ಎಲ್ಲರಿಗಿಂತ ಮೊದಲು ಚುನಾವಣಾ ಅಭ್ಯರ್ಥಿ ಪಟ್ಟಿ ಘೋಷಿಸಿದ ಎಸ್‌ಪಿ, ಅಖಿಲೇಶ್ ಪತ್ನಿ ಡಿಂಪಲ್‌ಗೆ ಸ್ಥಾನ!

Published : Jan 30, 2024, 06:42 PM IST
ಎಲ್ಲರಿಗಿಂತ ಮೊದಲು ಚುನಾವಣಾ ಅಭ್ಯರ್ಥಿ ಪಟ್ಟಿ ಘೋಷಿಸಿದ ಎಸ್‌ಪಿ, ಅಖಿಲೇಶ್ ಪತ್ನಿ ಡಿಂಪಲ್‌ಗೆ ಸ್ಥಾನ!

ಸಾರಾಂಶ

2024ರ ಲೋಕಸಭಾ ಚುನಾವಣಗೆ ಎಲ್ಲರಿಗಿಂತ ಮೊದಲು ಅಭ್ಯರ್ಥಿ ಪಟ್ಟಿ ಘೋಷಿಸಿದ ಹೆಗ್ಗಳಿಕೆಗೆ ಸಮಾಜವಾದಿ ಪಾರ್ಟಿ ಪಾತ್ರವಾಗಿದೆ. ಉತ್ತರ ಪ್ರದೇಶದ 16 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಅಖಿಲೇಶ್ ಯಾದವ್ ಪತ್ನಿ ಮೈನ್‌ಪುರಿಯಿಂದ ಸ್ಪರ್ಧಿಸುತ್ತಿದ್ದಾರೆ.

ಲಖನೌ(ಜ.30) ಲೋಕಸಭಾ ಚುನಾವಣೆ ತಯಾರಿಗಳು ಭರ್ಜರಿಯಾಗಿ ನಡೆಯುತ್ತಿದೆ. ಇದರ ನಡುವೆ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಾರ್ಟಿ ಎಲ್ಲರಿಗಿಂತ ಮೊದಲು ಅಭ್ಯರ್ಥಿಗಳ ಪಟ್ಟಿ ಘೋಷಿಸಿದೆ. ಉತ್ತರ ಪ್ರದೇಶದ 16 ಸ್ಥಾನಗಳಿಗೆ ಸಮಾಜವಾದಿ ಪಾರ್ಟಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಅಖಿಲೇಶ್ ಯಾದವ್ ಪತ್ನಿ ಮೈನ್‌ಪುರಿಯಿಂದ ಸ್ಪರ್ಧಿಸುತ್ತಿದ್ದಾರೆ. 2022ರಿಂದ ಮೈನ್‌ಪುರಿ ಕ್ಷೇತ್ರದ ಸಂಸದರಾಗಿರುವ ಡಿಂಪಲ್ ಯಾದವ್, ಇದೀಗ ಮತ್ತೆ ಅದೇ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ಬದೌನ್ ಕ್ಷೇತ್ರದಿಂದ ಧರ್ಮೇಂದ್ರ ಯಾದವ್, ಖೇರಿ ಕ್ಷೇತ್ರದಿಂದ ಉತ್ಕರ್ಷ ವರ್ಮಾ, ಫಿರೋಜಾಬಾದ್ ಕ್ಷೇತ್ರದಿಂದ ಅಕಾಶ್ ಯಾದವ್, ದೌರಾಹ್ರ ಕ್ಷೇತ್ರದಿಂದ ಆನಂದ್ ಬದೋರಿಯಾ, ಉನ್ನಾವೋ ಕ್ಷೇತ್ರದಿಂದ ಅನ್ನು ಟಂಡನ್, ಫೈಜಾಬಾದ್ ಕ್ಷೇತ್ರದಿಂದ ಅವಧೇಶ್ ಪ್ರಸಾದ್, ಗೋರಖಪುರ ಕ್ಷೇತ್ರದಿಂದ ಕಾಜಲ್ ನಿಶಾದ್, ಬಸ್ತಿ ಕ್ಷೇತ್ರದಿಂದ ರಾಮಪ್ರಸಾದ್ ಚೌಧರಿ, ಬಾಂಡಾ ಕ್ಷೇತ್ರದಿಂದ ಶಿವಶಂಕರ್ ಸಿಂಗ್ ಪಟೇಲ್, ಅಂಬೇಡ್ಕರ್ ನಗರ ಕ್ಷೇತ್ರದಿಂದ ಲಾಲ್ಜಿ ವರ್ಮಾ, ಲಖನೌನಿಂದ ರವಿದಾಸ್ ಮೆಹರೋತ್ರ, ಫಾರುಖಾಬಾದ್ ಕ್ಷೇತ್ರದಿಂದ ಡಾ. ನವಲ್ ಕಿಶೋರ್ ಶಕ್ಯಾ, ಅಕ್ಬರಪುರ ಕ್ಷೇತ್ರದಿಂದ ರಾಜಾ ರಾಮ್ ಪಾಲ್ ಸ್ಪರ್ಧಿಸುತ್ತಿದ್ದಾರೆ.

ತುಮಕೂರಿನಿಂದ ಸ್ಪರ್ಧೆ ಮಾಡ್ತಾರಾ ಮುದ್ದಹನುಮೇಗೌಡ ? ಕಾಂಗ್ರೆಸ್‌ಗೆ ಜಂಪ್ ಮಾಡುವುದು ಬಹುತೇಕ ಪಕ್ಕಾ ?

ಒಟ್ಟು 16 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿ ಘೋಷಣೆ ಮಾಡಲಾಗಿದೆ. ಇಂಡಿಯಾ ಮೈತ್ರಿ ಕೂಟದ ಪ್ರಮುಖ ಪಕ್ಷವಾಗಿರುವ ಸಮಾವದವಾದಿ ಪಾರ್ಟಿ ಇತ್ತೀಚೆಗಷ್ಟೇ ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಮಾತುಕತೆ ನಡೆಸಿತ್ತು. ಇದರ ಬೆನ್ನಲ್ಲೇ 16 ಸ್ಥಾನಗಳಿಗೆ ಸಮಾಜವಾದಿ ಪಾರ್ಟಿ ಅಭ್ಯರ್ಥಿಗಳನ್ನು ಘೋಷಿಸಿದೆ. ಎರಡನೇ ಹಂತದ ಅಭ್ಯರ್ಥಿಗಳ ಘೋಷಣೆ ಕುರಿತ ಮಾಹಿತಿ ಲಭ್ಯವಾಗಿಲ್ಲ. ಆದರೆ ಸಮಾಜವಾದಿ ಪಾರ್ಟಿ ನಡೆ ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. 

 

 

ಕೆಲ ಕ್ಷೇತ್ರಗಳನ್ನು ಕಾಂಗ್ರೆಸ್ ತನಗೆ ಬಿಟ್ಟುಕೊಡುವಂತೆ ಕೇಳಿಕೊಂಡಿತ್ತು. ಆದರೆ ಸಮಾಜವಾದಿ ಪಾರ್ಟಿ ಒಪ್ಪಿಲ್ಲ. ಈ ಪೈಕಿ ಫಾರುಖಾಬಾದ್ ಕ್ಷೇತ್ರದಿಂದ ಸಮಾಜವಾದಿ ಪಾರ್ಟಿ ನವಲ್ ಕಿಶೋರ್ ಶಕ್ಯಾಗೆ ಟಿಕೆಟ್ ನೀಡಿದೆ. ಆದರೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಈ ಕ್ಷೇತ್ರವನ್ನು ಬಿಟ್ಟುಕೊಡುವಂತೆ ಕೇಳಿಕೊಂಡಿತ್ತು. ಆದರೆ ಕಾಂಗ್ರೆಸ್ ಮನವಿ ನಡುವೆಯೂ ಫಾರುಖಾಬಾದ್‌ಗೆ ಅಭ್ಯರ್ಥಿ ಘೋಷಿಸುವ ಮೂಲಕ ಇಂಡಿಯಾ ಮೈತ್ರಿಯಲ್ಲಿ ಮತ್ತೊಂದು ಅಸಮಾಧಾನಕ್ಕೆ ಕಾರಣವಾಗಿದ್ದಾರೆ.

ಬಿಹಾರ ಬಳಿಕ ಪಂಜಾಬ್‌ನಲ್ಲಿ ಬಿರುಗಾಳಿ, ಮತ್ತೆ ಬಿಜೆಪಿ ಸೇರಿಕೊಳ್ತಾರ ನವಜೋತ್ ಸಿಂಗ್ ಸಿಧು?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿವೋರ್ಸ್‌ ಪಡೆದ ಮಗಳ ಅದ್ದೂರಿ ಸ್ವಾಗತದ ಹಿಂದೆ ಕರಾಳ ಮುಖ: ನಿವೃತ್ತ ಜಡ್ಜ್ ಪುತ್ರಿಯ ವಿಚ್ಛೇದನ ಪ್ರಕರಣಕ್ಕೆ ಟ್ವಿಸ್ಟ್ ನೀಡಿದ ಮಾವ
India news live: ಕನ್ನಡದಲ್ಲಿಯೇ ಮಾತನಾಡಿದ ನಟ ವಿಜಯ ದೇವರಕೊಂಡ - ಕೊಡವರ ಮನಗೆದ್ದ Rashmika Mandanna ಪತಿ