
ನವದೆಹಲಿ(ಜ.10): ಇಂಟರ್ನೆಟ್ ಸೇವೆ ಸ್ಥಗಿತಗೊಂಡಿರುವ ಜಮ್ಮು ಮತ್ತು ಕಾಶ್ಮೀರದ ಸ್ಥಿತಿಗತಿಯನ್ನು ಪರಾಮರ್ಶೆ ನಡೆಸುವಂತೆ ಸುಪ್ರೀಂಕೋರ್ಟ್ ಕಾಶ್ಮೀರ ಆಡಳಿತಕ್ಕೆ ಸೂಚನೆ ನೀಡಿದೆ.
ಇಂಟರ್ನೆಟ್ ಸೇವೆ ಪಡೆಯುವುದು ಸಂವಿಧಾನದ 19ನೇ ಪರಿಚ್ಛೇದದ ಅನ್ವಯ ನಾಗರಿಕರ ಮೂಲಭೂತ ಹಕ್ಕು. ಸಮಂಜಸವಾದ ನಿರ್ದಿಷ್ಟ ಕಾರಣಗಳಿಗೆ ಮಾತ್ರ ಇಂಟರ್ನೆಟ್ ಸೇವೆಗಳಿಗೆ ನಿರ್ಬಂಧ ಹೇರಬಹುದಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಿದ್ದ ಕೇಂದ್ರ ಸರ್ಕಾರ, ಇಂಟರ್ನೆಟ್ ಸೇವೆಗಳಿಗೆ ಹೇರಿದ್ದ ನಿರ್ಬಂಧವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, 7 ದಿನಗಳೊಳಗೆ ಕಣಿವೆಯ ಸ್ಥಿತಿಗತಿಯ ಪರಾಮರ್ಶೆ ನಡೆಸುವಂತೆ ಜಮ್ಮು-ಕಾಶ್ಮೀರ ಆಡಳಿತಕ್ಕೆ ಸೂಚನೆ ನೀಡಿದೆ.
ಕಾಶ್ಮೀರಕ್ಕೆ ಉಪಗ್ರಹದಿಂದ ಇಂಟರ್ನೆಟ್: ಆಫರ್ ನೀಡಿ ಜೋಕರ್ ಆದ ಪಾಕ್ ಸಚಿವ!
ಇದೇ ವೇಳೆ ಇಂಟರ್ನೆಟ್ ಸೇವೆ ಸ್ಥಗಿತದ ಹಿಂದಿನ ರಾಜಕೀಯ ವಿಚಾರಗಳ ಕುರಿತು ನ್ಯಾಯಾಲಯ ತನಿಖೆ ಮಾಡಲು ಹೋಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.
ಇನ್ನು ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿರುವ ಪ್ರತಿಪಕ್ಷ ಕಾಂಗ್ರೆಸ್, ಇಡೀ ದೇಶ ಸಂವಿಧಾನಕ್ಕೆ ತಲೆಬಾಗುತ್ತದೆ ಎಂಬುದನ್ನು ಸುಪ್ರೀಂಕೋರ್ಟ್ ಪ್ರಧಾನಿ ಮೋದಿಗೆ ಸ್ಪಷ್ಟವಾಗಿ ತಿಳಿಸಿದೆ ಎಂದು ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ