ಮಾಜಿ ಸಿಎಂ ಫಡ್ನವೀಸ್‌, ರಾವುತ್‌ ಭೇಟಿ: ರಾಜಕೀಯದಲ್ಲಿ ಸಂಚಲನ!

Published : Sep 27, 2020, 03:03 PM IST
ಮಾಜಿ ಸಿಎಂ ಫಡ್ನವೀಸ್‌, ರಾವುತ್‌ ಭೇಟಿ:  ರಾಜಕೀಯದಲ್ಲಿ ಸಂಚಲನ!

ಸಾರಾಂಶ

ಬಿಜೆಪಿಯ ಕಟು ಟೀಕಾಕಾರರಾದ ಶಿವಸೇನೆ ಸಂಸದ ಸಂಜಯ್‌ ರಾವುತ್ ಮಾಜಿ ಸಿಎಂ ಫಡ್ನವೀಸ್‌,‌ ಪರಸ್ಪರ ಭೇಟಿ| ಭಾರೀ ಸಂಚಲನ ಮೂಡಿಸಿದೆ ನಾಯಕರ ಭೇಟಿ

ಮುಂಬೈ(ಸೆ.27): ಎನ್‌ಡಿಎ ಮೈತ್ರಿಯಿಂದ ಹೊರಬಂದ ಬಳಿಕ ಬಿಜೆಪಿಯ ಕಟು ಟೀಕಾಕಾರರಾದ ಶಿವಸೇನೆ ಸಂಸದ ಸಂಜಯ್‌ ರಾವುತ್‌ ಹಾಗೂ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಶನಿವಾರ ಪರಸ್ಪರ ಭೇಟಿಯಾಗಿದ್ದಾರೆ. ಈ ವಿಚಾರವು ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

ಆದರೆ, ಶಿವಸೇನೆ ಮುಖವಾಣಿ ಸಾಮ್ನಾ ಸಂಪಾದಕರೂ ಆಗಿರುವ ರಾವುತ್‌ ಅವರು ಪಢ್ನವೀಸ್‌ ಅವರ ಸಂದರ್ಶನ ಬಯಸಿದ್ದರು. ಈ ಹಿನ್ನೆಲೆಯಲ್ಲಿ ಈ ಭೇಟಿ ನಡೆದಿದೆಯಷ್ಟೇ. ಇದು ರಾಜಕೀಯ ದೃಷ್ಟಿಯಿಂದ ನಡೆದ ಭೇಟಿಯಲ್ಲ ಎಂದು ಬಿಜೆಪಿಯ ರಾಜ್ಯ ವಕ್ತಾರ ಕೇಶವ್‌ ಉಪಾಧ್ಯೆ ಸ್ಪಷ್ಟಪಡಿಸಿದ್ದಾರೆ.

ಬಿಹಾರ ಚುನಾವಣೆ ಬಳಿಕ ಈ ಸಂದರ್ಶನದಲ್ಲಿ ಭಾಗಿಯಾಗುವುದಾಗಿ ಫಡ್ನವೀಸ್‌ ತಿಳಿಸಿದ್ದಾರೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದೇಶದಲ್ಲಿ ದಯನೀಯ ಸ್ಥಿತಿಗಿಳಿದ ಅನ್ನದಾತ, ಸಾಲ ಮರುಪಾವತಿಸಲು ಕಿಡ್ನಿ ಮಾರಿದ ರೈತ!
ಮಹಾತ್ಮಾ ಗಾಂಧಿ ನನ್ನ ಕುಟುಂಬ ಸದಸ್ಯರಲ್ಲ, ಜಿ ರಾಮ್ ಜಿ ಬಿಲ್ ವಿರೋಧಿಸಿ ಪ್ರಿಯಾಂಕ ಹೇಳಿದ್ದೇನು?