ರಾಷ್ಟ್ರಪತಿ ಭವನಕ್ಕೂ ಕೊರೋನಾ ಭಯ!

Published : Apr 19, 2020, 07:55 AM ISTUpdated : Apr 19, 2020, 07:59 AM IST
ರಾಷ್ಟ್ರಪತಿ ಭವನಕ್ಕೂ ಕೊರೋನಾ ಭಯ!

ಸಾರಾಂಶ

ರಾಷ್ಟ್ರಪತಿ ಭವನಕ್ಕೂ ಕೊರೋನಾ ಭಯ| ಭವನದ ಕಾರ್ಮಿಕನ ಬಂಧು ಕೊರೋನಾಗೆ ಬಲಿ| ಈತನ ಅಂತ್ಯಕ್ರಿಯೆಗೆ ಹೋಗಿದ್ದ ಕಾರ್ಮಿಕ| ಕಾರ್ಮಿಕ ಕ್ವಾರಂಟೈನ್‌ಗೆ, ಈತನ ಮನೆ ಸೀಲ್‌

ನವದೆಹಲಿ(ಏ.19): ರಾಷ್ಟ್ರಪತಿ ಭವನಕ್ಕೆ ಮತ್ತೆ ಕೊರೋನಾ ವೈರಸ್‌ ಭೀತಿ ಶುರುವಾಗಿದೆ. ಭವನದ ಸ್ವಚ್ಛತಾ ಕಾರ್ಮಿಕನೊಬ್ಬನ ಬಂಧು ಕೊರೋನಾದಿಂದ ಮೃತಪಟ್ಟಿರುವುದೇ ಈ ಆತಂಕಕ್ಕೆ ಕಾರಣವಾಗಿದೆ.

ವಿಷಯ ತಿಳಿದ ಕೂಡಲೇ ಈ ಸ್ವಚ್ಛತಾ ಕಾರ್ಮಿಕ ಹಾಗೂ ಆತನ ಕುಟುಂಬವನ್ನು ಭವನದ ಆವರಣದಲ್ಲೇ ಇರುವ ಮನೆಯಲ್ಲಿ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ ಹಾಗೂ ಆತನ ಮನೆಯ ಸುತ್ತಲಿನ ಪ್ರದೇಶವನ್ನು ಸೀಲ್‌ ಮಾಡಲಾಗಿದೆ. ಇದೇ ಪ್ರದೇಶದಲ್ಲಿರುವ ಇತರ 30 ಮನೆಗಳ ಜನರನ್ನು ಸ್ವಯಂಪ್ರೇರಿತ ಏಕಾಂತವಾಸದಲ್ಲಿ ಇರುವಂತೆ ಸೂಚಿಸಲಾಗಿದೆ.

ದೇಶದಲ್ಲಿ ಕೊರೋನಾಗೆ 500 ಸಾವು, 15,000 ಮಂದಿಗೆ ಸೋಂಕು!

ಈ ಸ್ವಚ್ಛತಾ ಕಾರ್ಮಿಕ, ತನ್ನ ಮೃತ ಬಂಧುವಿನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ. ಅಲ್ಲದೆ, ಈ ಬಂಧು ಆಸ್ಪತ್ರೆಯಲ್ಲಿ ಇರುವ ವೇಳೆ ಆತನ ಕುಟುಂಬದವರು ಆರೋಗ್ಯ ವಿಚಾರಿಸಿಕೊಂಡು ಬಂದಿದ್ದರು.

ಇತ್ತೀಚೆಗೆ ಕೊರೋನಾ ಪೀಡಿತ ಗಾಯಕಿ ಕನಿಕಾ ಕಪೂರ್‌ರನ್ನು ಭೇಟಿ ಮಾಡಿದ್ದ ಬಿಜೆಪಿ ಸಂಸದ ದುಷ್ಯಂತ ಸಿಂಗ್‌, ನಂತರ ರಾಷ್ಟ್ರಪತಿ ರಾಮನಾಥ ಕೋವಿಂದ್‌ರನ್ನು ಭೇಟಿ ಮಾಡಿದ್ದರು. ಆಗ ಕೋವಿಂದ್‌ಗೂ ಕೊರೋನಾ ಭಯ ಕಾಡಿ, 14 ದಿನದ ಏಕಾಂತವಾಸ ಘೋಷಿಸಿಕೊಂಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಉದ್ಯಮಿಗೆ ಲವ್‌ ಟ್ರ್ಯಾಪ್‌, ವೈರಲ್‌ ಆದ ಡಿಎಸ್‌ಪಿ ಕಲ್ಪನಾ ವರ್ಮಾ ಚಾಟ್‌..!
ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ