prabha
Published : Nov 21, 2025, 04:22 AM IST
sabarimala gold

ಸಾರಾಂಶ

ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲದ ಗರ್ಭಗುಡಿಯ ಬಾಗಿಲು ಮತ್ತು ದ್ವಾರಪಾಲಕ ವಿಗ್ರಹಗಳ ಚಿನ್ನಲೇಪಿತ ಕವಚಗಳಿಗೆ ಕನ್ನ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಮಾಜಿ ಅಧ್ಯಕ್ಷ ಎ. ಪದ್ಮಕುಮಾರ್‌ ಅವರನ್ನು ವಿಶೇಷ ತನಿಖಾ ತಂಡದ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲದ ಗರ್ಭಗುಡಿಯ ಬಾಗಿಲು ಮತ್ತು ದ್ವಾರಪಾಲಕ ವಿಗ್ರಹಗಳ ಚಿನ್ನಲೇಪಿತ ಕವಚಗಳಿಗೆ ಕನ್ನ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಮಾಜಿ ಅಧ್ಯಕ್ಷ ಎ. ಪದ್ಮಕುಮಾರ್‌ ಅವರನ್ನು ವಿಶೇಷ ತನಿಖಾ ತಂಡದ(ಎಸ್‌ಐಟಿ) ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.

ಸಿಪಿಎಂ ಪಕ್ಷದ ಮಾಜಿ ಶಾಸಕರೂ

ಸಿಪಿಎಂ ಪಕ್ಷದ ಮಾಜಿ ಶಾಸಕರೂ ಆಗಿರುವ ಇವರು, 2019ರಲ್ಲಿ ಕವಚಗಳನ್ನು ಮರುಲೇಪನಕ್ಕಾಗಿ ಬೆಂಗಳೂರಿನ ಉನ್ನಿಕೃಷ್ಣನ್‌ ಪೊಟ್ಟಿಗೆ ಹಸ್ತಾಂತರಿಸುವಾಗ ಟಿಡಿಬಿಯ ಅಧ್ಯಕ್ಷರಾಗಿದ್ದರು. ಮರುಲೇಪನದ ಬಳಿಕ ಪೊಟ್ಟಿ ಕವಚಗಳನ್ನು ಹಿಂದಿರುಗಿಸುವಾಗ ಸುಮಾರು 4 ಕೆ.ಜಿ. ಚಿನ್ನ ಕಡಿಮೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪದ್ಮಕುಮಾರ್‌ರನ್ನು ಬಂಧಿಸಿ, ಅಪರಾಧ ವಿಭಾಗದ ಕಚೇರಿಯಲ್ಲಿ ವಿಚಾರಣೆ ನಡೆಸಲಾಗಿದೆ. ಅವರನ್ನು ಕೊಲ್ಲಂನ ವಿಚಕ್ಷಣಾ ನ್ಯಾಯಾಲಯದೆದುರು ಹಾಜರುಪಡಿಸಲಾಗುವುದು ಎನ್ನಲಾಗಿದೆ.

ಶಬರಿಮಲೆ ನಿತ್ಯ ಸ್ಪಾಟ್‌ ಬುಕ್ಕಿಂಗ್‌ ಮಿತಿ 5000ಕ್ಕೆ ಇಳಿಸಿ ಟಿಡಿಬಿ ಆದೇಶ

ಪಟ್ಟಣಂತಿಟ್ಟ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿನ ಜನದಟ್ಟಣೆ ನಿರ್ವಹಿಸುವ ನಿಟ್ಟಿನಲ್ಲಿ, ಸ್ಪಾಟ್‌ ಬುಕ್ಕಿಂಗ್‌ (ಸ್ಥಳಕ್ಕೆ ಆಗಮಿಸಿದ ಬಳಿಕ ದೇವರ ದರ್ಶನಕ್ಕೆ ಪ್ರವೇಶ) ಮಿತಿಯನ್ನು 20000ದಿಂದ 5000ಕ್ಕೆ ಇಳಿಸಲಾಗಿದೆ. ಇದರಿಂದಾಗಿ ಮುಂಗಡ ಬುಕ್ಕಿಂಗ್ ಮಾಡಿದ 70000 ಜನರಿಗೆ ಮತ್ತು ಸ್ಪಾಟ್‌ಬುಕ್ಕಿಂಗ್‌ ಅವಕಾಶ ಪಡೆದ 5000 ಜನರಿಗೆ ಮಾತ್ರ ನಿತ್ಯ ದೇವರ ದರ್ಶನಕ್ಕೆ ಅವಕಾಶ ಸಿಗಲಿದೆ.

ಈ ನಿರ್ಬಂಧ ನ.24ರವರೆಗೂ ಇರಲಿದೆ. ಜೊತೆಗೆ ಸ್ಪಾಟ್ ಬುಕಿಂಗ್‌ ವ್ಯವಸ್ಥೆ ನಿಲಕ್ಕಲ್‌, ವಂದಿಪೆರಿಯಾರ್‌ನ ಕೇಂದ್ರಕ್ಕೆ ಸೀಮಿತಗೊಳಿಸಲಾಗಿದೆ. ಪಂಪಾ, ಎರುಮೆಲಿ, ಚೆಂಗನೂರುನಲ್ಲಿ ಅವಕಾಶ ಸ್ಥಗಿತಗೊಳಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ
ಸೆಂಟ್ರಲ್ ಮೆಟ್ರೋ ಮತ್ತು ಹೈಕೋರ್ಟ್ ನಿಲ್ದಾಣಗಳ ನಡುವೆ ನೀಲಿ ಮಾರ್ಗದ ಸುರಂಗದಲ್ಲಿ ಹಠಾತ್ ನಿಂತ ಮೆಟ್ರೋ ರೈಲು