ರಾಹುಲ್-ಪ್ರಿಯಾಂಕಾ ಭೇಟಿ ಮಾಡಿ ಪೈಲಟ್ ನೀಡಿದ ವಾಗ್ದಾನ!

Published : Aug 10, 2020, 08:18 PM ISTUpdated : Aug 10, 2020, 09:45 PM IST
ರಾಹುಲ್-ಪ್ರಿಯಾಂಕಾ ಭೇಟಿ ಮಾಡಿ ಪೈಲಟ್ ನೀಡಿದ ವಾಗ್ದಾನ!

ಸಾರಾಂಶ

ಕಾಂಗ್ರೆಸ್ ಅಗ್ರ ನಾಯಕರನ್ನು ಭೇಟಿ ಮಾಡಿದ ಸಚಿನ್ ಪೈಲಟ್/  ಕಾಂಗ್ರೆಸ್ ನೊಂದಿಗೆ ಕೆಲಸ ಮಾಡುವ ವಾಗ್ದಾನ/ ರಾಜಸ್ಥಾನ ಸರ್ಕಾರಕ್ಕೆ  ಬೆಂಬಲವಾಗಿ ನಿಲ್ಲಲಿದ್ದಾರೆ

ನವದೆಹಲಿ(ಆ.10)   ಕಾಂಗ್ರೆಸ್ ರೆಬಲ್ ನಾಯಕರಾಗಿ ಗುರುತಿಸಿಕೊಂಡು ರಾಜಸ್ಥಾನ ಸರ್ಕಾರಕ್ಕೆ ಆತಂಕ  ತಂದಿದ್ದ  ಸಚಿನ್ ಪೈಲಟ್  ಸೋಮವಾರ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಗಾಂಧಿ ಭೇಟಿ ಮಾಡಿದ್ದಾರೆ.

ರಾಹುಲ್ ಗಾಂಧಿ ಭೇಟಿ ಮಾಡಿ ಎಲ್ಲ ಬೆಳವಣಿಗೆಗಳ ಮಾಹಿತಿ ನೀಡಿದ್ದಾರೆ.  ತಮ್ಮ ಬೇಡಿಕೆಯನ್ನು ತಿಳಿಸಿದ್ದಾರೆ. ಇದಾದ  ಮೇಲೆ ನಾಯಕರು ಒಂದು ತೀರ್ಮಾನಕ್ಕೆ ಬಂದಿದ್ದು ಸಚಿನ್ ಪೈಲಟ್ ಕಾಂಗ್ರೆಸ್ ಜತೆಯೇ ಕೆಲಸ ಮಾಡುವ ವಾಗ್ದಾನ ಮಾಡಿದ್ದಾರೆ.  ರಾಜಸ್ಥಾನ ಸರ್ಕಾರಕ್ಕೆ ಬೆಂಬಲವಾಗಿ ನಿಲ್ಲಲಿದ್ದಾರೆ. 

ಸಚಿನ್ ಪೈಲಟ್ ಮುಂದಿನ ಹೆಜ್ಜೆ ಏನು?

ಈ ಸಭೆಯ ಬಳಿಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಸಚಿನ್ ಪೈಲಟ್ ಮತ್ತು ಅವರ ಬೆಂಬಲಿಗರು ರಾಜಸ್ಥಾನದಲ್ಲಿ ಎತ್ತಿದ್ದ ಪ್ರಶ್ನೆಗಳ ಬಗ್ಗೆ ಮಾಹಿತಿ ಪಡೆದು ವರದಿ ಸಲ್ಲಿಸಲು ಮೂರು ಜನರ ಸಮಿತಿಯನ್ನು ನೇಮಕ ಮಾಡುವ ತೀರ್ಮಾನ ಮಾಡಿದ್ದಾರೆ ಎಂದು ಕೆಸಿ ವೇಣುಗೋಪಾಲ್ ತಿಳಿಸಿದ್ದಾರೆ.

ಬಂಡಾಯದ ಬಾವುಟ ಹಾರಿಸಿದ್ದ ಕಾರಣಕ್ಕೆ ರಾಜಸ್ಥಾನ ಸರ್ಕಾರದ ಉಪ ಮುಖ್ಯಮಂತ್ರಿಯಾಗಿದ್ದ ಸಚಿನ್ ಪೈಲಟ್ ರನ್ನು ಆ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಅಲ್ಲದೆ ರಾಜಸ್ಥಾನ ಕಾಂಗ್ರೆಸ್ ಘಟಕದ ಅಧ್ಯಕ್ಷ ಸ್ಥಾನದಿಂದಲೂ ತೆಗೆದುಹಾಕಲಾಗಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೋದಿ-ಪುಟಿನ್‌ ಒಪ್ಪಂದ: 40 ದಿನಗಳಲ್ಲ, ಕೇವಲ 24 ದಿನಗಳಲ್ಲೇ ರಷ್ಯಾಗೆ ತಲುಪಲಿದೆ ಭಾರತದ ಸರಕುಗಳು!
ನಾವ್ಯಾರಿಗೂ ಕಮ್ಮಿ ಇಲ್ಲ ಬ್ರೋ... ಆಹಾ ಭಾರತೀಯ ನಾರಿ ಕುಡಿದು ರಾಪಿಡೋ ಏರಿ ಬಿದ್ದಳು ಕೆಳಗೆ ಜಾರಿ: ವೀಡಿಯೋ