ರಾಹುಲ್ ಗಾಂಧಿ ದೇಶದ್ರೋಹಿ ಎಂದ ಬಿಜೆಪಿ ನಾಯಕ ಸಂಬಿತ್ ಪಾತ್ರಾ

Published : Dec 05, 2024, 02:57 PM ISTUpdated : Dec 05, 2024, 02:58 PM IST
ರಾಹುಲ್ ಗಾಂಧಿ ದೇಶದ್ರೋಹಿ ಎಂದ ಬಿಜೆಪಿ ನಾಯಕ ಸಂಬಿತ್ ಪಾತ್ರಾ

ಸಾರಾಂಶ

ಲೋಕಸಭೆಯಲ್ಲಿ ಕಾಂಗ್ರೆಸ್ ಅದಾನಿ ವಿಷಯವನ್ನು ಪ್ರತಿಪಾದಿಸುತ್ತಿರುವಾಗ, ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಾರತದ ಷೇರು ಮಾರುಕಟ್ಟೆಯನ್ನು ಟಾರ್ಗೆಟ್ ಮಾಡಲಾಗುತ್ತಿದೆ ಮತ್ತು ರಾಹುಲ್ ಗಾಂಧಿ ದೇಶದ್ರೋಹಿ ಎಂದು ಆರೋಪಿಸಿದ್ದಾರೆ.

ನವದೆಹಲಿ:  ಲೋಕಸಭಾ ಕಲಾಪದಲ್ಲಿ ಕಾಂಗ್ರೆಸ್ ಪಕ್ಷ ಅದಾನಿ ವಿಷಯವನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರಯತ್ನಿಸುತ್ತಿದೆ. ಈ ನಡುವೆ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ, ನೇರವಾಗಿ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಗುರಿಯಾಗಿಸಿ ವಾಗ್ದಾಳಿ ನಡೆಸಿದ್ದಾರೆ.  ನೀವೆಲ್ಲರೂ ಸಂಸತ್‌ನಲ್ಲಿ ಏನಾಗ್ತಿದೆ ಎಂದು ನೋಡುತ್ತಿದ್ದೀರಿ. ದೇಶದ ಆರ್ಥಿಕ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಪ್ರಯತ್ನಗಳು ನಡೆಯತ್ತಿವೆ. ಭಾರತದ ಷೇರು ಮಾರುಕಟ್ಟೆಯನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಸಂಬಿತ್ ಪಾತ್ರಾ ಅರೋಪಿಸಿದರು.  

ಕೆಲವು ಶಕ್ತಿಗಳು ಭಾರತದ ಷೇರು ಮಾರುಕಟ್ಟೆ ಮತ್ತು ದೇಶದ ಉದ್ಯೋಗಪತಿಗಳನ್ನು ಟಾರ್ಗೆಟ್ ಮಾಡುವ  ಕೆಲಸ ಮಾಡುತ್ತಿವೆ. ಈ ಮೂಲಕ ಭಾರತವನ್ನು ಒಡೆಯುವ ಪ್ರಯತ್ನದಲ್ಲಿದ್ದಾರೆ ಎಂದು ಸಂಬಿತ್ ಪಾತ್ರಾ ಗಂಭೀರ ಆರೋಪ ಮಾಡಿದರು. ಸಂಸತ್‌ನ ಸದಸ್ಯರು ಮತ್ತು ವಿಪಕ್ಷ ನಾಯಕ ರಾಹುಲ್ ಗಾಂಧಿ ಓರ್ವ ದೇಶದ್ರೋಹಿ ಎಂದು ಕಿಡಿಕಾರಿದರು. 

ಜಾರ್ಜ್ ಸೊರೊಸ್ ಓಪನ್ ಸೊಸೈಟಿಗೆ ಫಂಡಿಂಗ್  ಮಾಡುತ್ತಾರೆ. ನಂತರ ದೇಶದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಇದು ದೇಶದ ಏಕತೆ ಮತ್ತು ಸಾರ್ವಭೌಮತ್ವಕ್ಕೆ ಧಕ್ಕೆಯನ್ನುಂಟು ಮಾಡುತ್ತಿದ್ದಾರೆ ಎಂದ ಸಂಬಿತ್ ಪಾತ್ರಾ, ಕೆಲ ದೇಶವಿರೋಧಿ ಶಕ್ತಿಗಳು ಭಾರತವನ್ನು ಒಡೆಯಲು ಬಯಸುತ್ತಿವೆ. ಫ್ರೆಂಚ್ ಪತ್ರಿಕೆ ಮಾಧ್ಯಮವು ಈ ಬಗ್ಗೆ ಕೆಲವು ಬಹಿರಂಗಪಡಿಸಿದೆ. ರಾಹುಲ್ ಗಾಂಧಿ ಕೂಡ ಜಾರ್ಜ್ ಸೊರೊಸ್ ಅವರನ್ನು ಭೇಟಿ ಮಾಡಿದ್ದಾರೆ. ಇಬ್ಬರ ನಡುವೆ ಸಂಬಂಧವಿದ್ದು, ರಾಹುಲ್ ಗಾಂಧಿ ಒರ್ವ ದೇಶದ್ರೋಹಿ ಎಂದು ಹೇಳಲು ಯಾವುದೇ ಆಳಕಿಲ್ಲ ಎಂದು ಗುಡುಗಿದರು.

ಇದನ್ನೂ ಓದಿ: WATCH | 500 ವರ್ಷಗಳ ಹಿಂದೆ ಬಾಬರ್ ಏನು ಮಾಡಿದ್ನೋ, ಅದೇ ಈಗ ಬಾಂಗ್ಲಾದೇಶ, ಸಂಭಾಲ್‌ನಲ್ಲಿ ನಡ್ತೀದೆ: ಸಿಎಂ ಯೋಗಿ ಕೆಂಡ!

ಇದಕ್ಕೂ ಮುನ್ನ ವಿರೋಧ ಪಕ್ಷದ ನಾಯಕರು, ಸಂಸತ್ ಆವರಣದಲ್ಲಿ ಉದ್ಯಮಿ ಗೌತಮ್ ಅದಾನಿ ವಿಷಯವನ್ನು ಮುಂದಿಟ್ಟುಕೊಂಡು ಕೇಂದ್ರ ವಿರುದ್ಧ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ "ಮೋದಿ ಮತ್ತು ಅದಾನಿ ಇಬ್ಬರು ಒಂದೇ" ಎಂದು ಘೋಷಣೆ ಕೂಗಿದರು. ವಿರೋಧ ಪಕ್ಷಗಳು ಗೌತಮ್ ಅದಾನಿ  ವಿರುದ್ಧ  ತನಿಖೆ ನಡೆಸಬೇಕೆಂದು ಸಂಸತ್‌ ನಲ್ಲಿ ಆಗ್ರಹಿಸಿವೆ.

ಇದನ್ನೂ ಓದಿ: ಸಂಭಲ್ ಮಸೀದಿ ಸಮೀಕ್ಷೆ ವೇಳೆ ಹಿಂಸೆಗೆ ಪಾಕ್ ನಂಟು: ರಾಹುಲ್ ಭೇಟಿಗೆ ಪೊಲೀಸರ ತಡೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!