ವಾರಾಣಸಿ ದೇಗುಲಗಳಿಂದ ಸಾಯಿ ಬಾಬಾ ಮೂರ್ತಿ ಸ್ಥಳಾಂತರ : ಮಹಾ ಬಿಜೆಪಿ, ಕಾಂಗ್ರೆಸ್‌ ಸಿಡಿಮಿಡಿ

Published : Oct 03, 2024, 05:45 AM ISTUpdated : Oct 03, 2024, 08:23 AM IST
ವಾರಾಣಸಿ ದೇಗುಲಗಳಿಂದ ಸಾಯಿ ಬಾಬಾ ಮೂರ್ತಿ ಸ್ಥಳಾಂತರ : ಮಹಾ ಬಿಜೆಪಿ, ಕಾಂಗ್ರೆಸ್‌ ಸಿಡಿಮಿಡಿ

ಸಾರಾಂಶ

ವಾರಾಣಸಿಯಲ್ಲಿನ ದೇಗುಲಗಳಿಂದ ಶಿರಡಿ ಸಾಯಿಬಾಬಾ ಮೂರ್ತಿ ತೆರವು ಮಾಡಿದ ಬಗ್ಗೆ ಮಹಾರಾಷ್ಟ್ರದ ಬಿಜೆಪಿ ಮತ್ತು ಕಾಂಗ್ರೆಸ್‌ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಮುಂಬೈ (ಅ.3): ವಾರಾಣಸಿಯಲ್ಲಿನ ದೇಗುಲಗಳಿಂದ ಶಿರಡಿ ಸಾಯಿಬಾಬಾ ಮೂರ್ತಿ ತೆರವು ಮಾಡಿದ ಬಗ್ಗೆ ಮಹಾರಾಷ್ಟ್ರದ ಬಿಜೆಪಿ ಮತ್ತು ಕಾಂಗ್ರೆಸ್‌ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ ಬಾವನ್‌ಕುಳೆ, ಸಾಯಿಬಾಬಾ ಪೂಜ್ಯ ವ್ಯಕ್ತಿಯಾಗಿದ್ದು, ಅವರನ್ನು ಅವಮಾನಿಸಲು ಯಾರನ್ನು ಬಿಡಬಾರದು. ಅವರ ಪುತ್ಥಳಿ ತೆರವುಗೊಳಿಸುವ ಪ್ರಕ್ರಿಯೆ ಕೂಡಲೇ ನಿಲ್ಲಬೇಕು ಎಂದು ಆಗ್ರಹಿಸಿದರು.

ಮೂರು ದಿನ ದೇಹ ತೊರೆದ ಸಾಯಿಬಾಬಾ; ನೀರಿನಿಂದ ಬೆಳಗಿದವು ದೀಪಗಳು..!

ಕಾಂಗ್ರೆಸ್‌ ನಾಯಕ ಬಾಳಾಸಾಹೆಬ್‌ ತೊರಾಟ್ ಮಾತನಾಡಿ, ಸಾಯಿ ಬಾಬಾ ಅವರು ಜಾತಿ, ಧರ್ಮ ಮತ್ತು ಜನಾಂಗವನ್ನು ಮೀರಿದವರು. ವಾರಾಣಾಸಿಯಲ್ಲಿ ನಡೆದ ಘಟನೆ ನಿಜಕ್ಕೂ ದುರದೃಷ್ಟಕರ ಎಂದು ಅಸಮಾಧಾನ ಹೊರಹಾಕಿದರು. ವಾರಾಣಸಿಯಲ್ಲಿ ಕೇವಲ ಶಿವನನ್ನು ಪೂಜಿಸಬೇಕು. ಧರ್ಮಗ್ರಂಥಗಳ ಪ್ರಕಾರ ಸಾಯಿಬಾಬಾ ಪೂಜೆ ನಿಷಿದ್ಧ. ಅದರ ಜ್ಞಾನವಿಲ್ಲದೆ ಪೂಜೆ ನಡೆಸಲಾಗುತ್ತಿತ್ತು ಎಂದು ಪ್ರತಿಮೆ ತೆರವು ಅಭಿಯಾನ ಆರಂಭಿಸಿರುವ ‘ಸನಾತನ ರಕ್ಷಕ ದಳ’ ವಾದಿಸುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?