
ಶಬರಿಮಲೆ (ಅ.30): ಕೊರೋನಾ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ವಾರದ ದಿನಗಳಲ್ಲಿ 1000 ಹಾಗೂ ಶನಿವಾರ, ಭಾನುವಾರಗಳಂದು 2000 ಮಂದಿಗೆ ಮಾತ್ರ ಶಬರಿಮಲೆ ಅಯ್ಯಪ್ಪ ದರ್ಶನ ಅವಕಾಶ ನೀಡಬೇಕು ಎಂದು ಕೇರಳ ಸರ್ಕಾರ ರಚಿಸಿದ್ದ ತಜ್ಞರ ಸಮಿತಿ ಶಿಫಾರಸು ಮಾಡಿದೆ.
ಮಂದಲ- ಮಕರ ಜ್ಯೋತಿ ಯಾತ್ರೆಯ ಸಂದರ್ಭದಲ್ಲಿ ಅಯ್ಯಪ್ಪ ದರ್ಶನಕ್ಕೆ ಬರುವವರಿಗೆ ಕೋವಿಡ್-19 ಇಲ್ಲ ಎಂಬ ವರದಿಯನ್ನು ಕಡ್ಡಾಯಗೊಳಿಸಬೇಕು.
ಶಬರಿಮಲೆ ಪ್ರವೇಶಕ್ಕೆ ಕಂಡೀಶನ್ : ಯಾರಿಗಿಲ್ಲ ಪ್ರವೇಶ
ಅನ್ಯರಾಜ್ಯದಿಂದ ಬರುವವರು ಇಂತಹ ಪ್ರಮಾಣಪತ್ರ ತಂದಿದ್ದರೂ ನೀಲಕ್ಕಲ್ನಲ್ಲಿ ಮತ್ತೊಮ್ಮೆ ಅವರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಬೇಕು. 60 ವರ್ಷ ಮೇಲ್ಪಟ್ಟವರು ತಮಗೆ ಯಾವುದೇ ಕಾಯಿಲೆ ಇಲ್ಲ ಎಂಬ ವರದಿಯನ್ನೂ ತರುವಂತಿರಬೇಕು ಎಂದು ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಸಮಿತಿ ಶಿಫಾರಸು ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ