ಡಿ.19ರ ರಾಜಕೀಯ ಭೂಕಂಪಕ್ಕೆ ಮೋದಿ ಸರ್ಕಾರ ಪತನ, ಭವಿಷ್ಯ ನುಡಿದ ಸಂಜಯ್ ರಾವತ್

Published : Dec 17, 2025, 07:36 PM IST
Sanjay Raut Narendra Modi

ಸಾರಾಂಶ

ಡಿ.19ರ ರಾಜಕೀಯ ಭೂಕಂಪಕ್ಕೆ ಮೋದಿ ಸರ್ಕಾರ ಪತನ,, ಭವಿಷ್ಯ ನುಡಿದ ಸಂಜಯ್ ರಾವತ್, ಉದ್ಧವ್ ಠಾಕ್ರೆ ಬಣದ ನಾಯಕ ಸಂಜಯ್ ರಾವತ್ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಅಷ್ಟಕ್ಕೂ ರಾವತ್ ನೀಡಿದ ಕಾರಣವೇನು ಗೊತ್ತಾ?

ಮುಂಬೈ (ಡಿ.17) ಮೂರನೇ ಅವಧಿಯ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹಲವು ಹೊಸ ಯೋಜನೆಗಳೊಂದಿಗೆ ಭರ್ಜರಿಯಾಗಿ ಸಾಗುತ್ತಿದೆ. ದೇಶ ವಿದೇಶದಲ್ಲೂ ಮೋದಿ ಸರ್ಕಾರದ ಮನ್ನಣೆ, ಜನಪ್ರಿಯತೆ ಹೆಚ್ಚಿಸಿದೆ. ಇಷ್ಟೇ ಅಲ್ಲ ಮೂರನೇ ಅವಧಿ ಮೋದಿ ಸರ್ಕಾರದ ವೇಳೆ ನಡೆದ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಮೈಲುಗೈ ಸಾಧಿಸಿದೆ. ಇದೀಗ ಉದ್ಧವಾ ಠಾಕ್ರೆ ಶಿವಸೇನೆ ಬಣದ ನಾಯಕ ಸಂಜಯ್ ರಾವತ್ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಡಿಸೆಂಬರ್ 19ಕ್ಕೆ ರಾಜಕೀಯ ಭೂಕಂಪ ಸಂಭವಿಸಲಿದೆ. ಇದರ ಪರಿಣಾಮ ಮೋದಿ ಸರ್ಕಾರ ಪತನವಾಗಲಿದೆ ಎಂದು ಸಂಜಯ್ ರಾವತ್ ಭವಿಷ್ಯ ನುಡಿದಿದ್ದಾರೆ.

ಪೃಥ್ವಿರಾಜ್ ಚವ್ಹಾಣ್ ಬೆನ್ನಲ್ಲೇ ಸಂಜಯ್ ರಾವತ್ ಸ್ಫೋಟಕ ಹೇಳಿಕೆ

ಡೆಲ್ಲಿ ಪೊಲಿಟಿಕಲ್ ಸರ್ಕಲ್ ಜೊತೆಗಿನ ಮಾತುಕತೆಯಲ್ಲಿ ಸಂಜಯ್ ರಾವತ್ ಬಿಜೆಪಿ ಸರ್ಕಾರ ಪತನದ ಕುರಿತು ಭವಿಷ್ಯ ನುಡಿದಿದ್ದಾರೆ. ರಾಜಕೀಯ ಭೂಕಂಪದಲ್ಲಿ ಮೋದಿ ಸರ್ಕಾರ ಪನತವಾಗಲಿದೆ. ಡಿಸೆಂಬರ್ 19 ಅತ್ಯಂತ ಪ್ರಮುಖ ದಿನ ಎಂದಿದ್ದಾರೆ. ಅಮೆರಿಕದ ಮಧ್ಯಪ್ರವೇಶವಾಗಿದೆ. ಮಹತ್ವದ ಬದಲಾವಣೆಗಳು ನಡೆಯುತ್ತಿದೆ ಎಂದು ಸಂಜಯ್ ರಾವತ್ ಹೇಳಿದ್ದಾರೆ.

ನಾಯಕರಿಗೆ ದೆಹಲಿಯಲ್ಲೇ ಇರಲು ಸೂಚನೆ

ಬಿಜೆಪಿ ಈಗಾಗಲೇ ತನ್ನ ನಾಯಕರಿಗೆ ಮಹತ್ವದ ಸೂಚನೆ ನೀಡಿದೆ. ಪ್ರಮುಖ ನಾಯಕರು ದೆಹಲಿಯಲ್ಲೇ ಇರಲು ಸೂಚನೆ ನೀಡಿದ್ದಾರೆ. ಯಾರೂ ಕೂಡ ದೆಹಲಿ ಬಿಟ್ಟು ತೆರಳದಂತೆ ಸೂಚಿಸಿದ್ದಾರೆ ಎಂದು ಸಂಜಯ್ ರಾವತ್ ಹೇಳಿದ್ದಾರೆ. ಈ ಸೂಚನೆ ಬಿಜಿಪಿಯಲ್ಲೇ ಕೆಲ ಬದಲಾವಣೆಗಳ ಸೂಚನೆ ನೀಡುತ್ತಿದೆ ಎಂದು ಸಂಜಯ್ ರಾವತ್ ಊಹಿಸಿದ್ದಾರೆ.

ಬಾಂಬ್ ಸಿಡಿಸಿದ್ದ ಪೃಥ್ವಿರಾಜ್ ಚೌವ್ಹಾನ್

ಆಪರೇಶನ್ ಸಿಂದೂರ್ ಕುರಿತು ವಿವಾದಿತ ಹೇಳಿಕೆ ನೀಡಿ ಭಾರೀ ಟೀಕೆಗೆ ಗುರಿಯಾಗಿರುವ ಮಾಹಾರಷ್ಟ್ರ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಪೃಥ್ವಿರಾಜ್ ಚವ್ಹಾಣ್ ಬಿಜೆಪಿ ಬದಲಾವಣೆ ಈ ಕುರಿತು ಹೇಳಿಕೆ ನೀಡಿದ್ದಾರೆ. ಡಿಸೆಂಬರ್ 19ಕ್ಕೆ ಮಹತ್ವದ ರಾಜಕೀಯ ಕ್ರಾಂತಿಯಾಗಲಿದೆ. ಹೊಸ ಪ್ರಧಾನಿ ಬರಲಿದ್ದಾರೆ. ಮೋದಿ ಪ್ರಧಾನಿ ಅವಧಿ ಅಂತ್ಯವಾಗಲಿದೆ. ಮಹಾರಾಷ್ಟ್ರದ ಪ್ರಮುಖ ನಾಯಕ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ಪೃಥ್ವಿರಾಜ್ ಚವ್ಹಾಣ್ ಭವಿಷ್ಯ ನುಡಿದಿದ್ದರು. ಇದರ ಬೆನ್ನಲ್ಲೇ ಇದೀಗ ಸಂಜಯ್ ರಾವತ್ ಕೂಡ ಡಿಸೆಂಬರ್ 19ರಂದು ರಾಜಕೀಯ ಭೂಕಂಪ ಎಂದಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬುರ್ಖಾ ಹಾಕದೆ ಹೊರಗೆ ಹೋಗಿದ್ದಕ್ಕೆ ಪತ್ನಿ, ಇಬ್ಬರು ಹೆಣ್ಮಕ್ಕಳ ಕೊಂದ ಪಾಪಿ, ಮನೆಯ ಅಂಗಳದಲ್ಲಿ ಹೂತುಹಾಕಿದ!
ಭಾರಿ ಇಳಿಕೆ ಬಳಿಕ ಶಾಕ್ ಕೊಟ್ಟ ಚಿನ್ನದ ಬೆಲೆ, ಬೆಂಗಳೂರು-ಹೈದರಾಬಾದ್‌ನಲ್ಲಿ 6,500 ರೂ ಏರಿಕೆ