
ಮುಂಬೈ(ಜ.18): ಸ್ವಾತಂತ್ರ್ಯ ಯೋಧ ವೀರ ಸಾವರ್ಕರ್ ಅವರನ್ನು ವಿರೋಧಿಸುವವರನ್ನು ಎರಡು ದಿನ ಅಂಡಮಾನ್ ಜೈಲಿನಲ್ಲಿ ಇಡಬೇಕು ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.
ವೀರ ಸಾವರ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವುದಕ್ಕೆ ವಿರೋಧಿಸುವವರು ಎರಡು ದಿನ ಅಂಡಮಾನ್ ಜೈಲಿನಲ್ಲಿ ಇದ್ದು ಬರಲಿ ಎಂದು ರಾವತ್ ಗುಡುಗಿದ್ದಾರೆ.
ಸಾವರ್ಕರ್ ವಿರೋಧಿಗಳನ್ನು ಎರಡು ದಿನ ಅಂಡಮಾನ್ ಜೈಲಿನಲ್ಲಿ ಇಟ್ಟರೆ, ಅವರ ತ್ಯಾಗ ಬಲಿದಾನ ಹಾಗೂ ಅವರು ದೇಶಕ್ಕಾಗಿ ನೀಡಿದ ಕೊಡುಗೆ ಅರ್ಥವಾಗಲಿದೆ ಎಂದು ಸಂಜಯ್ ರಾವತ್ ಹರಿಹಾಯ್ದಿದ್ದಾರೆ.
ಸಾವರ್ಕರ್ ಬಗ್ಗೆ ಮಾತಾಡಿದ್ರೆ ಹುಷಾರ್: ಕಾಂಗ್ರೆಸ್’ಗೆ ಎಚ್ಚರಿಸಿದ ಶಿವಸೇನೆ!
ವೀರ ಸಾವರ್ಕರ್ ಅಂಡಮಾನ್ ಜೈಲಿನಿಂದ ಬಿಡುಗಡೆಗಾಗಿ ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಭಾರತ ರತ್ನ ನೀಡಬಾರದು ಎಂದು ಶಿವಸೇನೆಯ ಮಿತ್ರಪಕ್ಷ ಕಾಂಗ್ರೆಸ್ ಒತ್ತಾಯಿಸಿದೆ.
ಇನ್ನು ಸಂಜಯ್ ರಾವತ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಶಿವಸೇನೆ ನಾಯಕ ಆದಿತ್ಯ ಠಾಕ್ರೆ, ಕಾಂಗ್ರೆಸ್-ಶಿವಸೇನೆ ನಡುವೆ ರಾಜಕೀಯ ಭಿನ್ನಾಭಿಪ್ರಾಯವಿದ್ದರೂ, ರಾಜ್ಯದಲ್ಲಿ ಮೈತ್ರಿ ಸರ್ಕಾರ ಸುಭದ್ರವಾಗಿದೆ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ