
ಲಕ್ನೋ(ಡಿ. 28) ಉತ್ತರ ಪ್ರದೇಶದ ಶಾಲಾ ಪಠ್ಯದಲ್ಲಿ ಸಿಖ್ ಗುರುಗಳ ಚರಿತ್ರೆಯನ್ನು ಸೇರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಣೆ ಮಾಡಿದ್ದಾರೆ.
ಸಾಹಿಬ್ಜಾದಾ ದಿವಾಸ್ ಪ್ರಯುಕ್ತ ತಮ್ಮ ನಿವಾಸದಲ್ಲಿ ನಡೆದ ಗುರ್ಬಾನಿ ಕೀರ್ತನ್ದಲ್ಲಿ ಮಾತನಾಡಿದ ಆದಿತ್ಯನಾಥ್, ಸಿಖ್ ಗುರು ಗೋಬಿಂದ್ ಸಿಂಗ್ ಅವರ ಜೀವನ ಶಾಲಾ ಪಠ್ಯಕ್ಕೆ ಸೇರಿಸಲಾಗುವುದು ಎಂದು ತಿಳಿಸಿದ್ದಾರೆ.
ಮದರಸಾಗಳನ್ನು ಸರ್ಕಾರಿ ಶಾಲೆಯಾಗಿ ಪರಿವರ್ತಿಸುವ ಬಿಲ್ ಮಂಡನೆ
ಸಿಖ್ ಗುರುಗಳ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸಿಕೊಳ್ಳಬೇಕಾಗುತ್ತದೆ. ಡಿಸೆಂಬರ್ 27 ಅನ್ನು ಪ್ರತಿ ವರ್ಷ ಎಲ್ಲಾ ಶಾಲೆಗಳಲ್ಲಿ ಸಾಹಿಬ್ಜಾದಾ ದಿವಾ ಎಂದು ಆಚರಿಸಲಾಗುತ್ತದೆ. ಇದು ಗೌರವ ಸಲ್ಲಿಸುವ ದಿನವಾಗಿರಲಿದೆ ಎಂದು ತಿಳಿಸಿದ್ದಾರೆ.
ಬಾಬಾ ಅಜಿತ್ ಸಿಂಗ್, ಬಾಬಾ ಜುಹಾರ್ ಸಿಂಗ್, ಬಾಬಾ ಜೋರಾವರ್ ಸಿಂಗ್ ಮತ್ತು ಬಾಬಾ ಪತೇಹ್ ಸಿಂಗ್ ಅವರ ಜೀವನ ಪ್ರತಿಯೊಬ್ಬರು ಅವರಿಯಬೇಕು ಎಂದು ತಿಳಿಸಿದರು.
ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ದಿನೇಶ್ ಶರ್ಮಾ ಮತ್ತು ಸಂಪುಟ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ